ಅನಾಹುತ ಸಂಭವಿಸಿದ ನಂತರವೇ ಎಚ್ಚರಾಗೋದಾ?


Team Udayavani, Nov 22, 2017, 12:49 PM IST

h3-anahuta.jpg

ಹುಬ್ಬಳ್ಳಿ: ಅದು ಸರಿಸುಮಾರು ಒಂದುವರೆ ಶತಮಾನದ ಇತಿಹಾಸ ಹೊಂದಿದ ಶಾಲೆ. ಕಟ್ಟಡ ಶಿಥಿಲಗೊಂಡು ಯಾವಾಗ ಏನು ಅನಾಹುತ ಕಾದಿದೆಯೋ ಎಂಬ ಆತಂಕದಲ್ಲೇ ವಿದ್ಯಾರ್ಥಿಗಳು, ಶಿಕ್ಷಕರು ದಿನದೂಡಬೇಕಾಗಿದೆ. ಕಟ್ಟಡ ಅಪಾಯಕರ ಸ್ಥಿತಿಯಲ್ಲಿದ್ದರೂ ಇದರ ತೆರವಿಗೆ ಶಿಕ್ಷಣ ಇಲಾಖೆ ಇನ್ನೂ ಮನಸ್ಸು ಮಾಡಿಲ್ಲ. 

ಏನಾದರೂ ಅನಾಹುತವಾದ ಮೇಲೆ ನೋಡಿದರಾಯಿತು ಎಂದು ಕುಳಿತಿದೆಯೋ ಏನೋ. -ಇದು, ಇಲ್ಲಿನ ಪೆಂಡರಾಗಲ್ಲಿಯ  ಸರಕಾರಿ ಮಾದರಿ ಕನ್ನಡ ಹೆಣ್ಣು ಮಕ್ಕಳ ಶಾಲೆ ನಂ. 2ರ ದುಸ್ಥಿತಿ. 1861ರಲ್ಲಿ ಆರಂಭವಾದ ಈ ಶಾಲೆ ಸಾವಿರಾರು ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ವೇದಿಕೆಯಾಗಿದೆ.

ಇದೇ ಶಾಲೆಯಲ್ಲಿ ಕಲಿತ ಅನೇಕರು ಉತ್ತಮ ಸ್ಥಾನದಲ್ಲಿಯೂ ಇದ್ದಾರೆ. ಕಟ್ಟಡ ಶಿಥಿಲಗೊಂಡಿದೆ ಎಂದು ಶಿಕ್ಷಣ ಇಲಾಖೆಗೆ ಮನವಿ ಮಾಡಿದರೂ ಪ್ರಯೋಜವಾಗಿಲ್ಲ. ಶಿಕ್ಷಣ ಇಲಾಖೆ ತನ್ನ ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂಬ ಆರೋಪ ಪಾಲಕರದ್ದು.

ಶಾಲೆಯ ಹೊರಭಾಗದ   ಮೇಲ್ಛಾವಣಿ ಸಂಪೂರ್ಣ ಹಾಳಾಗಿದ್ದು, ಕಟ್ಟಡದ ಸುತ್ತಲು ಇರುವ ಸಜ್ಜಾ ಕಿತ್ತು ಹೋಗಿದೆ. ಒಳಭಾಗದಲ್ಲಿರುವ ಕಟ್ಟಡ ಗೋಡೆಗೆ ಹೊಂದಿಕೊಂಡು ಸೋರುತ್ತಿದೆ. ಮಳೆ ಬಂದರೆ ಮಕ್ಕಳು ಸೋರಿಕೆ ಕಟ್ಟಡದಲ್ಲೇ ಪಾಠ ಕೇಳಬೇಕು.

ಶೌಚಾಲಯದ ಮೇಲ್ಛಾವಣಿ ಸಂಪೂರ್ಣ ಶಿಥಿಲಗೊಂಡಿದ್ದು ಇಂದೋ ನಾಳೆಯೋ ಬೀಳುವಂತಿದೆ. ಈ ಹಿಂದೆ ಇದೇ ಕಟ್ಟಡದಲ್ಲಿದ್ದ ಪ್ರೌಢಶಾಲೆಯ ಮುಖ್ಯಾಧ್ಯಾಪಕರ ಕೊಠಡಿಯಲ್ಲಿ ಮೇಲ್ಭಾಗದ ಸಜ್ಜಾ ಕುಸಿದು ಬಿದ್ದಿದ್ದು, ಕಬ್ಬಿಣದ ಸರಳುಗಳು ಕಾಣುತ್ತಿವೆ.

ಮೇಲ್ಛಾವಣಿ ಕುಸಿದು ಬಿದ್ದಾಗ ಮಕ್ಕಳು ಹಾಗೂ ಸಿಬ್ಬಂದಿ ಗಾಯಗೊಂಡಿದ್ದರು. ನ. 20ರಂದು ಶಾಲೆಯ ಗೋಡೆಯ ಭಾಗ ಕುಸಿದು ಬಿದ್ದು ಇಬ್ಬರು ಆಯಾಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಕ್ಕಳ ಮೇಲೆ ಗೋಡೆ ಬಿದ್ದರೆ ಗತಿ ಏನು ಎಂಬುದು ಶಿಕ್ಷಕರು ಹಾಗೂ ಪಾಲಕರ ಆತಂಕವಾಗಿದೆ.

ಕಟ್ಟಡದಲ್ಲಿ ಒಟ್ಟು 17 ಕೊಠಡಿಗಳಿದ್ದು ಸುಮಾರು 7 ಶಿಕ್ಷಕರು ಹಾಗೂ 128 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇತ್ತೀಚೆಗೆ ಪ್ರೌಢಶಾಲೆಯ ಕಟ್ಟಡ ನೂತನವಾಗಿ ನಿರ್ಮಾಣ ಮಾಡಲಾಗಿದೆ. ಆದರೆ ಪ್ರಾಥಮಿಕ ಶಾಲೆ ಮಾತ್ರ ಹಳೇ ಕಟ್ಟಡದಲ್ಲಿಯೇ ಮುಂದುವರಿದಿದೆ.

ಹಲವು ಬಾರಿ ಮನವಿ: ಶಾಲೆ ಕಟ್ಟಡ ನವೀಕರಣಕ್ಕೆ 2012 ಹಾಗೂ 2014ರಲ್ಲಿ ಶಿಕ್ಷಣ ಇಲಾಖೆಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ಇಲ್ಲವಾಗಿದೆ. ಸೋಮವಾರ ಬೆಳಗ್ಗೆ ಎಂದಿನಂತೆ ಶಾಲೆ ಕೆಲಸಕ್ಕೆ ಹಾಜರಾಗಿ ಮೇಲ್ಭಾಗ ಕೊಠಡಿ ಸ್ವತ್ಛತೆಗೆ ತೆರಳಿದ್ದಾಗ ಕಟ್ಟಡ ಗೋಡೆ ಕುಸಿದು ಬಿತ್ತು.

ಗೋಡೆಯ ಸಿಮೆಂಟ್‌ ಗಿಲಾವ್‌ ಮಾಡಿರುವ ಪದರುಗಳು ಮೈ ಮೇಲೆಲ್ಲಾ ಬಿದ್ದವು. ನಮಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಕ್ಕಳಿದ್ದರೆ ಏನು ಗತಿ ಎಂಬುದು ಶಾಲೆಯ ಆಯಾಗಳಾದ ವಿದ್ಯಾ ನಾಶಿಪುಡಿ ಹಾಗೂ ಶೋಭಾ ಹಡಪದ ಅವರ ಮಾತು. 

* ಬಸವರಾಜ ಹೂಗಾರ

ಟಾಪ್ ನ್ಯೂಸ್

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

8

Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್‌-ಯುವಕನಿಗೆ ಮರುಜನ್ಮ

Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್‌-ಯುವಕನಿಗೆ ಮರುಜನ್ಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.