ಕೇಂದ್ರ ಅಧ್ಯಯನ ತಂಡಕ್ಕೆ ಬರ ದರ್ಶನ


Team Udayavani, Feb 13, 2017, 2:21 PM IST

hub1.jpg

ಹುಬ್ಬಳ್ಳಿ: ಕೇಂದ್ರ ಬರ ಅಧ್ಯಯನ ತಂಡ ಭಾನುವಾರ ಹುಬ್ಬಳ್ಳಿ, ನವಲಗುಂದ ಹಾಗೂ ಕುಂದಗೋಳ ತಾಲೂಕಿನ ಕೆಲ ಗ್ರಾಮಗಳಿಗೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿ ಮಾಹಿತಿ ಪಡೆಯಿತು. ಕೇಂದ್ರ ಗ್ರಾಮೀಣಾಭಿವೃದ್ಧಿ ಅಧೀನ ಕಾರ್ಯದರ್ಶಿ ಎಸ್‌.ಬಿ.ತಿವಾರಿ, ಕೇಂದ್ರ ಇಂಧನ ಇಲಾಖೆ ಉಪನಿರ್ದೇಶಕ ಕಮಲ್‌ ಚವ್ಹಾಣ ಹಾಗೂ ಸಲೀಂ ಹೈದರ್‌ ಅವರನ್ನೊಳಗೊಂಡ ಕೇಂದ್ರ ಬರ ಅಧ್ಯಯನ ತಂಡ ಹಲವು ಗ್ರಾಮಗಳಿಗೆ ಭೇಟಿ ಪರಿಶೀಲಿಸಿತು. 

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ತಂಡದ ಸದಸ್ಯ ಹಾಗೂ ಕೇಂದ್ರ ನೀರು ಮತ್ತು ನೈರ್ಮಲ್ಯ ಸಚಿವಾಲಯದ ಸಹಾಯಕ ಸಲಹೆಗಾರ ಸಲೀಂ ಹೈದರ್‌, ಧಾರವಾಡ ಜಿಲ್ಲೆಯಲ್ಲಿ ಭೀಕರ ಬರ ಸ್ಥಿತಿಯಿದ್ದು, ಈ ಕುರಿತು ಒಂದು ವಾರದಲ್ಲಿ ವರದಿ ನೀಡಲಾಗುವುದು. ನೀರಿನ ಸಮಸ್ಯೆ ಹೆಚ್ಚಾಗಿದೆ. ಬರದ ಸ್ಥಿತಿ ಅವಲೋಕಿಸಿ ತಂಡದ ಮುಖ್ಯಸ್ಥರಿಗೆ ವರದಿ ನೀಡಲಾಗುವುದು ಎಂದರು. 

ಅನುದಾನ ಬಳಕೆಗೆ ಸರ್ಕಾರ ವಿಫ‌ಲ: ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ಕೇಂದ್ರ ಅನುದಾನ ನೀಡುತ್ತಿದ್ದರೂ ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫ‌ಲವಾಗಿದೆ. ಅನಗತ್ಯವಾಗಿ ಕೇಂದ್ರದ ಮೇಲೆ ಆರೋಪ ಮಾಡುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ. ಕಳೆದ 10 ವರ್ಷಗಳಲ್ಲಿ ಅತಿ ಹೆಚ್ಚು ಅನುದಾನ ನೀಡಿದ್ದೇ ಸದ್ಯದ ಎನ್‌ಡಿಎ ಸರ್ಕಾರ.

ಅಗತ್ಯ ಬಿದ್ದರೆ ರಾಜ್ಯ ಸರ್ಕಾರ ಖರ್ಚು ಮಾಡಿ ಬರ ಪರಿಹಾರ ಕ್ರಮ ಕೈಗೊಳ್ಳಬಹುದು. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ 500 ಕೋಟಿ ರೂ. ಖರ್ಚು ಮಾಡದಷ್ಟು ದುಸ್ಥಿತಿಗೆ ತಲುಪಿದೆಯೇ ಎಂಬ ಸಂದೇಹ ಮೂಡುತ್ತಿದೆ ಎಂದರು. ಕೇಂದ್ರ ಸರ್ಕಾರ ಇನ್ನಷ್ಟು ಅನುದಾನ ನೀಡಬಾರದೆಂದೇನಿಲ್ಲ. ಅಗತ್ಯ ಬಿದ್ದರೆ  ಇನ್ನಷ್ಟು ಅನುದಾನ ನೀಡುವಂತೆ ಕೇಂದ್ರದ ಕೃಷಿ ಸಚಿವರು ಹಾಗೂ ಗೃಹ ಸಚಿವರಿಗೆ ಮನವಿ ಮಾಡಲಾಗುವುದು ಎಂದರು. 

ಗ್ರಾಮಗಳಲ್ಲಿ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಸಮರ್ಪಕ ನೀರು ಪೂರೈಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಗೋಶಾಲೆಗಳನ್ನು ತೆರೆದು ದನಕರುಗಳಿಗೆ ಆಶ್ರಯ ನೀಡಬೇಕು. ಗುಣಮಟ್ಟದ ಮೇವು ನೀಡಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಶಾಸಕ ಎನ್‌.ಎಚ್‌.ಕೋನರೆಡ್ಡಿ ಮಾತನಾಡಿ, 4782 ಕೋಟಿ ರೂ. ಅನುದಾನ ನೀಡಲು ಮನವಿ ಮಾಡಿದರೆ ಕೇಂದ್ರ ಸರ್ಕಾರ 1700 ಕೋಟಿ ರೂ. ನೀಡಲು ಒಪ್ಪಿಗೆ ಸೂಚಿಸಿ, ಕೇವಲ 450  ಕೋಟಿ ರೂ. ಮಾತ್ರ ಅನುದಾನ ನೀಡಿದೆ. ರಾಜ್ಯದ ಜನರು ಸಂಕಷ್ಟದಲ್ಲಿದ್ದು, ಇಲ್ಲಿನ ಸ್ಥಿತಿ-ಗತಿ ಕುರಿತ ವರದಿ ನೀಡಿದ ಕೂಡಲೇ ಕೇಂದ್ರ ಸರ್ಕಾರ ಅಗತ್ಯ ಪ್ರಮಾಣದ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.  

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.