ಚಂದ್ರಶೇಖರ ಗುರೂಜಿ ಹತ್ಯೆಯಾದ ಹೋಟೆಲ್ ನಲ್ಲಿ ಹೋಮ-ಹವನ
Team Udayavani, Jul 8, 2022, 2:49 PM IST
ಹುಬ್ಬಳ್ಳಿ: ವಾಸ್ತುಶಾಸ್ತ್ರಜ್ಞ ಚಂದ್ರಶೇಖರ ಗುರೂಜಿ ಅವರನ್ನು ಹತ್ಯೆ ಮಾಡಿದ ಹೋಟೆಲ್ ನಲ್ಲಿ ಶುಕ್ರವಾರ ಹೋಮ-ಹವನ ನಡೆಯಿತು.
ಗುರೂಜಿ ಅವರನ್ನು ಮಂಗಳವಾರ ಮಧ್ಯಾಹ್ನ ದುಷ್ಕರ್ಮಿಗಳಿಬ್ಬರು ಇಲ್ಲಿನ ಉಣಕಲ್ಲ ಕೆರೆ ಬಳಿಯ ಉಣಕಲ್ಲ-ಶ್ರೀನಗರ ಕ್ರಾಸ್ ನ ಹೋಟೆಲ್ ನ ಲಾಬಿಯಲ್ಲಿ ಚಾಕುವಿನಿಂದ 50-60 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿದ್ದರು. ಹೀಗಾಗಿ ಹೋಟೆಲ್ ನವರು ಶುಕ್ರವಾರ ಗುರೂಜಿ ಹತ್ಯೆಯಾದ ಸ್ಥಳದಲ್ಲೇ ಹೋಮ-ಹವನ ನೆರವೇರಿಸಿದರು.
ಇದನ್ನೂ ಓದಿ:ಪ್ರತಿಷ್ಠಿತ ಹೋಟೆಲ್ಗಳು ಎಷ್ಟು ಸುರಕ್ಷಿತ?
ಗುರೂಜಿಯ ಬರ್ಬರ ಹತ್ಯೆ ನಡೆದ ಹಿನ್ನೆಲೆಯಲ್ಲಿ ಹೋಟೆಲ್ ನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ದೈವದ ಮೊರೆ ಹೋದರು. ಈ ಘಟನೆಯಿಂದ ಹೊಟೇಲ್ ನ ಸಿಬ್ಬಂದಿ ತೀವ್ರ ಹೆದರಿ ಆತಂಕಗೊಂಡಿದ್ದರು. ಅಲ್ಲದೆ ಹೋಟೆಲ್ ನಲ್ಲಿ ನಿರ್ಮಾಣವಾಗಿದ್ದ ಭಯದ ವಾತಾವರಣ ದೂರಮಾಡಲು ಮತ್ತು ಹೋಟೆಲ್ ಶುದ್ಧಗೊಳಿಸಲು ಹೆಸರಾಂತ ಇಬ್ಬರು ಪುರೋಹಿತರಿಂದ ಸುದರ್ಶನ ಹೋಮ ಮಾಡಿಸಿ ಹೋಟೆಲ್ ಗೆ ಅಂಟಿದ ಕಳಂಕ ದೂರಮಾಡುವ ಪ್ರಯತ್ನ ಮಾಡಿದರು. ಮುಂದೆ ಇಂತಹ ಘಟನೆಗಳು ನಡೆಯದಂತೆ ಹಾಗೂ ಹೊಟೇಲ್ ಸುಸೂತ್ರವಾಗಿ ಮುಂದುವರೆಯಲಿ ಎಂದು ಸುದರ್ಶನ ಹೋಮ ಮಾಡಿಸಿದರು ಎಂದು ತಿಳಿದು ಬಂದಿದೆ.
ಬಂಧಿತರ ತೀವ್ರ ವಿಚಾರಣೆ: ಗುರೂಜಿ ಹತ್ಯೆಗೆ ಸಂಬಂದಿಸಿ ಬಂಧಿತರಾದ ಇಬ್ಬರು ಹಂತಕರನ್ನು ಪೊಲೀಸರು ಕಳೆ ಎರಡು ದಿನಗಳಿಂದ ವಿವಿಧ ಆಯಾಮಗಳಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಆಸ್ತಿ ಹಾಗೂ ಹಣಕಾಸಿನ ವಿಚಾರವಾಗಿ ಗುರೂಜಿ ಹಾಗೂ ಅವರ ಸಹಚರರು ತೀವ್ರ ಕಿರುಕುಳ ಕೊಡುತ್ತಿದ್ದರು. ಹೀಗಾಗಿ ಹತ್ಯೆ ಮಾಡಬೇಕಾಯಿತು ಎಂದು ಬಂಧಿತರು ಹೇಳುತ್ತಿದ್ದಾರೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್-ಯುವಕನಿಗೆ ಮರುಜನ್ಮ
Minister V. Somanna: ಭಾರತೀಯ ರೈಲ್ವೇ ಜತೆ ಕೊಂಕಣ ರೈಲ್ವೇ ಶೀಘ್ರ ವಿಲೀನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.