ವಾಕರಸಾ ಸಂಸ್ಥೆಗೆ ಪಿಎಸ್ಯು ಅವಾರ್ಡ್-17
Team Udayavani, Feb 1, 2017, 12:35 PM IST
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ (ವಾಕರಸಾ) ಸಂಸ್ಥೆಯಲ್ಲಿ ಜಾರಿಗೊಳಿಸಲಾದ ತಂತ್ರಾಂಶದ ಆಧಾರಿತ ರಜೆ ಅರ್ಜಿ ನಿರ್ವಹಣಾ ವ್ಯವಸ್ಥೆಗೆ ಪಿಎಸ್ಯು ಅವಾರ್ಡ್-2017ರ ಪುರಸ್ಕಾರ ದೊರೆತಿದೆ. ಸಂಸ್ಥೆಯ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾಲನಾ ಸಿಬ್ಬಂದಿಗಳಿಗೆ ರಜೆಯನ್ನು ಮಾನವ ಆಧಾರಿತ ಪದ್ಧತಿಯಲ್ಲಿ ನೀಡಲಾಗುತ್ತಿತ್ತು.
ಇದರಿಂದ ಎಲ್ಲಾ ಸಿಬ್ಬಂದಿಗೆ ಸಮರ್ಪಕ ರಜೆ ಮಂಜೂರಾತಿ ಮಾಡಲು ಅನಾನುಕೂಲವಾಗುತ್ತಿತ್ತು. ಇದನ್ನು ಮನಗಂಡು ಆಡಳಿತದಲ್ಲಿ ಪಾರದರ್ಶದಕತೆಯೊಂದಿಗೆ ಕಾರ್ಮಿಕರಿಗೆ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಮಾಹಿತಿ ತಂತ್ರಜ್ಞಾನ ಇಲಾಖೆಯಿಂದ “ಸ್ಮಾರ್ಟ್ ಲೀವ್ ಅಪ್ಲಿಕೇಶನ್ ಮ್ಯಾನೇಜಮೆಂಟ್ ಸಿಸ್ಟಮ್’ ತಂತ್ರಾಂಶ ಅಭಿವೃದ್ಧಿಪಡಿಸಲಾಗಿತ್ತು.
ಇದಕ್ಕಾಗಿ 6 ಸಾವಿರ ರೂ. ವೆಚ್ಚ ಮಾಡಲಾಗಿತ್ತು. ಇದರಿಂದಾಗಿಸಂಸ್ಥೆಯ ಎಲ್ಲಾ 49 ಘಟಕಗಳಿಗೆ ಖರೀದಿಸಬೇಕಾದ ರಜೆ ಕಿಯೊಸ್ಕ್ ಯಂತ್ರಗಳಿಗೆ ತಗಲುವ 4 ಕೋಟಿ ರೂ. ಹಣವು ಉಳಿತಾಯವಾಗಿದೆ. ಈ ತಂತ್ರಾಂಶದ ಕುರಿತು ಪಿಎಸ್ಯು ಸಮ್ಮಿಟ್ ದೆಹಲಿಯಿಂದ ಆಹ್ವಾನಿಸಲಾದ ಪಿಎಸ್ಯು ಅವಾರ್ಡ್-2017ಕ್ಕೆಸಂಸ್ಥೆಯಿಂದ ಅರ್ಜಿ ಸಲ್ಲಿಸಲಾಗಿತ್ತು.
ಇದನ್ನು ಪರಿಗಣಿಸಿ ವಾಕರಸಾ ಸಂಸ್ಥೆಗೆ ಪಿಎಸ್ಯು ಅವಾರ್ಡ್-2017 ಪ್ರಶಸ್ತಿ ಲಭಿಸಿದೆ. ಮಂಗಳವಾರ ದೆಹಲಿಯಲ್ಲಿ ಆಯೋಜಿಸಲಾದ 3ನೇ ಇಲೆಟ್ಸ್ ಪಿಎಸ್ ಯು ಸಮ್ಮಿಟ್ 2017ರ ಸಮಾರಂಭದಲ್ಲಿ ಗೌವರ್ನಿಂಗ್ ಮಿನಿಸ್ಟ್ರೀ ಆಫ್ ಶಾಪಿಂಗ್ನ ವಿನಿತ್ ಗೋಯಂಕಾ ಅವರು ವಾಕರಗೆ ಸಂಸ್ಥೆಗೆ ಪ್ರಶಸ್ತಿ ಪ್ರದಾನ ಮಾಡಿದರು.
ಸಂಸ್ಥೆಯ ಪರವಾಗಿ ಮುಖ್ಯ ಗಣಕವ್ಯವಸ್ಥಾಪಕ ಡಾ| ಕೆ.ಎನ್. ಇಂಗಳಗಿ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿಯು ವಾಕರಸಾ ಸಂಸ್ಥೆಯ ಎಲ್ಲಾ ಅಧಿಕಾರಿ ಮತ್ತು ನೌಕರರ ಪರಿಶ್ರಮದ ಪ್ರತಿಫಲವಾಗಿದೆ. ಆದ್ದರಿಂದ ಈ ಪ್ರಶಸ್ತಿಯನ್ನು ಸಮಗ್ರ ನೌಕರರ ವರ್ಗಕ್ಕೆ ಸಮರ್ಪಿಸುವುದಾಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಆರ್. ವಿನೋತ್ಪ್ರಿಯಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
MUDA Case: ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್
Hubli; ಕೋರ್ಟ್ ಆದೇಶಕ್ಕೆ ತಲೆಬಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಪ್ರಮೋದ ಮುತಾಲಿಕ್
Hubli: ಗೌರವ ಉಳಿಯಬೇಕೆಂದರೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಬಸವರಾಜ ಬೊಮ್ಮಾಯಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
BCCI: ಇಂದು ಬಿಸಿಸಿಐ ವಾರ್ಷಿಕ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.