![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 14, 2019, 1:24 PM IST
ಹುಬ್ಬಳ್ಳಿ: ವಿದ್ಯಾನಗರದಲ್ಲಿರುವ ಕೈಮಗ್ಗ ಅಭಿವೃದ್ಧಿ ನಿಗಮದ ಪ್ರಧಾನ ಕಚೇರಿ ಮುಂಭಾಗದಲ್ಲಿ ಕೈಮಗ್ಗ ನೇಕಾರರು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕೈಮಗ್ಗ ನೇಕಾರರು ವಿದ್ಯಾನಗರದ ಕೈಮಗ್ಗ ಅಭಿವೃದ್ಧಿ ನಿಗಮದ ಪ್ರಧಾನ ಕಚೇರಿ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಸಂಘದ ಉಪಾಧ್ಯಕ್ಷ ಎನ್.ಜೆ. ಮಾಳವದೆ ಮಾತನಾಡಿ, ಗುಣಮಟ್ಟದ ನೆಪದಲ್ಲಿ ನೇಕಾರರಿಗೆ ವಿನಾಕಾರಣ ಕಿರುಕುಳ ನೀಡಲಾಗುತ್ತಿದೆ. ನೇಯ್ದ ಬಟ್ಟೆಯನ್ನು ಖರೀದಿ ಮಾಡದಿರುವುದು ನೇಕಾರರಿಗೆ ದೊಡ್ಡ ಸಮಸ್ಯೆಯಾಗಿದ್ದು, ನಷ್ಟ ಅನುಭವಿಸುವಂತಾಗಿದೆ. ನೇಕಾರರಿಗೆ ಉದ್ಯೋಗ ನೀಡದೆ ಹೊರಗಿನಿಂದ ಬಟ್ಟೆ ಖರೀದಿ ಮಾಡುತ್ತಿರುವುದು ನಿಯಮ ಬಾಹಿರವಾಗಿದೆ ಎಂದು ಆರೋಪಿಸಿದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರ ಸುಮಾರು 80 ಕೋಟಿ ರೂ. ಮೌಲ್ಯದ ಬಟ್ಟೆಯನ್ನು ಹೊರಗಿನಿಂದ ಖರೀದಿ ಮಾಡಿದ್ದಾರೆ. ನಷ್ಟದ ಹೆಸರಲ್ಲಿ ಹಲವು ಮಗ್ಗಗಳನ್ನು ಮುಚ್ಚಿಸಲಾಗಿದೆ. ವ್ಯವಸ್ಥಾಪಕ ನಿರ್ದೇಶಕರು ನೇಕಾರರ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಇಂತಹ ಎಂಡಿಯನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದರು.
ಸಂಘದ ಉಪಾಧ್ಯಕ್ಷ ವಿಠಪ್ಪ ಗೋರಂಟ್ಲಿ ಮಾತನಾಡಿ, ಕಳೆದ ಒಂದು ವರ್ಷದಿಂದ ನೇಕಾರರಿಗೆ ನೀಡುತ್ತಿದ್ದ ಇನ್ಸೆಂಟಿವ್ ಸ್ಥಗಿತಗೊಂಡಿದೆ. ಮಕ್ಕಳಿಗೆ ವಿದ್ಯಾರ್ಥಿ ವೇತನ ಬರುತ್ತಿಲ್ಲ. ಆರೋಗ್ಯದ ಬಗ್ಗೆ ಯಾವುದೇ ಚಿಂತನೆ ಮಾಡುತ್ತಿಲ್ಲ. ನಿಗಮದಲ್ಲಿದ್ದ ಎಸ್ಇಪಿ ಹಣ ಸರಕಾರಕ್ಕೆ ವಾಪಸ್ ಕಳುಹಿಸುವ ಮೂಲಕ ಕೈಮಗ್ಗ ನೇಕಾರರ ವಿರೋಧಿ ಧೋರಣೆ ಅನುಸರಿಸಲಾಗುತ್ತಿದೆ. ನೇಕಾರರಿಂದ ನಿಗಮಕ್ಕೆ ಯಾವುದೇ ನಷ್ಟವಾಗಿಲ್ಲ. ಅಧಿಕಾರಿಗಳ ದುಂದುವೆಚ್ಚ ಹಾಗೂ ನಿರ್ಲಕ್ಷ್ಯದಿಂದ ನಿಗಮ ನಷ್ಟದಲ್ಲಿದೆ ಎಂದು ಹೇಳಿದರು.
ಜಿಲ್ಲಾಧ್ಯಕ್ಷ ನಾಗಪ್ಪ ಬನ್ನಿಗಿಡದ, ಬಸವರಾಜ ಗಣಪಾ, ಸುರೇಶ ಗಣಮುಖೀ ಇನ್ನಿತರರಿದ್ದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.