ಕಲ್ಯಾಣ ರಾಜ್ಯ ನಿರ್ಮಾಣಕ್ಕೆ ಒಗ್ಗಟ್ಟು ಅಗತ್ಯ


Team Udayavani, Apr 12, 2017, 3:14 PM IST

hub5.jpg

ಧಾರವಾಡ: ಧಾರ್ಮಿಕ ತತ್ವ-ಸಿದ್ಧಾಂತದಡಿ ಜನಮನಕ್ಕೆ ಉತ್ತಮ ಸಂದೇಶ ನೀಡುವ ಸಂಘ-ಸಂಸ್ಥೆಗಳು ಹಾಗೂ ಚಿಂತನ ಮಂಥನದ ಮಂಟಪಗಳು ನಾಡಿನಾದ್ಯಂತ ನಿರ್ಮಾಣವಾದರೆ ಈ ನಾಡು ಕಲ್ಯಾಣ ರಾಜ್ಯ ಆಗುತ್ತದೆ ಎಂದು ಬಸವಧರ್ಮ ಪೀಠದ ಶ್ರೀ ಗಂಗಾಮಾತಾಜಿ ಹೇಳಿದರು. 

ಗುಲಗಂಜಿಕೊಪ್ಪದ ಸೋನಾಪುರದಲ್ಲಿ ಬಸವಧರ್ಮ ಅಭಿವೃದ್ದಿ ಸಂಸ್ಥೆ ವತಿಯಿಂದ ನಿರ್ಮಿಸಿದ ಬಸವ ಮಂಟಪದ ಉದ್ಘಾಟನೆ ಹಾಗೂ ವಿಶ್ವಗುರು ಬಸವಣ್ಣನವರ ಮೂರ್ತಿ ಪ್ರತಿಷ್ಠಾಪನೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಧಾರವಾಡದಲ್ಲಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಈ ಬಸವ ಮಂಟಪ ರಚನೆಯಾಗಿದ್ದು, ಇಲ್ಲಿ ಆಧ್ಯಾತ್ಮಿಕ ಚಿಂತನೆಗಳು ನಿರಂತರವಾಗಿ ನಡೆಯಬೇಕಿದೆ ಎಂದರು. 

ಜನರು ಸತ್ಯ ಶುದ್ಧ ಕಾಯಕ ಮಾಡಿ ಸಮಾಜ ಸೇವೆ ಮಾಡುವುದನ್ನು ರೂಢಿಸಿಕೊಂಡಾಗ ಇಂತಹ ಚಿಂತನೆಗಳು ಹೊರ ಬಂದು ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತವೆ. ಸದ್ವಿಚಾರ ಚಿಂತನೆಗಳು, ಉಪನ್ಯಾಸಗಳು ಮಂದಿರ, ಮಠ, ಮಂಟಪಗಳಲ್ಲಿ ನಡೆಯುವುದರಿಂದ ಮಕ್ಕಳು ಮುಂದಿನ ಸತ್ಪಜೆಗಳಾಗಲು ಸಾಧ್ಯ ಎಂದರು. 

ಬಸವಾದಿ ಶರಣರ ವಚನ ಚಿಂತನೆ, ಸಂಗೀತ ಕಾರ್ಯಕ್ರಮ ಹಾಗೂ ವಚನ ನೃತ್ಯ ಸೇರಿದಂತೆ ಹಲವಾರು ಧಾರ್ಮಿಕ ಸಮಾರಂಭ ನೆರವೇರಿಸುವ ಉದ್ದೇಶದಿಂದ ಮಂಟಪ ರಚನೆ ಮಾಡಲಾಗಿದೆ. ಜನಮನದಲ್ಲಿ ಆಳವಾದ ಅಧ್ಯಯನ ಮತ್ತು ಮೌಲ್ವಿಕ ತತ್ವಗಳು ಬೇರೂರಬೇಕಿದ್ದು ಸಮಯಾವಕಾಶ ಮಾಡಿಕೊಂಡು ಪ್ರಾರ್ಥನೆ ಹಾಗೂ ಚಿಂತನಾ ಕಾರ್ಯಕ್ರಮಗಳನ್ನು ಹೆಚ್ಚಿಸಬೇಕು ಎಂದರು. 

ಕುಂಬಳಗೋಡಿನ ಬಸವ ಗಂಗೋತ್ರಿಯ ಶ್ರೀ ಚನ್ನಬಸವಾನಂದ ಸ್ವಾಮೀಜಿ ಅವರು ವಚನ ತಾಂಬೂಲ ನೆನಪಿನ ಕಾಣಿಕೆ ಬಿಡುಗಡೆಗೊಳಿಸಿದರು. ಅಕ್ಕಮಹಾದೇವಿ ಅನುಭಾವ ಪೀಠದ ಶ್ರೀ ಸತ್ಯಾದೇವಿ ಮಾತಾಜಿ ಸಾನ್ನಿಧ್ಯ ವಹಿಸಿದ್ದರು. ನೀಲಾಂಬಿಕೆ ಇಂಗಳಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಸೂರ್ಯಕಾಂತ ಶೀಲವಂತ ಷಟಸ್ಥಳ ಧ್ವಜಾರೋಹಣ ನೆರವೇರಿಸಿದರು.

ಲಿಂಗಾಯತ ಧರ್ಮ ಮಹಾಸಭಾ ಅಧ್ಯಕ್ಷ ಕೆ. ಬಸವರಾಜಪ್ಪ, ಕಗ್ಗೊàಡ ರಾಷ್ಟ್ರೀಯ ಬಸವದಳ ಅಧ್ಯಕ್ಷ ಬಸವರಾಜ ಕೊಂಡಗೋಳಿ, ಅಶೋಕ ಶೀಲವಂತ, ಶಿವಾನಂದ ಲೋಲೆನವರ, ಮಂಜುನಾಥ ಚೋಳಪ್ಪನವರ ಇದ್ದರು. ದೇವೆಂದ್ರಪ್ಪ ಇಂಗಳಹಳ್ಳಿ ನಿರೂಪಿಸಿದರು. ಮಂಜುನಾಥ ಅಂಗಡಿ ಪ್ರಾಸ್ತಾವಿಕ ಮಾತನಾಡಿದರು. ಮಹಾದೇವ ನ್ಯಾಮತಿ ಸ್ವಾಗತಿಸಿದರು. ಶಿವಾನಂದ ಅಬಲೂರ ವಂದಿಸಿದರು.  

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.