Strike; ಸಾರಿಗೆ ನೌಕರರ ಮುಷ್ಕರ ಅನಿವಾರ್ಯ: ಸಮಿತಿ ಎಚ್ಚರಿಕೆ
ರಾಜ್ಯ ಸರಕಾರದ ವಿರುದ್ಧ ತೀವ್ರ ಆಕ್ರೋಶ
Team Udayavani, Aug 28, 2024, 2:10 PM IST
ಹುಬ್ಬಳ್ಳಿ: ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ, ನಿಗಮಗಳಿಗೆ ಬಾಕಿ ಹಾಗೂ ಶಕ್ತಿ ಯೋಜನೆ ಬಾಕಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ಸಾರಿಗೆ ನೌಕರರ ಮುಷ್ಕರ ಅನಿವಾರ್ಯವಾಗಲಿದೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ.
ಬುಧವಾರ(ಆ 28)ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಮುಖಂಡರಾದ ದೇವರಾಜೆ ಅರಸು, ವಿಜಯ ಭಾಸ್ಕರ, ಮಂಜುನಾಥ ಅವರು, ನೌಕರರಿಗೆ 2020ರಲ್ಲಿ ಶೇ.15 ರಷ್ಟು ವೇತನ ಪರಿಷ್ಕರಣೆ ಮಾಡಲಾಗಿದ್ದು, ಸುಮಾರು 38 ತಿಂಗಳ ಹಿಂಬಾಕಿ ಬಿಡುಗಡೆ ಮಾಡಿಲ್ಲ.2024ರ ಜನೆವರಿಯಲ್ಲಿ ವೇತನ ಪರಿಷ್ಕರಣೆ ಆಗಬೇಕಾಗಿದ್ದು ಯಾವುದೇ ಕ್ರಮ ಇಲ್ಲವಾಗಿದೆ ಎಂದರು.
ಸಾರಿಗೆ ನಿಗಮಗಳಿಗೆ ಅಂದಾಜು 4,927 ಕೋಟಿ ರೂ., ಬಾಕಿ ಬರಬೇಕಾಗಿದೆ. ಶಕ್ತಿ ಯೋಜನೆಯಡಿ 1,500 ಕೋಟಿರೂ., ಹಾಗೂ ಸರಬರಾಜುದಾರರು, ಇಂಧನ ಬಾಕಿ 150 ಗಳನ್ನು ಬಿಡುಗಡೆ ಮಾಡಬೇಕು.ಸೆ.12ರಂದು ಜಂಟಿ ಕ್ರಿಯಾ ಸಮಿತಿಯಿಂದ ಬೆಂಗಳೂರಿನ ಫ್ರೀಡಮ್ ಪಾರ್ಕ್ ನಲ್ಲಿ ಒಂದು ದಿನದ ಧರಣಿ ಮಾಡುತ್ತಿದ್ದು, ಸರ್ಕಾರ ಸ್ಪಂದಿಸದಿದ್ದರೆ ಬಸ್ ಗಳ ಸಂಚಾರ ಸ್ಥಗಿತಗೊಳಿಸಿ ಮುಷ್ಕರಕ್ಕಿಳಿಯುವುದು ಅನಿವಾರ್ಯ ಆಗಲಿದೆ.
ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಲೇ ಸಾರಿಗೆ ನೌಕರರನ್ನು ಸಂಪೂರ್ಣವಾಗಿ ಕಡೆಗಣಿಸಿರುವುದಕ್ಕೆ ಜಂಟಿ ಕ್ರಿಯಾ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna ವಿರುದ್ಧ 3ನೇ ದೋಷಾರೋಪ ಪಟ್ಟಿ
High Court ಅನುಕಂಪದ ಆಧಾರದಲ್ಲಿ ಸೊಸೆ ಉದ್ಯೋಗಕ್ಕೆ ಅರ್ಹಳಲ್ಲ
BJP ಭಿನ್ನಮತ ಸ್ಫೋಟ ಬೆನ್ನಲ್ಲೇ ದಿಲ್ಲಿಗೆ ಹಾರಿದ ಬಿ.ವೈ ವಿಜಯೇಂದ್ರ
HSRP ಅಳವಡಿಕೆ: ನಾಳೆ ಕೊನೆ ದಿನ; ಅವಧಿ ವಿಸ್ತರಣೆ ಆಗುತ್ತಾ ಅಥವಾ ದಂಡ ಪ್ರಯೋಗವೇ?
New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲು: ಕೇಂದ್ರ ಸಚಿವ ಸೋಮಣ್ಣ
MUST WATCH
ಹೊಸ ಸೇರ್ಪಡೆ
Udupi: ಕರ್ತವ್ಯಲೋಪ: 80 ಪೊಲೀಸ್ ಸಿಬಂದಿ ಅಮಾನತು; ಎಸ್ಪಿ ಕಟ್ಟುನಿಟ್ಟಿನ ಕ್ರಮ
Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು
Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು
Officers Meeting: ವಸತಿ ಯೋಜನೆ ಫಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ
Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.