ಮಾದಕ ವಸ್ತುಗಳೆಂದರೆ ಕಿಸೆಯಲ್ಲಿ ಹಾವಿದ್ದಂತೆ


Team Udayavani, Jul 8, 2018, 5:04 PM IST

8-july-25.jpg

ಹಾವೇರಿ: ಮಾದಕ ವಸ್ತುಗಳ ವ್ಯಸನ ಎಂದರೆ ಕಿಸೆಯಲ್ಲಿ ಹಾವಿಟ್ಟುಕೊಂಡಂತೆ. ಅದು ಯಾವಾಗಲಾದರೂ ನಮಗೆ ಕೆಟ್ಟದನ್ನು ಮಾಡುವ ಸಾಧ್ಯತೆ ಇದ್ದೇ ಇರುತ್ತದೆ. ಹೀಗಾಗಿ ಶಾಶ್ವತವಾಗಿ ವ್ಯಸನದಿಂದ ಹೊರಬಂದು ಜೀವನ ಪೂರ್ತಿ ಶಾಂತಚಿತ್ತರಾಗಿ, ಸಮಾಜಮುಖಿಯಾಗಿ ಬಾಳಬೇಕು ಎಂದು ಜಿಲ್ಲಾಧಿಕಾರಿ ಡಾ| ಎಂ.ವಿ. ವೆಂಕಟೇಶ್‌ ಹೇಳಿದರು. ಇಲ್ಲಿಯ ಜಿಲ್ಲಾ ಕಾರಾಗೃಹದಲ್ಲಿ ಶನಿವಾರ ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಮಾದಕ ವಸ್ತು ವ್ಯಸನ ವಿರೋಧಿ ದಿನ ಹಾಗೂ ಪೂರ್ಣವಾಗಿ ವ್ಯಸನ ಬಿಡುವ ಕೈದಿಗಳ ಶಪಥಗೈಯುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಳೆಯುವ ಪರಿಸರ, ಸಿಗುವ ಮಾರ್ಗದರ್ಶನ ಹಾಗೂ ಉತ್ತಮ ಶಿಕ್ಷಣದಿಂದ ನಮ್ಮ ವ್ಯಕ್ತಿತ್ವ ರೂಪಗೊಳ್ಳುತ್ತದೆ. ಆದರೆ, ಕೆಲವು ವ್ಯಕ್ತಿಗಳಿಗೆ ಸರಿಯಾದ ಮಾರ್ಗದರ್ಶನ ಇಲ್ಲದೇ ಚಿಕ್ಕ ವಯಸ್ಸಿನಲ್ಲೇ ದುಶ್ಚಟಗಳ ದಾಸರಾಗಿ ಕೋಪ, ಕ್ರೋಧ, ಸ್ವಾರ್ಥ ಮನೋಭಾವ ಬೆಳೆಸಿಕೊಂಡಿರುತ್ತಾರೆ. ಇವುಗಳ ಪರಿಣಾಮ ಸಾಂದರ್ಭಿಕ ಒತ್ತಡಕ್ಕೆ ಒಳಗಾಗಿ ತಮಗೆ ಅರಿವಿಲ್ಲದೇ ಅಪರಾಧ ಪ್ರಕರಣಗಳಲ್ಲಿಭಾಗಿಗಳಾಗಿ ಜೈಲು ವಾಸಿಗಳಾಗಿರುತ್ತಾರೆ. ಇಂತಹ ಸಾಂದರ್ಭಿಕ ಒತ್ತಡಕ್ಕೆ ಸಿಲುಕಿ ಕೈದಿಗಳಾಗಿರುವ ನೀವು ನಿಮ್ಮ ತಪ್ಪನ್ನು ಅರಿತುಕೊಂಡು ಪರಿವರ್ತನೆಗೆ ಮುಂದಾಗಿರುವುದು ಶ್ಲಾಘನೀಯ ಎಂದು ಹೇಳಿದರು.

ಹಾವೇರಿ ಕಾರಾಗೃಹ ಪರಿವರ್ತನೆಯ ತಾಣವಾಗಿದೆ. ಆಧ್ಯಾತ್ಮಿಕ ಕೇಂದ್ರವಾಗಿ, ಕಾಯಕವೇ ಕೈಲಾಸ ತತ್ವ ಪರಿಪಾಲನೆಯ ಕೇಂದ್ರವಾಗಿದೆ. ಅಧಿಕಾರಿಗಳು, ಸ್ವಯಂಸೇವಾ ಸಂಸ್ಥೆಗಳ ಸುಧಾರಣೆಯ ಕಾರ್ಯಕ್ಕೆ ಕೈದಿಗಳಾದ ನೀವು ಸ್ಪಂದಿಸುತ್ತಿರುವುದೇ ಇದಕ್ಕೆ ಕಾರಣವಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ, ಕಾರಾಗೃಹ ಆತ್ಮಾವಲೋಕನದ ತಾಣ. ಪರಿವರ್ತನೆಯ ತಾಣ, ವ್ಯಕ್ತಿತ್ವ ರೂಪಿಸಿಕೊಳ್ಳುವ ತಾಣ. ಭಗತ್‌ಸಿಂಗ್‌ ಸೇರಿದಂತೆ ಹಲವಾರು ಸ್ವಾತಂತ್ರ್ಯ ಹೋರಾಟಗಾರರು, ಚಿಂತಕರು ಜೈಲುವಾಸದ ಸಂದರ್ಭದಲ್ಲಿ ತಮ್ಮ ವ್ಯಕ್ತಿತ್ವ ವಿಕಸನಗೊಳಿಸಿಕೊಂಡು ಹಲವಾರು ಅತ್ಯುತ್ತಮ ಕೃತಿಗಳನ್ನು ಜೈಲಿನಲ್ಲಿ ಇದ್ದಾಗಲೇ ರಚಿಸಿರುವ ಸಾಕಷ್ಟು ಉದಾಹರಣೆಗಳು ನಮ್ಮ ಮುಂದಿವೆ. ಈ ಮಹಾತ್ಮರಂತೆ ತಾವು ಸಹ ನಿಮ್ಮ ವ್ಯಕ್ತಿತ್ವ ಪರಿವರ್ತನೆಯ ತಾಣವಾಗಿ ಈ ಜೈಲು ವಾಸದ ಅವಧಿ ಯನ್ನು ಸಾರ್ಥಕವಾಗಿ ಬಳಸಿಕೊಂಡು, ಆಧ್ಮಾತ್ಮಿಕ ಹಸಿವು ಬೆಳೆಸಿಕೊಂಡು ಸುಂದರ ಬದುಕು ರೂಪಿಸಿಕೊಳ್ಳಲು ಸಂಕಲ್ಪ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಈಶ್ವರೀಯ ವಿಶ್ವವಿದ್ಯಾಲಯದ ಲೀಲಾ, ಮನೋ ವೈದ್ಯ ಡಾ| ವಿಜಯಕುಮಾರ ಬಳಿಗಾರ ವಿಶೇಷ ಉಪನ್ಯಾಸ ನೀಡಿದರು. ಸಮಾರಂಭದಲ್ಲಿ ವೈದ್ಯೆ ಡಾ| ಪಿ.ಲೀಲಾ, ಹಿರಿಯ ನಾಗರಿಕ ಹಾಗೂ ವಿಕಲಚೇತನರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ, ಜಿಲ್ಲಾ ವಾರ್ತಾಧಿಕಾರಿ ಡಾ| ಬಿ.ಆರ್‌. ರಂಗನಾಥ, ಪರಿವರ್ತನಾ ಮಹಿಳಾ ಸಂಘದ ಅಧ್ಯಕ್ಷೆ ಡಾ| ಉಮಾ ಬಳಿಗಾರ, ಇಡಾರಿ ಸಂಸ್ಥೆ ಅಧ್ಯಕ್ಷೆ ಪರಿಮಳ ಜೈನ್‌ ಹಾಗೂ ಇತರರಿದ್ದರು. ಜಿಲ್ಲಾ ಕಾರಾಗೃಹದ ಅಧೀಕ್ಷಕ ಟಿ.ಬಿ. ಭಜಂತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಬಂಧಿಗಳ ಶಪಥ
ಕಾರಾಗೃಹದ 206 ಪುರುಷ ಹಾಗೂ 18 ಮಹಿಳಾ ಬಂಧಿಗಳು ಸೇರಿದಂತೆ ಒಟ್ಟು 224 ಬಂಧಿಗಳು ಸ್ವಯಂ ಪ್ರೇರಿತರಾಗಿ ಮಾದಕ ವಸ್ತು ಸೇವನೆ ಒಳಗೊಂಡಂತೆ ಎಲ್ಲ ರೀತಿ ದುಶ್ಚಟ ತ್ಯಜಿಸಿರುವುದಾಗಿ ಪ್ರತಿಜ್ಞೆ ಮಾಡಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.