ವರ್ಷಾಂತ್ಯಕ್ಕೆ ಪ್ರತಿಯೊಬ್ಬರಿಗೂ ಲಸಿಕೆ

ರಾಜಕೀಯ ಆರೋಪಗಳಿಗೆ ಇದು ಕಾಲವಲ್ಲ­ವಾಸ್ತವ ಅರಿಯದೆ ಟೀಕೆ ಮಾಡುವುದು ಸಲ್ಲ: ಜೋಶಿ

Team Udayavani, Jun 13, 2021, 4:30 PM IST

fb_img_1623523752997

ಹುಬ್ಬಳ್ಳಿ: ಕೋವಿಡ್‌ ನಿರ್ವಹಣೆ ಹಾಗೂ ಲಸಿಕೆ ವಿಚಾರದಲ್ಲಿ ವಾಸ್ತವ ಅರಿಯದೆ ಅನೇಕರು ಟೀಕೆಗಳನ್ನು ಮಾಡುತ್ತಿದ್ದಾರೆ. ಕೇಂದ್ರ-ರಾಜ್ಯ ಸರಕಾರ ಶಕ್ತಿಮೀರಿ ಪ್ರಯತ್ನಿಸುತ್ತಿದ್ದು, ಡಿಸೆಂಬರ್‌ ಅಂತ್ಯದ ವೇಳೆಗೆ ದೇಶದ ಪ್ರತಿಯೊಬ್ಬರಿಗೂ ಲಸಿಕೆ ದೊರೆಯುವುದು ಖಚಿತ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಕಿಮ್ಸ್‌ ಆವರಣದಲ್ಲಿ ವೇದಾಂತ ಕಂಪೆನಿ ನಿರ್ಮಿಸಿರುವ ಕೋವಿಡ್‌ ನಿರ್ವಹಣೆಯ ಆಸ್ಪತ್ರೆ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ರಾಜಕೀಯ ಆರೋಪಗಳಿಗೆ ಕಾಲ ಇದಲ್ಲ. ಸಂಕಷ್ಟ ಸ್ಥಿತಿಯಲ್ಲಿ ಸಹಕಾರ-ಪ್ರೋತ್ಸಾಹ ನೀಡುವ ಬದಲು ಸರಕಾರಗಳು ಏನು ಮಾಡಿಲ್ಲ ಎಂದು ಆರೋಪ ಮಾಡುವುದು ಸರಿಯಲ್ಲ. ವಾಸ್ತವದ ಸ್ಥಿತಿ ಅರಿತು ಮಾತನಾಡಬೇಕು. ರಚನಾತ್ಮಕ ಸಲಹೆ ನೀಡುವುದು ಸಹ ವಿಪಕ್ಷಗಳ ಗುರುತರ ಜವಾಬ್ದಾರಿಯಾಗಿದೆ ಎಂದರು.

ಕೋವಿಡ್‌ ಕುರಿತ ಯಾವುದೇ ತಜ್ಞರ ಸಮಿತಿಯೂ ಎರಡನೇ ಅಲೆ ಈ ಪ್ರಮಾಣದಲ್ಲಿ ಬರುತ್ತದೆ, ಇಂತಿಷ್ಟು ಆಕ್ಸಿಜನ್‌ ಗೆ ಬೇಡಿಕೆ ಬರುತ್ತದೆ ಎಂದು ಹೇಳಿರಲಿಲ್ಲ. ಎಲ್ಲ ಲೆಕ್ಕಾಚಾರಗಳನ್ನು ಮೀರಿ ಕೊರೊನಾ ವ್ಯಾಪಿಸಿತು. ಸುಮಾರು 900-1000 ಮೆಟ್ರಿಕ್‌ ಟನ್‌ ಬೇಡಿಕೆ ಇದ್ದ ವೈದ್ಯಕೀಯ ಬಳಕೆ ಆಕ್ಸಿಜನ್‌ ಕೆಲವೇ ದಿನಗಳಲ್ಲಿ 17 ಸಾವಿರ ಮೆಟ್ರಿಕ್‌ ಟನ್‌ಗೆ ಹೆಚ್ಚಿದಾಗ ಎಲ್ಲಿಂದ ತರುವುದು. ಸಂಕಷ್ಟ ಸ್ಥಿತಿಯಲ್ಲಿಯೇ ಕೇವಲ 10-12 ದಿನಗಳಲ್ಲಿಯೇ ದೇಶದಲ್ಲಿ ಆಕ್ಸಿಜನ್‌ ಉತ್ಪಾದನೆಯನ್ನು 9000-9,500 ಮೆಟ್ರಿಕ್‌ ಟನ್‌ಗೆ ಹೆಚ್ಚಿಸಲಾಯಿತು. ವಿದೇಶಗಳಿಂದ ವಿಮಾನಗಳಲ್ಲಿ ಆಕ್ಸಿಜನ್‌ ತರಿಸಲಾಯಿತು ಎಂದು ಹೇಳಿದರು.

ವಿಶೇಷ ರೈಲುಗಳ ಮೂಲಕ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ 28,470 ಮೆಟ್ರಿಕ್‌ ಟನ್‌ನಷ್ಟು ಆಕ್ಸಿಜನ್‌ ಪೂರೈಸಲಾಗಿದೆ. ಆಕ್ಸಿಜನ್‌ ಉತ್ಪಾದನೆಯಾದರೂ, ಸಾಗಣೆಗೆ ವಾಹನಗಳ ವ್ಯವಸ್ಥೆ ಸಮಸ್ಯೆ ಎದುರಾಗಿತ್ತು ಎಂದರು. ಕೋವಿಡ್‌ ನಿರ್ವಹಣೆಗೆ ಸಿಎಸ್‌ಆರ್‌ ನಿಧಿ ಯಲ್ಲಿ ಆಸ್ಪತ್ರೆ ಆರಂಭಿಸುವಂತೆ ತಾವು ಮಾಡಿದ ಮನವಿಗೆ ವೇದಾಂತ ಕಂಪೆನಿ ಚೇರ¾ನ್‌ ಅನಿಲ್‌ ಅಗರ್‌ವಾಲ್‌ ಅವರು ಸ್ಪಂದಿಸಿ ಚಿತ್ರದುರ್ಗ ಹಾಗೂ ಹುಬ್ಬಳ್ಳಿಯಲ್ಲಿ ಆಸ್ಪತ್ರೆ ಆರಂಭಿಸಿದ್ದಾರೆ. ಹುಬ್ಬಳ್ಳಿಯಲ್ಲಿ 100 ಹಾಸಿಗೆ ಆಸ್ಪತ್ರೆಯನ್ನು ಕಂಪೆನಿಯೇ ನಿರ್ವಹಣೆ ಮಾಡಲಿದ್ದು, ರೋಗಿಗಳಿಗೆ ಊಟವನ್ನು ಸಹ ನೀಡಲಿದ್ದಾರೆ. ಕಿಮ್ಸ್‌ನಿಂದ ವೈದ್ಯರು, ಸಿಬ್ಬಂದಿ ನೀಡಿದರೆ ಸಾಕು ಎಂದು ಹೇಳಿದರು. ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ, ಶಾಸಕರಾದ ಪ್ರಸಾದ ಅಬ್ಬಯ್ಯ, ಪ್ರದೀಪ ಶೆಟ್ಟರ ಇನ್ನಿತರರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.