ಅನಧಿಕೃತ ಲೇಔಟ್‌ ತೆರವು ಕಾರ್ಯಾಚರಣೆ

ವಿರೋಧ ವ್ಯಕ್ತಪಡಿಸಲು ಮುಂದಾದಾಗ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ನಡೆಸಿದರು

Team Udayavani, Jan 29, 2022, 5:57 PM IST

ಅನಧಿಕೃತ ಲೇಔಟ್‌ ತೆರವು ಕಾರ್ಯಾಚರಣೆ

ಧಾರವಾಡ: ಹೊಸಯಲ್ಲಾಪುರ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಅನಧಿಕೃತ ಲೇಔಟ್‌ಗಳ ತೆರವು ಕಾರ್ಯಾಚರಣೆಗೆ ಹುಡಾದಿಂದ ಶುಕ್ರವಾರ ಚಾಲನೆ ನೀಡಲಾಯಿತು. ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ನೇತೃತ್ವದ ಹುಡಾ ಅಧಿಕಾರಿಗಳ ತಂಡ ಪೊಲೀಸ್‌ ಭದ್ರತೆಯಲ್ಲಿ ಜೆಸಿಬಿ ಮೂಲಕ ಅನಧಿಕೃತ ಲೇಔಟ್‌ಗಳನ್ನು ತೆರವುಗೊಳಿತು.

ನಿವೇಶನಗಳಲ್ಲಿ ಅಳವಡಿಸಿದ್ದ ಗುರುತು ಕಲ್ಲು, ರಸ್ತೆ, ಚರಂಡಿ, ವಿದ್ಯುತ್‌ ಕಂಬ, ಸೇರಿ ಇತರ ಸೌಲಭ್ಯಗಳನ್ನು ಜೆಸಿಬಿ ಮೂಲಕ ಧ್ವಂಸಗೊಳಿಸಲಾಯಿತು. ಹುಡಾ ಸರ್ವೇ ಪ್ರಕಾರ ಹೊಸಯಲ್ಲಾಪುರ ವ್ಯಾಪ್ತಿಯಲ್ಲಿ ನವಲಗುಂದಕ್ಕೆ ಹೋಗುವ ಮಾರ್ಗದ ಮಧ್ಯೆ ಒಟ್ಟು 37 ಅನಧಿಕೃತ ಲೇಔಟ್‌ ಪತ್ತೆಯಾ ಗಿದ್ದು, ಈ ಲೇಔಟ್‌ಗಳ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗಿದ್ದು, ಶನಿವಾರವೂ ಕಾರ್ಯಾಚರಣೆ ನಡೆಯಲಿದೆ.

ಕಾರ್ಯಾಚರಣೆಗೆ ಆಕ್ಷೇಪ: ತೆರವು ಕಾರ್ಯದ ಮಾಹಿತಿ ಅರಿತು ಸ್ಥಳಕ್ಕೆ ಆಗಮಿಸಿದ ಲೇಔಟ್‌ ಮಾಲೀಕರು ಅಧಿ ಕಾರಿಗಳೊಂದಿಗೆ ವಾಗ್ವಾದ ನಡೆಸಿ ತೆರವು ಕಾರ್ಯ ಮಾಡದಂತೆ ಆಗ್ರಹಿಸಿದರು. ಇದಕ್ಕೆ ಧ್ವನಿಗೂಡಿಸಿದ ಪಾಲಿಕೆ ಸದಸ್ಯ ಶಂಭುಗೌಡ ಸಾಲಮನಿ, ಹೋರಾಟಗಾರ ಬಸವರಾಜ ಜಾಧವ, ಯಾವುದೇ ಕಾರಣಕ್ಕೆ ತೆರವಿಗೆ ಅವಕಾಶ ನೀಡುವುದಿಲ್ಲ ಎಂದು ಜೆಸಿಬಿ ಎದುರು ನಿಂತು ಪ್ರತಿಭಟನೆಗೆ ಮುಂದಾದರು. ಆದರೆ ಅಧಿಕಾರಿಗಳು ಮಾತ್ರ ಅಕ್ರಮ ತೆರವು ನಿಲ್ಲಿಸಲಾಗುವುದು ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಮಾಲೀಕರು ಹಾಗೂ ಜನರು ತೆರವಿಗೆ ವಿರೋಧ ವ್ಯಕ್ತಪಡಿಸಲು ಮುಂದಾದಾಗ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ನಡೆಸಿದರು. ಇಷ್ಟಾದರೂ ಮಾಲೀಕರು ಮಾತ್ರ ಜೆಸಿಬಿ ಎದುರು ನಿಂತು ತೆರವು ತಡೆಗೆ ಆಗ್ರಹಿಸಿದರು. ಈ ಎಲ್ಲ ವಿರೋಧಗಳ ಮಧ್ಯೆ ಅಧಿಕಾರಿಗಳು ತೆರವು ಕಾರ್ಯ ನಡೆಸಿದರು. ಹುಡಾ ಸದಸ್ಯರಾದ ಚಂದ್ರಶೇಖರ ಗೋಕಾಕ, ಆಯುಕ್ತ ನಿಂಗಪ್ಪ ಕುಮ್ಮಣ್ಣವರ, ಟಿಪಿಎಂ ವಿವೇಕ ಕಾರೇಕರ, ಬಸವರಾಜ ದೇವಗಿರಿ, ಮುಕುಂದ ಜೋಶಿ ಸೇರಿದಂತೆ ಸಿಬ್ಬಂದಿ ಇದ್ದರು.

ಒಂದೂವರೆ ವರ್ಷದಲ್ಲಿ 177 ಅಕ್ರಮ ಲೇಔಟ್‌ ತೆರವು
ಕಳೆದ ಒಂದೂವರೆ ವರ್ಷದಿಂದ ಹುಡಾದಿಂದ ಹು-ಧಾ ಅವಳಿನಗರದಲ್ಲಿನ ಅನಧಿಕೃತ ಲೇಔಟ್‌ ತೆರವು ಕಾರ್ಯಾಚರಣೆ ಸಾಗಿದ್ದು, ಈಗಾಗಲೇ 177 ಅಕ್ರಮ ಲೇಔಟ್‌ ತೆರವು ಮಾಡಲಾಗಿದೆ. ಇದೀಗ ಮೂರನೇ ಹಂತದ ಸರ್ವೇ ಕಾರ್ಯ ಕೈಗೊಂಡಾಗ 97 ಅನಧಿಕೃತ ಲೇಔಟ್‌ ಪತ್ತೆಯಾಗಿದ್ದು, ತೆರವುಗೊಳಿಸಲು ನಿರ್ಧರಿಸಿದ್ದೇವೆ. ಈಗ ಹೊಸಯಲ್ಲಾಪುರದಲ್ಲಿ 37 ಅನಧಿಕೃತ ಲೇಔಟ್‌ ಕಂಡು ಬಂದಿದ್ದು, ತೆರವು ಕಾರ್ಯಕ್ಕೆ ಶುಕ್ರವಾರ ಚಾಲನೆ ನೀಡಿದ್ದು, ಶನಿವಾರವೂ ನಡೆಯಲಿದೆ. ಅನಧಿಕೃತ ಲೇಔಟ್‌ಗಳಿಂದ ಸರಕಾರಕ್ಕೆ ನಷ್ಟ ಉಂಟಾಗುತ್ತಿದ್ದು, ಲೇಔಟ್‌ ತೆರವು ಬಗ್ಗೆ ಮಾಲೀಕರಿಗೆ ನೋಟಿಸ್‌ ಕೊಡಲಾಗಿದೆ ಎಂದು ಹುಢಾ ಅಧ್ಯಕ್ಷ ನಾಗೇಶ ಕಲಬುರ್ಗಿ ಸ್ಪಷ್ಟಪಡಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸುಮಾರು 45 ಎಕರೆ ಜಮೀನು ಮಾತ್ರ ಲೇಔಟ್‌ಗೆ ಬರುತ್ತಿದ್ದವು. ಆದರೆ ಬಿಗಿಕ್ರಮ ಕೈಗೊಂಡ ಬಳಿಕ ಕೆಲ ದಿನಗಳ ಹಿಂದೆ ಸುಮಾರು 90 ಎಕರೆ ಜಮೀನು ಬಂದಿದೆ. ಭೂಮಿ ಪರಿವರ್ತನೆಗೆ ಅರ್ಜಿ ಸಲ್ಲಿಸಿದರೆ ಪರಿವರ್ತನೆ ಮಾಡಿಕೊಡಲಾಗುವುದು. ಈ ಕಾರ್ಯಕ್ಕೆ ಕಚೇರಿಗೆ ಬರುವ ಅಗತ್ಯವೂ ಇಲ್ಲ. ಎಲ್ಲವೂ ಆನ್‌ಲೈನ್‌ ಮೂಲಕವೇ ಇದೆ. ಅನಧಿಕೃತ ಲೇಔಟ್‌ ಬದಲು ಅಧಿಕೃತ ಲೇಔಟ್‌ ನಿರ್ಮಾಣ ಮಾಡಿದರೆ ಎಲ್ಲರಿಗೂ ಒಳಿತು.
ನಾಗೇಶ ಕಲಬುರ್ಗಿ, ಹುಡಾ ಅಧ್ಯಕ್ಷ

ಟಾಪ್ ನ್ಯೂಸ್

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Mahesh

Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-asdsdas

Yakshagana; ಖ್ಯಾತ ಪ್ರಸಾಧನ ಕಲಾವಿದ ಬಾಲಕೃಷ್ಣ ನಾಯಕ್‌ ವಿಧಿವಶ

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.