ತಹಶೀಲ್‌ ಕಚೇರಿ ಡಿಜಿಟಲ್‌


Team Udayavani, Oct 9, 2017, 12:30 PM IST

hhu2.jpg

ಹುಬ್ಬಳ್ಳಿ: ಆಡಳಿತದಲ್ಲಿ ಪಾರದರ್ಶಕತೆ, ಸಾರ್ವಜನಿಕರಿಗೆ ಕಾಲ ಮಿತಿಯಲ್ಲಿ ಸೇವೆ ನೀಡುವ ನಿಟ್ಟಿನಲ್ಲಿ ಹುಬ್ಬಳ್ಳಿ ತಹಶೀಲ್ದಾರ್‌ ಕಚೇರಿ ಸಂಪೂರ್ಣ ಡಿಜಿಟಲೀಕರಣ ಗೊಂಡಿದ್ದು, ಜನಸಾಮಾನ್ಯರಿಗೆ ಅವಶ್ಯವಿರುವ ಸಂಪೂರ್ಣ ಕಂದಾಯ ದಾಖಲೆಗಳು ಗಣಕೀಕರಣಗೊಂಡ ಕಚೇರಿ ಎಂಬ ಹೆಗ್ಗಳಿಕೆ ಗಳಿಸಿದೆ.

ದಾಖಲೆಗಳನ್ನು ತಿರುಚುವುದು, ಹಳೆಯ ದಾಖಲೆ ಹುಡುಕಲು ವಿಳಂಬ, ದಾಖಲೆಗಳ ನಾಶ, ನಕಲಿ ದಾಖಲೆಗಳ ಸೃಷ್ಟಿ ಸೇರಿದಂತೆ ಇತರೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರಾತ್ಮಾಕವಾಗಿ ಜನಸಾಮಾನ್ಯರಿಗೆ ಅವಶ್ಯರುವ ಸಂಪೂರ್ಣ ಭೂ ದಾಖಲೆಗಳನ್ನು ಗಣಕೀರಣಗೊಳಿಸಿದ ಖ್ಯಾತಿಯನ್ನು ಹುಬ್ಬಳ್ಳಿ ತಹಶೀಲ್ದಾರ ಕಚೇರಿ ಗಳಿಸಿದೆ. 

ಶಶಿಧರ ಮಾಡ್ಯಾಳ ಮುತುವರ್ಜಿಯಿಂದ ಖಾಸಗಿಯವರಿಂದ ನೆರವು ಪಡೆದು ಸುಮಾರು 14 ಲಕ್ಷ ರೂ. ವೆಚ್ಚದಲ್ಲಿ ಜನರಿಗೆ ಅಗತ್ಯವಿರುವ ಸುಮಾರು 9.80 ಲಕ್ಷ ಪ್ರತಿಗಳು ಡಿಜಿಟಲೀಕರಣಗೊಂಡಿವೆ. 1930 ರಿಂದ 2001ರ ವರೆಗಿನ ಪಹಣಿ, ಜನನ-ಮರಣ ಪ್ರಮಾಣ ಪತ್ರ ಸೇರಿದಂತೆ ಹಳೇ ದಾಖಲೆಗಳು ಇದೀಗ ಕ್ಷಣಾರ್ಧದಲ್ಲೇ ಅರ್ಜಿದಾರರಿಗೆ ದೊರೆಯಲಿವೆ.

ಒಂದೇ ದಿನಕ್ಕೆ ದಾಖಲೆ: ಬ್ಯಾಂಕ್‌ ಸಾಲ, ಭೂ ಪರಿವರ್ತನೆ, ಕೃಷಿ ಸಾಲ, ಹಕ್ಕು ಪ್ರಾಪ್ತಿ ಸೇರಿದಂತೆ ಹಲವು ಕೆಲಸಗಳಿಗೆ ಬೇಕಾದ ಅಗತ್ಯದಾಖಲೆಗಳನ್ನು ಪಡೆಯುವುದು ತೀರ ಸುಲಭವಾಗಿದೆ. ಅರ್ಜಿ ಸಲ್ಲಿಸಿ ಒಂದು ದಾಖಲೆಗಾಗಿ ನಾಲ್ಕೈದು ಬಾರಿ ಕಚೇರಿಗೆ ಅಲೆಯುವುದು ತಪ್ಪಿದಂತಾಗಿದೆ.

ದಾಖಲೆ ನೀಡಲು ವಿಳಂಬ ಮಾಡುತ್ತಿದ್ದ ಸಿಬ್ಬಂದಿ ಇನ್ನು ಮುಂದೆ ಯಾವುದೇ ಸಬೂಬು ನೀಡಿ ನುಣುಚಿಕೊಳ್ಳಲು ಸಾಧ್ಯವಿಲ್ಲ. ಡಿಜಿಟಲೀಕರಣ ಆಗಿರುವುದರಿಂದ ಅರ್ಜಿ ಸಲ್ಲಿಸಿದ ದಿನವೇ ಬೇಕಾದ ದಾಖಲಾತಿಗಳು ಅರ್ಜಿದಾರನಿಗೆ ದೊರೆಯುವಂತಾಗಿದೆ.

ಆಡಳಿತ ಸರಳ: ಡಿಜಿಟಲೀಕರಣ ಗೊಂಡಿರುವುದರಿಂದ ಆಡಳಿತದಲ್ಲಿ ಕೂಡ ಸಾಕಷ್ಟು ಬದಲಾವಣೆಯಾಗಿದೆ. ಹಳೆ  ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಿದಾಗ ತಿಂಗಳು ಕಾಲ ದಾಖಲೆ ಹುಡುಕಾಟಕ್ಕೆ ಬೇಕಾಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಕೆಲ ಸಿಬ್ಬಂದಿ ಸಮಯಾವಕಾಶ ಬೇಕಾಗುತ್ತದೆ ಎಂದು ಜಾರಿಗೊಳ್ಳುತ್ತಿದ್ದರು. ಇದೀಗ ಬೆರಳ ತುದಿಯಲ್ಲೇ ಮಾಹಿತಿ ದೊರೆಯುವುದರಿಂದ ಹಳೆಯ ದಾಖಲೆಗಳನ್ನು ಹುಡುಕುವ  ಕಾರ್ಯದಿಂದ ಸಿಬ್ಬಂದಿ ಮುಕ್ತರಾಗಿದ್ದಾರೆ. ಸಿಬ್ಬಂದಿಗೆ ಸಾಕಷ್ಟು ಕಾರ್ಯಭಾರ ಕೂಡ ಕಡಿಮೆಯಾಗಿದೆ.

ದಾಖಲೆಗಳ ನಾಶ: 1930ನೇ ಇಸ್ವಿಯ ದಾಖಲೆಗಳನ್ನು ಕಾಪಾಡಿಕೊಳ್ಳುವುದು ಸುಲಭದ ಕಾರ್ಯವಲ್ಲ. ಅಗತ್ಯ  ದಾಖಲೆಗಳು ನಾಶವಾಗುವ ಸಾಧ್ಯತೆ ಹೆಚ್ಚು. ಹೀಗಾಗಿ ಮೂಲ ದಾಖಲೆಗಳನ್ನು ಹಾಳಾಗಾದಂತೆ ಇಡುವುದು ಅಧಿಕಾರಿಗಳಿಗೆ ದೊಡ್ಡ ಸವಾಲಿನ ಕೆಲಸವಾಗಿತ್ತು. 

ಬೆಂಕಿ ಅವಘಡದಿಂದ ದಾಖಲೆಗಳು ನಾಶವಾಗಿರುವ ಅನೇಕ ಉದಾಹರಣೆಗಳಿವೆ. ಇದೀಗ ಡಿಜಿಟಲೀಕರಣ ಆಗಿರುವುದರಿಂದ ಯಾವುದೇ ಕಾರಣಕ್ಕೂ ದಾಖಲೆಗಳನ್ನು ನಾಶ ಪಡಿಸಲು ಸಾಧ್ಯವಿಲ್ಲ.  ಗಣಕೀಕೃತಗೊಂಡ ದಾಖಲೆಗಳನ್ನು ನೀಡಲು ಓರ್ವ ಸಿಬ್ಬಂದಿಗೆ ಮಾತ್ರ ಅವಕಾಶ ನೀಡಲಾಗಿದೆ.

ಹೀಗಾಗಿ ದಾಖಲೆಗಳನ್ನು ತಿರುಚುವುದು ಅಥವಾ ನಾಶಪಡಿಸಲು ಸಾಧ್ಯವಿಲ್ಲ. ಸಲ್ಲಿಸಿದ ಅರ್ಜಿಗೆ ಪೂರಕವಾದ ದಾಖಲೆಗಳನ್ನು ನೀಡುವುದನ್ನು ಬಿಟ್ಟು ಹೆಚ್ಚುವರಿ ಕೆಲಸ ಮಾಡಲು ಇಲ್ಲಿ ಸಾಧ್ಯವಿಲ್ಲ. ತಹಶೀಲ್ದಾರ್‌ ಅಡ್ಮಿನ್‌ ಆಗಿದ್ದು, ತಾಂತ್ರಿಕ ಕಾರಣಗಳು ಉಂಟಾದಾಗ ಮಾತ್ರ ದಾಖಲೆಗಳನ್ನು ಪರಿಶೀಲನೆ ಮಾಡುವುದಾಗಿದೆ. 

* ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.