ಆಧಾರ್‌ ಕಾರ್ಡ್‌ಗೆ ತಪ್ಪದ ಪಡಿಪಾಟಲು

•ಡಿಜಿಟಲ್ ಯುಗದಲ್ಲೂ ರಾತ್ರಿಯಿಂದಲೇ ಸರದಿ ಸಾಲು•ಕೇಳುವಿರಾ ನೆರೆ ಸಂತ್ರಸ್ತರ ಅಹವಾಲು

Team Udayavani, Aug 13, 2019, 5:03 PM IST

hubali-tdy-4

ನವಲಗುಂದ: ಪಟ್ಟಣದ ಕೆವಿಜಿ ಬ್ಯಾಂಕ್‌ ಮುಂದೆ ಕಾಯುತ್ತಿರುವ ಜನರು.

ನವಲಗುಂದ: ಆಧಾರ್‌ ಕಾರ್ಡ್‌ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಬೇಕಾಗಿದ್ದು, ಅದನ್ನು ಪಡೆಯಲು, ತಿದ್ದುಪಡಿ ಮಾಡಿಸಿಕೊಳ್ಳಲು ಇರುವ ವ್ಯವಸ್ಥೆ ಹೈರಾಣಾಗಿಸಿದೆ. ದಿನಗಟ್ಟಲೇ ಸರದಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಡಿಜಿಟಲ್ ಯುಗದಲ್ಲಿ ಇಂದಿಗೂ ಸಾಧ್ಯವಾಗದಿರುವುದು ತಾಲೂಕಿನ ನೆರೆ ಪೀಡಿತರನ್ನು ಇನ್ನಷ್ಟು ಸಂಕಷ್ಟಕ್ಕೆ ನೂಕಿದೆ.

ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಪಟ್ಟಣದ ಕೆವಿಜಿ ಬ್ಯಾಂಕ್‌ ಮುಂದೆ ನೂರಾರು ಜನ ಆಧಾರ ಕಾರ್ಡ್‌ ತಿದ್ದುಪಡಿ, ಇತರೆ ಕೆಲಸಕ್ಕಾಗಿ ರವಿವಾರ ರಾತ್ರಿಯಿಂದಲೇ ಸರದಿ ಸಾಲಿನಲ್ಲಿ ನಿಂತಿದ್ದರು.

ಮೂರು ಕೇಂದ್ರಗಳು: ತಾಲೂಕಿನ ವ್ಯಾಪ್ತಿಯಲ್ಲಿ ಮೂರು ಆಧಾರ್‌ ಕೇಂದ್ರಗಳು ಪಟ್ಟಣದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಅದರಲ್ಲಿ ಎರಡು ಕಡೆ ಅಂದರೆ ಕೆವಿಜಿ ಬ್ಯಾಂಕ್‌ನಲ್ಲಿ ಹಾಗೂ ಎಸ್‌ಬಿಎಂ(ಎಸ್‌ಬಿಐ)ನಲ್ಲಿ ಖಾಸಗಿಯವರು ಕುಳಿತು ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನೊಂದು ಕೇಂದ್ರ ಸ್ಥಳೀಯ ಅಂಚೆ ಕಚೇರಿಯಲ್ಲಿದೆ.

ಅಂಚೆ ಕಚೇರಿಯ ಕೇಂದ್ರದಲ್ಲಿ ಕಂಪ್ಯೂಟರ್‌ ಸಿಬ್ಬಂದಿ ಇಲ್ಲ, ಆಧಾರ್‌ ಕಾರ್ಡ್‌ ಮಾಡುವುದಿಲ್ಲವೆಂದು ಹೇಳಿ ಕಳುಹಿಸುತ್ತಿದ್ದಾರೆ. ಇನ್ನೆರಡು ಆಧಾರ್‌ ಕೇಂದ್ರಗಳಲ್ಲಿ ವಾರಕ್ಕೊಮ್ಮೆ ಟೋಕನ್‌ ನೀಡಿ ನಿಗದಿತ ದಿನಾಂಕದಂದು ಆಗಮಿಸಿ ತಿದ್ದುಪಡಿ ಮಾಡಿಸಿಕೊಳ್ಳಲು ಹೇಳುತ್ತಿದ್ದಾರೆ. ಇದರಿಂದಾಗಿ ಗ್ರಾಮೀಣ ಜನರು ಅಲೆದಾಡುವಂತಾಗಿದೆ.

ಪ್ರಸ್ತುತ ನೆರೆಯಿಂದ ಹಲವು ಗ್ರಾಮಗಳು ಪೀಡಿತವಾಗಿದ್ದು, ಜನರು ಮನೆ-ಜಮೀನು ಪರಿಸ್ಥಿತಿ ಸರಿಪಡಿಸಿಕೊಳ್ಳುತ್ತಿದ್ದಾರೆ. ಅದರಲ್ಲಿಯೇ ಮೊರಬ, ಬೆಳವಟಗಿ ಇತರೆ ಗ್ರಾಮದವರು ತಮ್ಮ ಆಧಾರ ಕಾರ್ಡ್‌ ತಿದ್ದುಪಡಿಗಾಗಿ ಒಂದು ದಿನ ಮುಂಚಿತವಾಗಿ ಗ್ರಾಮದಿಂದ ಬಂದು ಸರದಿ ಸಾಲಿನಲ್ಲಿ ನಿಂತು ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ.

ತಿಂಗಳೇ ಬೇಕಾದೀತು: ನೆರೆಹಾವಳಿಯಿಂದ ಮನೆಗಳಲ್ಲಿ ನೀರು ಹೋಗಿ ತಮ್ಮ ಕಾಗದ ಪತ್ರಗಳು ಜಖಂಗೊಂಡಿರುವವರು ಸರಕಾರಿ ಸವಲತ್ತು ಪಡೆದುಕೊಳ್ಳುವುದು ಕಷ್ಟದ ಕೆಲಸವಾಗುತ್ತದೆ. ಪ್ರವಾಹದಲ್ಲಿ ರೇಶನ್‌ ಕಾರ್ಡ್‌, ಆಧಾರ ಕಾರ್ಡ್‌, ಓಟಿನ ಕಾರ್ಡ್‌ ಇತರೆ ಕಾಗದಪತ್ರಗಳನ್ನು ಕಳೆದುಕೊಂಡಿದ್ದರೆ ಅವುಗಳಿಗಾಗಿ ತಿಂಗಳುಗಟ್ಟಲೇ ಕಾಯುವ ಪರಿಸ್ಥಿತಿ ಎದುರಾಗಿದೆ. ತಾಲೂಕಾಡಳಿತ ಇತ್ತ ಗಮನ ಹರಿಸಬೇಕಿದೆ. ಆಧಾರ ಕಾರ್ಡ್‌ ತಿದ್ದುಪಡಿ, ಇನ್ನಿತರ ಕಾಗದಪತ್ರಗಳನ್ನು ಜನರಿಗೆ ಪಡೆಯುವಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಿದೆ.

ಆಧಾರ ಕಾರ್ಡ್‌ ತಿದ್ದುಪಡಿ ಮಾಡೂದು ದೊಡ್ಡ ತೊಂದರೆ ಇದೆ. ಹೊಲ, ಮನೆ ಕೆಲಸ ಬಿಟ್ಟು ಇದಕ್ಕ ನಿಂದಿರಬೇಕು. ಇದಕ್ಕ ಬ್ಯಾರಿ ಪರಿಹಾರ ಇಲ್ಲನ್ರಿ ಸಾಕಾಗೈತ್ರಿಪ್ಪಾ. ಎಲ್ಲಾ ಆನ್‌ಲೈನ್‌ ಅಂತಾರಾ, ಬೆಳಗ್ಗೆ 5ಕ್ಕೆ ಬಂದು ಕಾಯೋದು ತಪ್ಪುದಿಲ್ಲ.•ಸುರೇಶ ಅಣ್ಣಿಗೇರಿ, ನವಲಗುಂದ ನಿವಾಸಿ

ನಮ್ಮ ಗ್ರಾಮಕ್ಕೆ ಪ್ರವಾಹ ಬಂದು ಪಟ್ಟಣಕ್ಕೆ ಬರಲು ರಸ್ತೆ ಕೆಟ್ಟಿದೆ. ಇನಾಂಹೊಂಗಲದ ಮಾರ್ಗವಾಗಿ ದ್ವಿಚಕ್ರ ವಾಹನದಲ್ಲಿ ಬೆಳಗ್ಗೆ 5ಕ್ಕೆ ಬಂದಿದ್ದೆ. ಬ್ಯಾಂಕ್‌ನವರು ಟೋಕನ್‌ ನೀಡಿದ ಮೇಲೆ ಮತ್ತೂಮ್ಮೆ ಬಂದು ನಮ್ಮ ಆಧಾರ ಕಾರ್ಡ್‌ ತಿದ್ದುಪಡಿ ಮಾಡಿಸಬೇಕು. ಈ ವ್ಯವಸ್ಥೆಯಿಂದ ಬಹಳ ಬೇಸರವಾಗಿದೆ. ಎಲ್ಲದಕ್ಕೂ ಆಧಾರ ಕಾರ್ಡ್‌ ಕಡ್ಡಾಯವಾಗಿದ್ದರಿಂದ ಯಾವಾಗ ಹೇಳುತ್ತಾರೋ ಆಗ ಮತ್ತೆ ಅಲೆದಾಡಬೇಕಿದೆ.•ನಾಗಪ್ಪ ಹದ್ದಣ್ಣವರ, ಮೊರಬ ಗ್ರಾಮಸ್ಥ

 

•ಪುಂಡಲೀಕ ಮುಧೋಳೆ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.