ರೈಲ್ವೆ ಗಾಲ್ಫ್ ಮೈದಾನಕ್ಕೆ ರಸ್ತೆ-ನೀರು ಸ್ಥಗಿತ ಅನಿವಾರ್ಯವಾದೀತು
Team Udayavani, Oct 10, 2017, 11:59 AM IST
ಹುಬ್ಬಳ್ಳಿ: ಇಲ್ಲಿನ ರೈಲ್ವೆ ಗಾಲ್ಫ್ ಮೈದಾನದಲ್ಲಿ ಬೆಳಗಿನ ಜಾವ ಸಾರ್ವಜನಿಕರ ವಾಯುವಿಹಾರಕ್ಕೆ ಅನಗತ್ಯ ಅಡ್ಡಿಯುಂಟು ಮಾಡುತ್ತಿರುವ ರೈಲ್ವೆ ಇಲಾಖೆ ವರ್ತನೆ ಖಂಡಿಸಿ ಮೈದಾನದ ಎದುರು ಸೋಮವಾರ ಪ್ರತಿಭಟಿಸಲಾಯಿತು. ಮೊಂಡುತನ ಮುಂದುವರಿದರೆ ಮೈದಾನಕ್ಕೆ ರಸ್ತೆ ಹಾಗೂ ನೀರು ಸರಬರಾಜು ಸ್ಥಗಿತಕ್ಕೆ ಪಾಲಿಕೆ ಮೇಲೆ ಒತ್ತಡ ತರುವ ಎಚ್ಚರಿಕೆ ನೀಡಲಾಯಿತು.
ರೈಲ್ವೆ ಗಾಲ್ಫ್ ಮೈದಾನದಲ್ಲಿ ಅನೇಕ ವರ್ಷಗಳಿಂದ ಸಾರ್ವಜನಿಕರು ವಾಯುವಿಹಾರ ಮಾಡುತ್ತ ಬಂದಿದ್ದು, ಕೆಲ ತಿಂಗಳಿಂದ ರೈಲ್ವೆ ಇಲಾಖೆಯವರು ಅಡ್ಡಿ ಪಡಿಸುತ್ತಿದ್ದಾರೆ. ಬೆಳಗ್ಗೆ ಬರುವ ವಾಯುವಿಹಾರಿಗಳಿಗೆ ಮೂರು ತಿಂಗಳಿಗೆ 250 ರೂ. ಶುಲ್ಕ ನಿಗದಿ ಮಾಡಿದ್ದಾರೆ.
ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಎಲ್ಲ ಕಡೆಗೂ ಬೆಳಗಿನ ವಾಯುವಿಹಾರಿಗಳಿಗೆ ಉಚಿತ ಪ್ರವೇಶದ ಅವಕಾಶ ನೀಡಲಾಗಿದೆ. ಆದರೆ, ರೈಲ್ವೆ ಇಲಾಖೆಯವರು ಮಾತ್ರ ಶುಲ್ಕ ನಿಗದಿ ಮಾಡುವ ಮೂಲಕ ಸಮಸ್ಯೆ ಸೃಷ್ಟಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಎಚ್ಚರಿಕೆ: ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ ಮಾತನಾಡಿ, ವಾಯುವಿಹಾರಿಗಳಿಗೆ ತೊಂದರೆ ನೀಡುವುದು ಬೇಡ ಎಂದು ಈ ಹಿಂದೆಯೇ ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಆದರೂ ಪದೇ ಪದೇ ತೊಂದರೆ ಉಂಟು ಮಾಡುವ ಕಾರ್ಯ ನಡೆಯುತ್ತಿದೆ.
ರೈಲ್ವೆ ಇಲಾಖೆ ಮೊಂಡುತನ ಇದೇ ರೀತಿ ಮುಂದುವರಿದರೆ ಮೈದಾನದ ರಸ್ತೆ ಹಾಗೂ ನೀರು ಸರಬರಾಜು ಸ್ಥಗಿತಕ್ಕೆ ಪಾಲಿಕೆಯಿಂದ ಕ್ರಮ ಕೈಗೊಳ್ಳಬೇಕಾದೀತು ಎಂದು ಎಚ್ಚರಿಕೆ ನೀಡಿದರು. ರೈಲ್ವೆ ಇಲಾಖೆಯ ವರ್ತನೆ ಕುರಿತಾಗಿ ಸಂಸದ ಪ್ರಹ್ಲಾದ ಜೋಶಿ ಅವರೊಂದಿಗೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಶೆಟ್ಟರ ಹೇಳಿದರು.
ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣವರ, ಮಾಜಿ ಸದಸ್ಯ ದೊರೈರಾಜ್, ಅಸೋಸಿಯೇಶನ್ನ ಶಿವಕುಮಾರ ಹಿರೇಮಠ, ಬಸವರಾಜ ಕುಂದಗೋಳಮಠ, ವೆಂಕಟೇಶ ಹಬೀಬ, ಜಗದೀಶ ನರೇಗಲ್ಲ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.