ಅಂತರಂಗದಲ್ಲಿ ಸದಾ ಇರುತ್ತೆ ಬೆಳಕಿನ ಮಿಡಿತ


Team Udayavani, Apr 10, 2017, 1:29 PM IST

hub4.jpg

ಧಾರವಾಡ: ತಲೆಮಾರು ಹಾಗೂ ಕಾಲಮಾನ ಬದಲಾದಂತೆ, ನೋಟಗಳು ಬದಲಾದಂತೆ ವಿಚಾರಗಳೂ ಬದಲಾಗುತ್ತವೆ. ಆದರೆ ಅಂತರಂಗದಲ್ಲಿ ಬೆಳಕಿನ ಮಿಡಿತ ಸದಾ ಇರುತ್ತದೆ ಎಂದು ಹಿರಿಯ ಸಾಹಿತಿ ಪ್ರೊ| ಚಂದ್ರಶೇಖರ ಪಾಟೀಲ ಹೇಳಿದರು. 

ನಗರದ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುತ್ಛಯದಲ್ಲಿ ರಂಗಧ್ವನಿ-17ರ ಪ್ರಯುಕ್ತ ಹಮ್ಮಿಕೊಂಡಿದ್ದ ರಾಷ್ಟ್ರೀಯ ನಾಟಕೋತ್ಸವ ವಿಚಾರ ಸಂಕಿರಣ “ರಂಗಾಭಿನಯ: ಮಾತುಕತೆ, ಮಾಟ, ಮನನ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದಿನ ಪೀಳಿಗೆಗೆ ತಲೆ ಕೆಡೆಸುವಂತ ಮನ ಕುಲುಕುವಂತಹ ವಿಷಯಗಳ ಬಗ್ಗೆ ತಿಳಿಯುವಲ್ಲಿ ಶ್ರಮಿಸಬೇಕಿದೆ ಎಂದರು. 

ಕಾಲ ಬದಲಾದಂತೆ ಜನರ ನಿರೀಕ್ಷೆ, ಸಂಸ್ಕೃತಿ ಸಹಜವಾಗಿ ಬದಲಾಗುತ್ತದೆ. ಅದೇ ರೀತಿ ಕಲಾವಿದರ ನಟನೆ ಬದಲಾಗುತ್ತಿವೆ. ಜೊತೆಗೆ ರಂಗಭೂಮಿ ಬದುಕಿನ ಧ್ವನಿಯಾಗುತ್ತಿದೆ. ರಂಗಭೂಮಿಯಲ್ಲಿ ನಟಿಸುವ ಕಲಾವಿದನಿಗೆ ಬದ್ಧತೆ, ಶ್ರದ್ಧೆ ಹಾಗೂ ಕಾಯಕದ ಮನೋಭಾವ ಇರಬೇಕು. ಒಬ್ಬ ರಂಗಭೂಮಿ ಕಲಾವಿದ ಸಮಾಜದ ವಿವಿಧ ಪಾತ್ರಗಳನ್ನು ಮಾಡಬಲ್ಲ. ಅದಕ್ಕೆ ಸಾಕಷ್ಟು ಅನುಭವ ಇರುವ ರಂಗಭೂಮಿ ತಜ್ಞರ ಮಾರ್ಗದರ್ಶನ ಪಡೆದುಕೊಳ್ಳಬೇಕು. 

ಆಗ ಕಲಾವಿದ ಯಶಸ್ವಿ ಹೊಂದಲು ಸಾಧ್ಯವಿದೆ ಎಂದರು. ಜಗತ್ತಿನ ಚಲನಶೀಲತೆ ಸ್ಥಗಿತಗೊಂಡಿದೆ ಎಂದು ಕೆಲವರು ಹೇಳುತ್ತಾರೆ. ಆದರೆ ಇಂದಿನ ಯುವ ಪೀಳಿಗೆಯ ತಲೆ ಕೆಡಿಸಿದಂತ ಹಾಗೂ ಹೃದಯ ಕದ್ದಿರುವ ವಿಷಯ ಗಮನಿಸಿದರೆ ಭವಿಷ್ಯ ಕುರಿತು ನಿರಾಶರಾಗಬೇಕಿಲ್ಲ ಎಂದೆನಿಸುತ್ತದೆ.

ಶಿವಮೊಗ್ಗದಲ್ಲಿ ಈಚೆಗೆ ನಡೆದ ದಕ್ಷಿಣಾಯಣ ಹಾಗೂ ಇಲ್ಲಿನ ರಂಗಾಯಣದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ನಾಟಕೋತ್ಸವದಲ್ಲಿ ಯುವಕರ ಪಾಲುದಾರಿಕೆ ಆಶಾಭಾವ ಮೂಡಿಸುವಂತಿದೆ ಎಂದು ಅಭಿಪ್ರಾಯಪಟ್ಟರು. ರಂಗ ಸಮಾಜದ ಸದಸ್ಯ ಡಾ| ಕೆ.ವೈ. ನಾರಾಯಣಸ್ವಾಮಿ ಮಾತನಾಡಿ, ಆಧುನಿಕ ಜಗತ್ತಿನಲ್ಲಿ ರಂಗ ಚಟುವಟಿಕೆ ಹೆಚ್ಚಾಗಿದ್ದರೂ, ರಂಗ ಸಂಸ್ಕೃತಿ ಮರೆಯಾಗುತ್ತಿರುವ ಆತಂಕ ಎದುರಾಗಿದೆ.

ಸಾಹಿತ್ಯದ ಹಾಗೂ ರಂಗಭೂಮಿಯ ವಸ್ತುಗಳಿಂದ ಬದುಕಿಗೆ ಯಾವುದೇ ಅರ್ಥವಿಲ್ಲ ಎಂಬ ಸಂದೇಶವನ್ನು ರಾಜಕೀಯ ವ್ಯಕ್ತಿಗಳು, ಮಾಧ್ಯಮಗಳನ್ನು ನಿಯಂತ್ರಿಸುತ್ತಿರುವ ಧಣಿಗಳು ಸಾರುತ್ತಿದ್ದಾರೆ. ಹೀಗಾಗಿ ಸುಮಾರು ಮೂರು ದಶಕಗಳ ಹಿಂದೆ ಇದ್ದ ರಂಗ ಸಂಸ್ಕೃತಿ ಇಂದು ಮರೆಯಾಗುತ್ತಿದೆ ಎಂದು ವಿಷಾದಿಸಿದರು. 

ಲವಕುಮಾರ, ಟಿ.ಎಚ್‌. ಸಂಧ್ಯಾರಾಣಿ, ಬಸವರಾಜ ಹೂಗಾರ ಹಾಗೂ ರಜನಿ ಗರುಡ ಇದ್ದರು. ವಿಚಾರ ಸಂಕಿರಣದ ಕೊನೆಯ ದಿನವಾದ ರವಿವಾರ ಪುದುಚೇರಿಯ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಸವಿತಾ ರಾಣಿ ಅವರು ಪ್ರಸ್ತುತಪಡಿಸಿದ ರೆಸ್ಟ್‌ನೆಸ್‌ ಇನ್‌ ಪೀಸ್‌ (ರಿಪ್‌) ಎಂಬ ಏಕವ್ಯಕ್ತಿ ರಂಗಪ್ರಯೋಗದಲ್ಲಿ ಮಹಿಳೆಯರ ಜೀವನ ಚೂರಾಗಿ ಚಡಪಡಿಸುವುದನ್ನು ರಂಗದ ಮೇಲೆ ಪ್ರಾತ್ಯಕ್ಷಿಕೆ ರೂಪದಲ್ಲಿ ಪ್ರಸ್ತುತಪಡಿಸಿದರು.

ಚಂಪಾ ಶೆಟ್ಟಿ ಮತ್ತು ತಂಡದವರು “ಅಕ್ಕು ಕಥಾಭಿನಯ’ ಎಂಬ ಮೂರು ಕಥೆಗಳನ್ನು ಒಳಗೊಂಡ ನಾಟಕವನ್ನು ಸಾದರ ಪಡಿಸಿದರು. ಇದರೊಂದಿಗೆ ಚಂಪಾ ಶೆಟ್ಟಿ ಅವರು ಅದರ ಪ್ರಾತ್ಯಕ್ಷಿಕೆ ನೀಡಿದರು. ಇದಾದ ನಂತರ ಹೆಗ್ಗೊàಡಿನ ನೀನಾಸಂ ತಂಡದಿಂದ “ಬಾಬುಗಿರಿ, ತಂಡ’ ಎಂಬ ಟ್ಯಾಗೋರರ “ಬಾಬೂಸ್‌ ಆಫ್‌ ನಯಂಜೂರ್‌ ಮತ್ತು ಮೈ ಲಾಡ್‌ ದ ಬೇಬಿ’ ಎಂಬ ಎರಡು ಕಥೆಗಳ ರಂಗರೂಪವನ್ನು ಪ್ರಸ್ತುಪಡಿಸಿದರು. ಇದಕ್ಕೂ ಮೊದಲು “ಕಾಯದ ಸತ್ಯ’ ವಿಷಯ ಕುರಿತು ಪುತ್ತೂರಿನ ಲಕ್ಷಿಶ ತೋಳ್ಪಾಡಿ ತಮ್ಮ ಅನಿಸಿಕೆ ಹಂಚಿಕೊಂಡರು.  

ಟಾಪ್ ನ್ಯೂಸ್

Dengue

Dengue ಹಾವಳಿ: ಚಿಕಿತ್ಸೆ ಜತೆಗೆ ಮುನ್ನೆಚ್ಚರಿಕೆ ಅಗತ್ಯ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Mahesh

Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue

Dengue ಹಾವಳಿ: ಚಿಕಿತ್ಸೆ ಜತೆಗೆ ಮುನ್ನೆಚ್ಚರಿಕೆ ಅಗತ್ಯ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.