ರೈತರಿಗೆ ಪರಿಹಾರ ನೀಡದ ಎರಡು ಸರ್ಕಾರಿ ಕಚೇರಿ ಜಪ್ತಿ
Team Udayavani, Sep 9, 2017, 12:25 PM IST
ಧಾರವಾಡ: ಭೂಸ್ವಾಧೀನ ಮಾಡಿಕೊಂಡ ಜಮೀನಿನ ಪರಿಹಾರ ರೈತರಿಗೆ ನೀಡಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಕಚೇರಿ ಹಾಗೂ ಉಪ ವಿಭಾಗಾ ಧಿಕಾರಿ ಕಚೇರಿಯ ಚರಾಸ್ತಿಯನ್ನು ನ್ಯಾಯಾಲಯದ ಆದೇಶದಂತೆ ಶುಕ್ರವಾರ ನ್ಯಾಯಾಲಯದ ಅಧಿಕಾರಿಗಳು ಜಪ್ತಿ ಮಾಡಿದರು.
ಉಪವಿಭಾಗಾಧಿಕಾರಿ ಕಚೇರಿಯಲ್ಲಿದ್ದ 1 ಝೆರಾಕ್ಸ್ ಮಷಿನ್, 6 ಕುರ್ಚಿ, 1 ಕಂಪೂಟರ್, 1 ಪ್ರಿಂಟರ್ ಹಾಗೂ ಸಣ್ಣ ನೀರಾವರಿ ಇಲಾಖೆಯಲ್ಲಿನ 4 ಕುರ್ಚಿ, 1 ಹಾರ್ಡ್ಡಿಸ್ಕ್ ಹಾಗೂ 1 ಫ್ಯಾನ್ ಜಪ್ತಿ ಮಾಡಲಾಗಿದೆ. ಕಲಘಟಗಿ ತಾಲೂಕಿನ ಮಲಕನಕೊಪ್ಪ ಗ್ರಾಮಕ್ಕೆ ಸೇರಿದ 2 ಎಕರೆ 38 ಗುಂಟೆ ಜಮಿನನ್ನು ಕೆರೆಯಿಂದ ಕೆರೆಗೆ ನೀರು ಪೂರೈಸುವ ಕಾಲುವೆ ನಿರ್ಮಾಣ ಕಾಮಗಾರಿಗಾಗಿ ಸಣ್ಣ ನೀರಾವರಿ ಇಲಾಖೆ 2006ರಲ್ಲಿ ಪ್ರತಿ ಗುಂಟೆಗೆ 400 ರೂ. ನಿಗದಿ ಮಾಡಿ ಸ್ವಾಧೀನ ಮಾಡಿಕೊಳ್ಳಲಾಗಿತ್ತು.
ಆದರೆ ಇಲಾಖೆಯು ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಿರಲಿಲ್ಲ. ಹೀಗಾಗಿ ಜಮೀನಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಗ್ರಾಮದ 9 ಜನ ರೈತರು 2009ರಲ್ಲಿ ಧಾರವಾಡದ 2ನೇ ಹೆಚ್ಚುವರಿ ದಿವಾನಿ ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡಿದ್ದರು. ಅರ್ಜಿ ಪರಿಶೀಲನೆ ನಡೆಸಿದ ನ್ಯಾಯಾಲಯ 2015ರ ನವೆಂಬರ್ ನಲ್ಲಿ ಸಂತ್ರಸ್ತರಿಗೆ ಪ್ರತಿ ಗುಂಟೆಗೆ 12,000 ರೂ.ದಂತೆ ಒಟ್ಟು 46 ಲಕ್ಷ ರೂ. ನೀಡಬೇಕು ಎಂದು ಆದೇಶಿಸಿತ್ತು.
ನ್ಯಾಯಾಲಯದ ಆದೇಶವಿದ್ದರೂ ಇಲಾಖೆ ಈವರೆಗೂ ರೈತರಿಗೆ ಪರಿಹಾರ ಹಣ ನೀಡಿರಲಿಲ್ಲ. ಹೀಗಾಗಿ ನ್ಯಾಯಾಲಯ 2017ರ ಜೂನ್ನಲ್ಲಿ ಇಲಾಖೆ ಜಪ್ತಿಗೆ ಆದೇಶ ನೀಡಿತ್ತು. ಅಂದಿನಿಂದ ಈವರೆಗೂ ನ್ಯಾಯಾಲಯದ ಆದೇಶದಂತೆ ಉಪ ವಿಭಾಗಾಧಿಕಾರಿ ಕಚೇರಿ ಹಾಗೂ ಸಣ್ಣ ನೀರಾವರಿ ಇಲಾಖೆಯಲ್ಲಿ 2 ಬಾರಿ ಜಪ್ತಿ ಕಾರ್ಯ ನಡೆಸಬೇಕಾಯಿತು. ಆದರೆ ಅಧಿಕಾರಿಗಳು ಪ್ರಥಮ ಹಾಗೂ ದ್ವೀತಿಯ ಜಪ್ತಿ ಕಾರ್ಯದ ಸಂದರ್ಭದಲ್ಲಿ ಕ್ರಮವಾಗಿ ಒಂದು ತಿಂಗಳ ಮತ್ತು 15 ದಿನ ಕಾಲಾವಕಾಶ ಕೇಳಿದ್ದರು.
ಅಲ್ಲದೇ ಈ ಕಾಲಾವಕಾಶದಲ್ಲಿ ರೈತರಿಗೆ ಪರಿಹಾರ ಹಣ ನೀಡುವುದಾಗಿ ಹೇಳಿದ್ದರಿಂದ ಜಪ್ತಿ ಮಾಡಿರಲಿಲ್ಲ. ಆದರೆ ನಂತರವೂ ವಿಳಂಬ ಮಾಡಿದ ಕಾರಣ 2017ರ ಸೆಪ್ಟೆಂಬರ್ಲ್ಲಿ ಪುನಃ ಜಪ್ತಿಗೆ ನ್ಯಾಯಾಲಯ ಆದೇಶ ನೀಡಿದೆ. ಹೀಗಾಗಿ ನ್ಯಾಯಾಲಯದ ಆದೇಶದಂತೆ ಶುಕ್ರವಾರ ಎರಡೂ ಕಚೇರಿಯಲ್ಲಿ ಜಪ್ತಿ ಕಾರ್ಯಕ್ಕೆ ಮುಂದಾಗಿದ್ದೆವೆ ಎಂದು ಅರ್ಜಿದಾರ ಪರ ವಕೀಲ ಎಸ್.ವಿ. ಜಿನ್ನೂರ ತಿಳಿಸಿದರು. ನ್ಯಾಯಾಲಯದ ಬೇಲಿಫ ಎಫ್.ಸಿ. ಭಾವಿಕಟ್ಟಿ ಹಾಗೂ ಗುರಪ್ಪ ಗೊಲ್ಲರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.