Taekwondo; 37 ನೇ ನ್ಯಾಶನಲ್ ಗೇಮ್ಸ್ ಗೆ ಧಾರವಾಡದ ಇಬ್ಬರು ಆಯ್ಕೆ


Team Udayavani, Sep 15, 2023, 5:05 PM IST

1-sasad

ಧಾರವಾಡ : ಪ್ರತಿ 4 ವರ್ಷಕ್ಕೊಮ್ಮೆ ನಡೆಯುವ 37ನೇ ನ್ಯಾಶನಲ್ ಗೇಮ್ಸ್ ಗೋವಾ-2023ಕ್ಕೆ ಕರ್ನಾಟಕದಿಂದ ಟೇಕ್ವಾಂಡೋ ಕ್ರಿಡೆಯಲ್ಲಿ ನಾಲ್ಕು ಕ್ರೀಡಾಪಟುಗಳ ಪೈಕಿ ಇಬ್ಬರು ಧಾರವಾಡ ಜಿಲ್ಲೆಯವರು ಆಯ್ಕೆಯಾಗಿದ್ದಾರೆ.

ಧಾರವಾಡ ಜಿಲ್ಲಾ ಟೇಕ್ವಾಂಡೋ ಸಂಸ್ಥೆಯ ಅದಿತಿ ಪರಪ್ಪ ಕ್ಷಾತ್ರತೇಜ್ ಹಾಗೂ ದಿತೀಷ ಶೆಟ್ಟಿ ಕ್ರೀಡಾಪಟುಗಳೇ ಆಯ್ಕೆಯಾದವರು. ಸೆ.9 ರಿಂದ ಸೆ.11 ರವರೆಗೆ ಅಸ್ಸಾಂನ ಗುವಾಹಟಿಯಲ್ಲಿ ನಡೆದ 39 ನೇ ರಾಷ್ಟ್ರಮಟ್ಟದ ಸೀನಿಯರ್ ಟೇಕ್ವಾಂಡೋ ಕ್ರೀಡಾಕೂಟದಲ್ಲಿ ಈ ಕ್ರೀಡಾಪಟುಗಳಿಬ್ಬರು ಪಾಲ್ಗೊಂಡಿದ್ದರು. ಈ ಪೈಕಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಅದಿತಿ ಬೆಳ್ಳಿ ಪದಕ ಪಡೆದಿದ್ದು, ಪುರುಷರ 80 ಕೆಜಿ ವಿಭಾಗದಲ್ಲಿ ದಿತೀಷ ಶೆಟ್ಟಿ ಪಾಲ್ಗೊಂಡು ಕ್ವಾಟರ್ ಫೈನಲ್‌ವರೆಗೂ ತಲುಪಿದ್ದರು. ಈ ಹಿನ್ನಲೆಯಲ್ಲಿ ಕ್ರೀಡಾಪಟುಗಳಿಬ್ಬರು ಈಗ ಮುಂಬರುವ (ಅಕ್ಟೋಬರ್ ತಿಂಗಳಲ್ಲಿ) 37 ನೇ ನ್ಯಾಶನಲ್ ಗೇಮ್ಸ್ ಗೋವಾ-2023 ಕ್ಕೆ ಕರ್ನಾಟಕ ರಾಜ್ಯವನ್ನು ಪ್ರತಿನಿಽಸಲು ಆಯ್ಕೆಯಾಗಿದ್ದಾರೆ. ಇನ್ನು ಗುವಾಹಟಿಗೆ ಕರ್ನಾಟಕ ತಂಡದ ತರಬೇತುದಾರರಾಗಿ ಅಂಜಲಿ ಪರಪ್ಪ ಕ್ಷಾತ್ರತೇಜ್ ಹಾಗೂ ತಂಡದ ವ್ಯವಸ್ಥಾಪಕರಾಗಿ ಶೋಭಾ ರಸಾಳಕರ್ ತೆರಳಿದ್ದರು.

ತರಬೇತುದಾರ ಪರಪ್ಪ ಹಾಗೂ ನಿರ್ಣಾಯಕಿ ಆಗಿರುವ ಅಂಜಲಿ ದಂಪತಿಯ ಪುತ್ರಿಯೇ ಅದಿತಿ ಕ್ಷಾತ್ರತೇಜ್. ಪುತ್ರಿಯ ಈ ಸಾಧನೆಗೆ ಪೋಷಕರೇ ಬೆನ್ನಲೆಬಾಗಿ ನಿಂತಿದ್ದು, ಅದಿತಿಯ ಶ್ರಮಕ್ಕೆ ಅಗತ್ಯ ಸಹಕಾರ ನೀಡುತ್ತಿದ್ದಾರೆ. ಇದಲ್ಲದೇ ಜಿಲ್ಲಾ ಟೇಕ್ವಾಂಡೋ ಸಂಸ್ಥೆಯಲ್ಲಿ ಅದಿತಿ ಅಗತ್ಯ ತರಬೇತಿ ಪಡೆಯುತ್ತಿರುವುದು ವಿಶೇಷತೆ. ಇನ್ನು ಪಾನ್‌ಶಾಪ್ ಮಾಲಕ ದಿನಕರ್ ಶೆಟ್ಟಿ ಹಾಗೂ ಶ್ರೀಮತಿ ದಂಪತಿಯ ಮಗನೇ ದಿತೀಷ ಶೆಟ್ಟಿ ಆಗಿದ್ದು, ಈ ಸಾಧನೆ ಪೋಷಕರಲ್ಲಿ ಸಂತಸ ಇಮ್ಮಡಿಗೊಳಿಸಿದೆ.

ಇನ್ನು ಈ ಸಾಧನೆ ಮಾಡಿದ ಕ್ರೀಡಾಪಟುಗಳಿಬ್ಬರನ್ನು ಹೊರತುಪಡಿಸಿ ಜಿಲ್ಲಾ ಟೇಕ್ವಾಂಡೋ ಸಂಸ್ಥೆಯಿಂದ ಸುಪ್ರಿತ ಥಿಟೆ (58 ಕೆಜಿ ವಿಭಾಗ), ಸ್ಪೂರ್ತಿ ನಿಕ್ಕಂ (49 ಕೆಜಿ ವಿಭಾಗ), ಸಹನಾ ಗೋಕಾವಿ (67 ಕೆಜಿ ವಿಭಾಗ), ನಿರಂಜನ್ ಆನಿಕಿವಿ (87 ಕೆಜಿ ವಿಭಾಗ), ನಮಿತಕುಮಾರ್ ಸುಣಗಾರ (63 ಕೆಜಿ ವಿಭಾಗ) ಕೂಡ 39ನೇ ರಾಷ್ಟ್ರಮಟ್ಟದ ಸೀನಿಯರ್ ಟೇಕ್ವಾಂಡೋ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಉತ್ತಮ ಪ್ರದರ್ಶನ ನೀಡಿದ್ದಾರೆ.
ಈ ಎಲ್ಲ ಕ್ರೀಡಾಪಟುಗಳಿಗೆ ಜಿಲ್ಲಾ ಟೇಕ್ವಾಂಡೋ ಸಂಸ್ಥೆಯ ಅಧ್ಯಕ್ಷ ಆನಂದ ಕುಲಕರ್ಣಿ, ಉಪಾಧ್ಯಕ್ಷ ಬಿ.ಎಸ್.ತಾಳಿಕೋಟಿ, ಹಿರಿಯ ತರಬೇತುದಾರ ಸಂಸ್ಥಾಪಕ ಪರಪ್ಪ ಎಸ್.ಕೆ. ಸೇರಿದಂತೆ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.