ಅವಳಿ ನಗರ ಅಭಿವೃದ್ಧಿಗೆ ಹೊರಟ್ಟಿ ಕೊಡುಗೆ ಏನು?


Team Udayavani, Nov 22, 2017, 12:49 PM IST

h1-pradeep.jpg

ಹುಬ್ಬಳ್ಳಿ: ಶಿಕ್ಷಕರ ಮತಕ್ಷೇತ್ರದಿಂದ ಕಳೆದ 30 ವರ್ಷಗಳಿಂದ ಆಯ್ಕೆಯಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ ಬಸವರಾಜ ಹೊರಟ್ಟಿ ಅವರು ಹು-ಧಾ ಅಭಿವೃದ್ಧಿಗೆ ತಮ್ಮ ಕೊಡುಗೆ ಏನೆಂಬುದನ್ನು ಮೊದಲು ತಿಳಿಸಲಿ. ಇನ್ನುಳಿದವರು ಅವಳಿ ನಗರಕ್ಕೆ ಏನು ಮಾಡಿದ್ದಾರೆಂಬುದರ ಬಗ್ಗೆ ಧ್ವನಿಸುರುಳಿ ಹರಿಬಿಡುವ ಮನಸ್ಥಿತಿಯಿಂದ ಹೊರಬರಲಿ ಎಂದು ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ ಹೇಳಿದ್ದಾರೆ. 

ಹು-ಧಾ ಸಮಸ್ಯೆಗಳ ಕುರಿತು ವಿಧಾನಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ, ಸಂಸದ ಪ್ರಹ್ಲಾದ ಜೋಶಿ ಬಗ್ಗೆ ಅದೇ ರಾಗ ಅದೇ ಹಾಡನ್ನೇ ಹೊರಟ್ಟಿ ಅವರು ಸದನದಲ್ಲೂ ಹಾಡುತ್ತಿದ್ದಾರೆ. ಅವರಿಬ್ಬರ ಸತತ ಪ್ರಯತ್ನದಿಂದಲೇ ನಗರದಲ್ಲಿ ಯುಜಿಡಿ, ಕುಡಿಯುವ ನೀರಿನ 24/7 ವ್ಯವಸ್ಥೆ ಯೋಜನೆಗಳಿಗೆ ಚಾಲನೆ ದೊರೆತು ಪ್ರಸ್ತುತ ನಗರದ 26 ವಾರ್ಡ್‌ಗಳಲ್ಲಿ ನಿರಂತರ ನೀರಿನ ವ್ಯವಸ್ಥೆ ಕಾರ್ಯಗತವಾಗುತ್ತಿದೆ.

ಅಲ್ಲದೇ ಜೋಶಿ ಅವರ ವಿಶೇಷ ಪ್ರಯತ್ನದಿಂದ ಅವಳಿ ನಗರಗಳ ರಸ್ತೆಗಳ ಸುಧಾರಣೆಗಾಗಿ ಕೇಂದ್ರ ಸರಕಾರದಿಂದ ಸಿಆರ್‌ಎಫ್‌ ನಿಧಿಯಡಿ 442 ಕೋಟಿ ರೂ. ಅನುದಾನ ದೊರೆತಿದೆ. ಇದು ಬಂದು 2 ವರ್ಷಗಳಾದರೂ ರಾಜ್ಯ ಸರಕಾರ ಮಂಜೂರಾದ ರಸ್ತೆಗಳ ಸುಧಾರಣಾ ಕಾಮಗಾರಿಗಳಿಗೆ ಟೆಂಡರ್‌ ಕರೆಯುತ್ತಿಲ್ಲ.

ಜೊತೆಗೆ ಜಿಲ್ಲಾ ಉಸ್ತುವಾರ ಸಚಿವ ವಿನಯ ಕುಲಕರ್ಣಿ ಪಾಲಿಕೆಗೆ ಬೇರೆ ಬೇರೆ ಯೋಜನೆಗಳಿಗಾಗಿ ನೆಲ ಹಾಗೂ ರಸ್ತೆ ಅಗೆದು ಗುಂಡಿ ಮುಚ್ಚಲು ಇರುವ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲಾಗಿದೆ ಎಂದು ಹೇಳುವ  ಮೂಲಕ ತಮ್ಮ ಅಸಾಮರ್ಥ್ಯ ತೋರಿಸಿದ್ದಾರೆ ಎಂದರು. 

ಕಳೆದ 4 ವರ್ಷಗಳಿಂದ ಪಾಲಿಕೆಯ ನಿವೃತ್ತ ನೌಕರರ 150 ಕೋಟಿ ರೂ. ಮಂಜೂರು ಆಗಿಲ್ಲ. ಹೀಗಾಗಿ ನಿವೃತ್ತ ನೌಕರರ ಜೀವನಾಂಶವಾದ ಪಿಂಚಣಿಯನ್ನು ಅನಿವಾರ್ಯವಾಗಿ ಬೇರೆ ಮೂಲಗಳಿಂದ ಪಾವತಿ ಮಾಡಲಾಗುತ್ತಿದೆ. ಈ ವಿಷಯ ಗೊತ್ತಿದ್ದರೂ ಹೊರಟ್ಟಿ ಹಾಗೂ ಸಚಿವ ಕುಲಕರ್ಣಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ಸರಕಾರದಿಂದ ಆ ಹಣ ತರುವ ಕಾರ್ಯವೇಕೆ ಮಾಡಿಲ್ಲವೆಂಬ ಬಗ್ಗೆ ಜನರಿಗೆ ಸಮಜಾಯಿಷಿ ನೀಡಲಿ.

ಇವರಿಬ್ಬರು ಸಿಎಂ ಬಳಿ ಕುಳಿತು ಪಿಂಚಣಿ ಹಣ ಮಂಜೂರು ಮಾಡಿಸಲಿ. ಆನಂತರವಷ್ಟೇ ಶೆಟ್ಟರ ಹಾಗೂ ಪ್ರಹ್ಲಾದ ಜೋಶಿ ಬಗ್ಗೆ ಮಾತನಾಡುವ ನೈತಿಕತೆ ಪಡೆಯಲಿ ಎಂದು ಪ್ರದೀಪ ಶೆಟ್ಟರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಟಾಪ್ ನ್ಯೂಸ್

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

8

Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.