ಪ್ರೇಕ್ಷಕರಲ್ಲಿದೆ ರಂಗಭೂಮಿ ಉಳಿವು-ಅಳಿವು


Team Udayavani, Jul 24, 2017, 12:21 PM IST

hub4.jpg

ಹುಬ್ಬಳ್ಳಿ: ರಂಗಭೂಮಿ ಉಳಿವು, ಅಳಿವು ಎರಡು ಜನರ ಕೈಯಲ್ಲಿದ್ದು, ಅದನ್ನು ಇದೀಗ ಬೆಳೆಸುತ್ತಿರುವವರು ಜನರೇ ಎಂದು ಹಿರಿಯ ರಂಗಕರ್ಮಿ ಶ್ರೀನಿವಾಸ ಕಪ್ಪಣ್ಣ ಹೇಳಿದರು. ಇಲ್ಲಿನ ಬಸವ ವನದ ಬಳಿಯ ಕೆಬಿಆರ್‌ ಡ್ರಾಮಾ ಕಂಪನಿಯಲ್ಲಿ ಪ್ರದರ್ಶನಗೊಳ್ಳುತ್ತಿರುವ “ಹೆಂಡತಿನ್ನ ಕೇಳಿ ಮದುವೆಯಾಗು’ ನಾಟಕದ 101ನೇ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು. 

ಇಂದು ಇಡೀ ನಾಡಿನಲ್ಲಿ ರಂಗಭೂಮಿ ಉಳಿದಿದೆ ಎಂದರೆ ಅದು ಉತ್ತರ ಕರ್ನಾಟಕದಲ್ಲಿ ಮಾತ್ರ ಎಂದು ಹೆಮ್ಮೆಯಿಂದ ಹೇಳಬಹುದು. ಬನಶಂಕರಿ ಜಾತ್ರೆಯಲ್ಲಿ 8ಕ್ಕೂ ಹೆಚ್ಚು ನಾಟಕ ಕಂಪನಿಯವರು ವಿವಿಧ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಈ ಭಾಗದಲ್ಲಿ ರಂಗಭೂಮಿ ಉಳಿದಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದರು. 

ಈ ಹಿಂದೆ ಚಿಂದೋಡಿ ಲೀಲಾ ಅವರು ಇದ್ದಾಗ ರಂಗಭೂಮಿಗೆ ಒಂದು ಉನ್ನತ ಸ್ಥಾನ ಒದಗಿಸಿಕೊಟ್ಟವರು. ಅಂಥವರು ನಾಟಕ ಅಕಾಡೆಮಿ ಅಧ್ಯಕ್ಷರಾಗಿದ್ದಾಲೇ ಈ ರಂಗಭೂಮಿಗೆ ಒಂದು ನೆಲೆ ಸಿಕ್ಕಿದ್ದು ಎಂದರೆ ತಪ್ಪಾಗಲಾರದು ಎಂದರು. ನಗರದಲ್ಲಿರುವ ಟೌನ್‌ ಹಾಲ್‌ನ್ನು ಅಭಿವೃದ್ಧಿ ಪಡಿಸಿ ರಂಗಭೂಮಿ ಕಾರ್ಯಗಳಿಗೆ ನೀಡುವ ಮೂಲಕ ರಂಗಭೂಮಿ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಮಹಾಪೌರ ಡಿ.ಕೆ. ಚವ್ಹಾಣ ಅವರಿಗೆ ಮನವಿ ಮಾಡಿದರು. 

ಮಹಾಪೌರ ಡಿ.ಕೆ. ಚವ್ಹಾಣ ಅಧ್ಯಕ್ಷತೆ ವಹಿಸಿ, ಕೆಬಿಆರ್‌ ಡ್ರಾಮಾ ಹಲವಾರು ವರ್ಷಗಳಿಂದ ತನ್ನ ಛಾತಿ ಬಿಡದೆ ನಾಟಕ ಪ್ರದರ್ಶನದ ಮೂಲಕ ಇಡೀ ನಾಡಿನ ಜನತೆಯ ಮನಸ್ಸನ್ನು ಗೆದ್ದಿದೆ. ಇಂತಹ ನಾಟಕ ಪ್ರದರ್ಶನ ಕೇವಲ 100ಅಲ್ಲ, 500, ಸಾವಿರ ದಿನಗಳವರೆಗೆ ಪ್ರದರ್ಶನಗೊಳ್ಳಬೇಕು.

ಟೌನ್‌ ಹಾಲ್‌ ನವೀಕರಣ ಕಾರ್ಯಕ್ಕೆ ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ, ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಅವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಚಿತ್ರ ನಿರ್ದೇಶಕ ಮಂಜು ದೈವಜ್ಞ, ಚಿತ್ರ ಹಾಗೂ ಕಿರುತೆರೆ ನಟ ಅಮಿತ್‌ರಾವ್‌ ಹಾಗೂ ಮಾಜಿ ಸಂಸದ ಪ್ರೊ| ಐ.ಜಿ.ಸನದಿ ಮಾತನಾಡಿದರು.

ಚಿಂದೋಡಿ ವಿಜಯಕುಮಾರ, ಚಿಂದೋಡಿ ಕಿಶೋರಕುಮಾರ ಸೇರಿದಂತೆ ಮೊದಲಾದವರು ಇದ್ದರು. ಕೊನೆಯಲ್ಲಿ ಹೆಂಡತಿನ್ನ ಕೇಳಿ ಮದುವೆಯಾಗು 101ನೇ ನಾಟಕ ಪ್ರದರ್ಶನ ನಡೆಯಿತು. ಚಿಂದೋಡಿ ಶ್ರೀಕಂಠೇಶ ಸ್ವಾಗತಿಸಿದರು. ಚಿಂದೋಡಿ ಶಂಭುಲಿಂಗಪ್ಪ ನಿರೂಪಿಸಿದರು. ಚಿಂದೋಡಿ ಬಂಗಾರೇಶ ವಂದಿಸಿದರು.

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

8

Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.