ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನೇಕಾರರ ಪ್ರತಿಭಟನೆ

•ಗುಣಮಟ್ಟ ನೆಪದಲ್ಲಿ ನೇಕಾರರಿಗೆ ವಿನಾಕಾರಣ ಕಿರುಕುಳ ಆರೋಪ•ಕೈಮಗ್ಗ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಕಿಡಿ

Team Udayavani, Jun 14, 2019, 1:24 PM IST

hubali-tdy-4..

ಹುಬ್ಬಳ್ಳಿ: ವಿದ್ಯಾನಗರದಲ್ಲಿರುವ ಕೈಮಗ್ಗ ಅಭಿವೃದ್ಧಿ ನಿಗಮದ ಪ್ರಧಾನ ಕಚೇರಿ ಮುಂಭಾಗದಲ್ಲಿ ಕೈಮಗ್ಗ ನೇಕಾರರು ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕೈಮಗ್ಗ ನೇಕಾರರು ವಿದ್ಯಾನಗರದ ಕೈಮಗ್ಗ ಅಭಿವೃದ್ಧಿ ನಿಗಮದ ಪ್ರಧಾನ ಕಚೇರಿ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಸಂಘದ ಉಪಾಧ್ಯಕ್ಷ ಎನ್‌.ಜೆ. ಮಾಳವದೆ ಮಾತನಾಡಿ, ಗುಣಮಟ್ಟದ ನೆಪದಲ್ಲಿ ನೇಕಾರರಿಗೆ ವಿನಾಕಾರಣ ಕಿರುಕುಳ ನೀಡಲಾಗುತ್ತಿದೆ. ನೇಯ್ದ ಬಟ್ಟೆಯನ್ನು ಖರೀದಿ ಮಾಡದಿರುವುದು ನೇಕಾರರಿಗೆ ದೊಡ್ಡ ಸಮಸ್ಯೆಯಾಗಿದ್ದು, ನಷ್ಟ ಅನುಭವಿಸುವಂತಾಗಿದೆ. ನೇಕಾರರಿಗೆ ಉದ್ಯೋಗ ನೀಡದೆ ಹೊರಗಿನಿಂದ ಬಟ್ಟೆ ಖರೀದಿ ಮಾಡುತ್ತಿರುವುದು ನಿಯಮ ಬಾಹಿರವಾಗಿದೆ ಎಂದು ಆರೋಪಿಸಿದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರ ಸುಮಾರು 80 ಕೋಟಿ ರೂ. ಮೌಲ್ಯದ ಬಟ್ಟೆಯನ್ನು ಹೊರಗಿನಿಂದ ಖರೀದಿ ಮಾಡಿದ್ದಾರೆ. ನಷ್ಟದ ಹೆಸರಲ್ಲಿ ಹಲವು ಮಗ್ಗಗಳನ್ನು ಮುಚ್ಚಿಸಲಾಗಿದೆ. ವ್ಯವಸ್ಥಾಪಕ ನಿರ್ದೇಶಕರು ನೇಕಾರರ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಇಂತಹ ಎಂಡಿಯನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದರು.

ಸಂಘದ ಉಪಾಧ್ಯಕ್ಷ ವಿಠಪ್ಪ ಗೋರಂಟ್ಲಿ ಮಾತನಾಡಿ, ಕಳೆದ ಒಂದು ವರ್ಷದಿಂದ ನೇಕಾರರಿಗೆ ನೀಡುತ್ತಿದ್ದ ಇನ್ಸೆಂಟಿವ್‌ ಸ್ಥಗಿತಗೊಂಡಿದೆ. ಮಕ್ಕಳಿಗೆ ವಿದ್ಯಾರ್ಥಿ ವೇತನ ಬರುತ್ತಿಲ್ಲ. ಆರೋಗ್ಯದ ಬಗ್ಗೆ ಯಾವುದೇ ಚಿಂತನೆ ಮಾಡುತ್ತಿಲ್ಲ. ನಿಗಮದಲ್ಲಿದ್ದ ಎಸ್‌ಇಪಿ ಹಣ ಸರಕಾರಕ್ಕೆ ವಾಪಸ್‌ ಕಳುಹಿಸುವ ಮೂಲಕ ಕೈಮಗ್ಗ ನೇಕಾರರ ವಿರೋಧಿ ಧೋರಣೆ ಅನುಸರಿಸಲಾಗುತ್ತಿದೆ. ನೇಕಾರರಿಂದ ನಿಗಮಕ್ಕೆ ಯಾವುದೇ ನಷ್ಟವಾಗಿಲ್ಲ. ಅಧಿಕಾರಿಗಳ ದುಂದುವೆಚ್ಚ ಹಾಗೂ ನಿರ್ಲಕ್ಷ್ಯದಿಂದ ನಿಗಮ ನಷ್ಟದಲ್ಲಿದೆ ಎಂದು ಹೇಳಿದರು.

ಜಿಲ್ಲಾಧ್ಯಕ್ಷ ನಾಗಪ್ಪ ಬನ್ನಿಗಿಡದ, ಬಸವರಾಜ ಗಣಪಾ, ಸುರೇಶ ಗಣಮುಖೀ ಇನ್ನಿತರರಿದ್ದರು.

180 ಕೋಟಿ ನಷ್ಟದಲ್ಲಿದೆ ಕೈಮಗ್ಗ ಅಭಿವೃದ್ಧಿ ನಿಗಮ:

 ಕೈಮಗ್ಗ ಅಭಿವೃದ್ಧಿ ನಿಗಮ ಕಳೆದ ವರ್ಷ ಸುಮಾರು 2 ಕೋಟಿ ರೂ. ನಷ್ಟ ಅನುಭವಿಸಿದ್ದು, ಇದುವರೆಗೆ ಸುಮಾರು 180 ಕೋಟಿ ರೂ. ನಷ್ಟದಲ್ಲಿದೆ ಎಂದು ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕಚೇರಿ ಸಿಬ್ಬಂದಿಗೆ 2 ತಿಂಗಳಿನಿಂದ ವೇತನ ನೀಡಿರಲಿಲ್ಲ. ಸರ್ಕಾರದಿಂದ ಒಂದಿಷ್ಟು ಹಣ ಬಂದ ಕಾರಣ ಅವರಿಗೆ ವೇತನ ಪಾವತಿಸಲಾಗಿದೆ. ಇತ್ತೀಚೆಗೆ ಸರ್ಕಾರದಿಂದ 28 ಕೋಟಿ ಬಂದಿತ್ತು. ಇದರಲ್ಲಿ ನಿವೃತ್ತ ನೌಕರರಿಗೆ ಸೌಲಭ್ಯ ಕಲ್ಪಿಸಬೇಕೆಂದು ಸೂಚಿಸಿದ್ದರಿಂದ ಅದಕ್ಕೆ ಬಳಸಿಕೊಳ್ಳಲಾಗಿದೆ. ನಿಗಮದ ಅಭಿವೃದ್ಧಿಗೆ ಅಗತ್ಯ ಕ್ರಮಕ್ಕೆ ಚಿಂತನೆ ನಡೆದಿದೆ. ಸರ್ಕಾರದ 2017ರ ನಿಗಮದ ಮರುವಿನ್ಯಾಸದ ಪ್ರಕಾರ ನಷ್ಟದಲ್ಲಿರುವ ಘಟಕಗಳನ್ನು ಬಂದ್‌ ಮಾಡಲು ಸೂಚಿಸಿದೆ. ಅದರಂತೆ ರಾಜ್ಯದಲ್ಲಿದ್ದ 52 ಪ್ರಿಯದರ್ಶಿನಿ ಮಳಿಗೆ ಪೈಕಿ 26 ಹಾಗೂ ವಿವಿಧ ಘಟಕ ಸ್ಥಗಿತಗೊಳಿಸಲಾಗಿದೆ. ಅಲ್ಲಿನ ಸಿಬ್ಬಂದಿ ಬೇರೆಡೆಗೆ ನಿಯೋಜಿಸಲಾಗಿದೆ ಎಂದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.