ಲಿಡ್ಕರ್ ಮಾರಾಟ ಮಳಿಗೆ ಉದ್ಘಾಟನೆ
Team Udayavani, Feb 18, 2017, 2:56 PM IST
ಹುಬ್ಬಳ್ಳಿ: ಲಿಡ್ಕರ್ ಫಲಾನುಭವಿಗಳಿಗೆ ನೀಡಲಾದ ನಿವೇಶನಗಳ ನೋಂದಣಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. ಐಟಿ ಪಾರ್ಕ್ನಲ್ಲಿ ಬಾಬು ಜಗಜೀವನರಾಮ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ನವೀಕೃತ ಲಿಡ್ಕರ್ ಮಾರಾಟ ಮಳಿಗೆ ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ 35 ವರ್ಷಗಳಿಂದ ಲಿಡ್ಕರ್ ಫಲಾನುಭವಿಗಳ ನಿವೇಶನಗಳ ನೋಂದಣಿಯಾಗಿಲ್ಲ. ಈ ದಿಸೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪ್ರತಿ ನಿವೇಶನದ ನೋಂದಣಿಗೆ 27,000 ರೂ. ವೆಚ್ಚ ತಗುಲಲಿದ್ದು, ಇದನ್ನು ಸರ್ಕಾರದಿಂದ ಭರಿಸಲು ಪ್ರಯತ್ನಿಸಲಾಗುವುದು ಎಂದರು.
ನಗರದಲ್ಲಿ ನವೀಕೃತ ಮಾರಾಟ ಮಳಿಗೆ ಉದ್ಘಾಟನೆಗೊಂಡಿರುವುದು ಸಂತಸದ ಸಂಗತಿ. ಯಾವುದೇ ಬ್ರ್ಯಾಂಡ್ ಪಾದರಕ್ಷೆಗಳಿಗೂ ಕಡಿಮೆ ಇಲ್ಲದಂತೆ ಗುಣಮಟ್ಟದ ಉತ್ಪನ್ನಗಳು ಇಲ್ಲಿ ಲಭಿಸುತ್ತಿವೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಖರೀದಿ ಮಾಡಿ ಪ್ರೋತ್ಸಾಹಿಸಬೇಕು ಎಂದು ಅಭಿಪ್ರಾಯಪಟ್ಟರು.
ಬಾಬು ಜಗಜೀವನರಾಮ್ ಚರ್ಮ ಕೈಗಾರಿಕೆ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಸ್.ದಿವಾಕರ ಮಾತನಾಡಿ, ಕಳೆದ 3-4 ವರ್ಷಗಳಿಂದ ನಿಗಮ ಲಾಭಗಳಿಸುತ್ತಿದೆ. 2015-16ನೇ ಸಾಲಿನಲ್ಲಿ ನಿಗಮಕ್ಕೆ 2 ಕೋಟಿ ರೂ. ಲಾಭವಾಗಿದೆ.
ಚರ್ಮ ಕೈಗಾರಿಕೆಯನ್ನು ಅವಲಂಬಿಸಿದ ಯುವಕರಿಗೆ ಸೂಕ್ತ ತರಬೇತಿ ನೀಡಲಾಗುತ್ತಿದೆ. ಸ್ವಂತ ಮಳಿಗೆ ತೆರೆಯಲು ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು. ಶಾಸಕ ಪ್ರಸಾದ ಅಬ್ಬಯ್ಯ, ಉಪಮಹಾಪೌರ ಲಕ್ಷ್ಮಿ ಉಪ್ಪಾರ, ದಾಕ್ಷಾಯಿಣಿ ಬಸವರಾಜ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ
Flight: ಹುಬ್ಬಳ್ಳಿ-ಅಹ್ಮದಾಬಾದ್ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ
Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು
Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ
Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.