Union Budget 2024; ಸಮತೋಲಿತ-ಅಭಿವೃದ್ಧಿ ಪರ ಆಯ-ವ್ಯಯ: ಜಗದೀಶ ಶೆಟ್ಟರ್
Team Udayavani, Jul 23, 2024, 6:03 PM IST
ಹುಬ್ಬಳ್ಳಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಮಂಡಿಸಿರುವ 2024-25ನೇ ಸಾಲಿನ ಆಯ-ವ್ಯಯ ಸರ್ವ ವರ್ಗಗಳಿಗೂ ಸಮತೋಲನ ತೋರುವ ಹಾಗೂ ದೇಶವನ್ನು ಅಭಿವೃದ್ಧಿಯತ್ತ ತೆಗೆದುಕೊಂಡು ಹೋಗುವ ಉತ್ತಮ ಮುಂಗಡ ಪತ್ರವಾಗಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ (Jagadish Shettar) ಅಭಿಪ್ರಾಯಪಟ್ಟಿದ್ದಾರೆ.
ಬಡವರು, ರೈತರು, ಮಹಿಳೆಯರು, ಯುವಕರ ಹಿತ ಚಿಂತನೆ, ಕೈಗಾರಿಕಾ ಅಭಿವೃದ್ಧಿಗೆ ಆದ್ಯತೆಯೊಂದಿಗೆ 12 ಕೈಗಾರಿಕಾ ಪಾರ್ಕ್ಗಳನ್ನು ಸ್ಥಾಪಿಸುವುದರೊಂದಿಗೆ ಶಿಪ್ಪಿಂಗ್ ಉದ್ಯಮದಲ್ಲಿ ಉದ್ಯೋಗ ಸ್ಥಾಪನೆ, ಪಿಎಂ ಸ್ವನಿಧಿ ಯೋಜನೆ ಅನುಷ್ಠಾನಕ್ಕೂ ಹೆಚ್ಚಿನ ಒತ್ತು ನೀಡಲಾಗಿದೆ.
ಮುದ್ರಾ ಯೋಜನೆಯಡಿ ನೀಡುವ 10 ಲಕ್ಷ ರೂ.ಗಳವರೆಗಿನ ಸಾಲವನ್ನು 20 ಲಕ್ಷ ರೂ.ಗಳಿಗೆ ಹೆಚ್ಚಿಸಿರುವುದು, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನಾ ಹಂತ-4 ಅನುಷ್ಠಾನ, ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಮನೆಗಳ ನಿರ್ಮಾಣ, ನೌಕರರಿಗೆ ಆದಾಯ ತೆರಿಗೆಯಲ್ಲಿ ಲಾಭ ಕಲ್ಪಿಸಿರುವುದು, ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿಗಳಿಗೆ 10 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಹೀಗೆ ವಿವಿಧ ಸಕಾರಾತ್ಮಕ ಹಾಗೂ ಅಭಿವೃದ್ಧಿ ಪರ ಅಂಶಗಳೊಂದಿಗೆ ಕೇಂದ್ರ ಆಯ-ವ್ಯಯ ವಿಕಸಿತ ಭಾರತವಾಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ
Flight: ಹುಬ್ಬಳ್ಳಿ-ಅಹ್ಮದಾಬಾದ್ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ
Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು
Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ
Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.