ವಿಭಾಗ ಮಟ್ಟದ ಕಾಲೇಜು ನಾಟಕ ಸ್ಪರ್ಧೆಗೆ ಚಾಲನೆ
Team Udayavani, Feb 14, 2017, 1:21 PM IST
ಧಾರವಾಡ: ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಧಾರವಾಡ ರಂಗಾಯಣ ಆಯೋಜಿಸಿರುವ 6 ದಿನಗಳ ವಿಭಾಗ ಮಟ್ಟದ ಕಾಲೇಜು ನಾಟಕ ಸ್ಪರ್ಧೆಗೆ ನಗರದ ರಂಗಾಯಣದ ಪಂ| ರಾಜಗುರು ಬಯಲು ರಂಗಮಂದಿರದಲ್ಲಿ ಸೋಮವಾರ ಚಾಲನೆ ದೊರೆಯಿತು.
ಚಾಲನೆ ನೀಡಿದ ರಂಗ ನಿರ್ದೇಶಕ ನಟರಾಜ ಹೊನ್ನವಳ್ಳಿ ಮಾತನಾಡಿ, ಉತ್ತಮ ನಾಟಕಗಳ ಪ್ರದರ್ಶನಗಳಿಗೆ ಉತ್ತಮವಾದ ಸುಸಜ್ಜಿತ ರಂಗಮಂದಿರದ ಅವಶ್ಯಕತೆ ಇದೆ. ನಾಟಕಗಳ ಆಯ್ಕೆಯ ಬದಲಾವಣೆಯ ಜೊತೆಗೆ ನೋಡುಗರ ಮನಸ್ಥಿತಿಯೂ ಬದಲಾಗಬೇಕು ಎಂದರು.
ಕವಿಸಂನ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಕವು ಕೇವಲ ಸ್ಪರ್ಧೆಯ ವಿಷಯವಾಗಿರದೇ ಯುವ ಪೀಳಿಗೆಯ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗಬೇಕು ಎಂದರು. ರಂಗಾಯಣದ ನಿರ್ದೇಶಕ ಡಾ| ಪ್ರಕಾಶ ಗರುಡ ಅಧ್ಯಕ್ಷತೆ ವಹಿಸಿದ್ದರು.
ಸ್ಪರ್ಧೆಯ ನಿರ್ಣಾಯಕರಾದ ರಾಮಕೃಷ್ಣ ಮರಾಠೆ, ಪುರುಷೋತ್ತಮ ತಲವಾಟ, ಎಸ್. ಮಾಲತಿ ಇದ್ದರು. ರಂಗಾಯಣದ ಆಡಳಿತಾಧಿಕಾರಿ ಬಸವರಾಜ ಹೂಗಾರ್ ಸ್ವಾಗತಿಸಿದರು. ಹಿಪ್ಪರಗಿ ಸಿದ್ದರಾಮ ನಿರೂಪಿಸಿ, ವಂದಿಸಿದರು.
ಧಾರವಾಡ ರಂಗಾಯಣದ ವ್ಯಾಪ್ತಿಯಲ್ಲಿ ಬರುವ ಏಳು ಜಿಲ್ಲೆಗಳಾದ ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಬಾಗಲಕೋಟೆ, ವಿಜಯಪುರ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕಾಲೇಜು ವಿದ್ಯಾರ್ಥಿಗಳಿಂದ ಸೋಮವಾರದಿಂದ ಫೆ.18 ರವರೆಗೆ ಪ್ರತಿದಿನ ಸಂಜೆ 6:30ಗಂಟೆಗೆ ನಾಟಕ ಸ್ಪರ್ಧೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ
Flight: ಹುಬ್ಬಳ್ಳಿ-ಅಹ್ಮದಾಬಾದ್ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ
Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು
Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ
Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.