ವನ್ಯಜೀವಿಗಳ ಸಾಕ್ಷ್ಯಚಿತ್ರ ನಿರ್ಮಾಣದಲ್ಲಿ ಸರ್ಕಾರದ ಬೊಕ್ಕಸಕ್ಕೆ ಹಾನಿ; ಹಿರೇಮಠ


Team Udayavani, Jun 17, 2020, 7:15 AM IST

ವನ್ಯಜೀವಿಗಳ ಸಾಕ್ಷ್ಯಚಿತ್ರ ನಿರ್ಮಾಣದಲ್ಲಿ ಸರ್ಕಾರದ ಬೊಕ್ಕಸಕ್ಕೆ ಹಾನಿ; ಹಿರೇಮಠ

ಹುಬ್ಬಳ್ಳಿ: ವನ್ಯಜೀವಿಗಳ ಕುರಿತು ಸಾಕ್ಷ್ಯಚಿತ್ರ ನಿರ್ಮಾಣ ಹೆಸರಿನಲ್ಲಿ ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲಾಗಿ ಸರಕಾರದ ಬೊಕ್ಕಸಕ್ಕೆ ಹಾನಿ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿದೆ ಎಂದು ಸಮಾಜ ಪರಿವರ್ತನಾ ಸಮುದಾಯ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಎಸ್‌.ಆರ್‌.ಹಿರೇಮಠ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಣ್ಯ ಹಾಗೂ ವನ್ಯಜೀವಿ ಸಂಪತ್ತಿನ ಬಗ್ಗೆ ವೈಲ್ಡ್‌ಲೈಫ್‌ ಕರ್ನಾಟಕ ಸಾಕ್ಷ್ಯಚಿತ್ರ ನಿರ್ಮಾಣದಲ್ಲಿ ಅವ್ಯವಹಾರ ನಡೆದಿದೆ. ಸಾಕ್ಷ್ಯಚಿತ್ರ ತಯಾರಿಸಲು 2014ರಲ್ಲಿ ಕೆಲ ವ್ಯಕ್ತಿಗಳೊಂದಿಗೆ ಅರಣ್ಯ ಇಲಾಖೆ ಒಡಂಬಡಿಕೆ ಮಾಡಿಕೊಂಡಿತ್ತು. ಆದರೆ ಎರಡು ವರ್ಷಗಳಲ್ಲಿ ಮುಗಿಯಬೇಕಾದ ಚಿತ್ರೀಕರಣ ಅವಧಿಯನ್ನು ಮತ್ತೆ ಮುಂದುವರಿಸಲಾಯಿತು.

ಚಿತ್ರೀಕರಣ ಒಪ್ಪಂದದ ಪ್ರಕಾರ ಎಲ್ಲ ಹಕ್ಕುಗಳು ಅರಣ್ಯ ಇಲಾಖೆಗೆ ಒಳಪಟ್ಟಿವೆ. ಆದರೆ ನಿಯಮ ಉಲ್ಲಂಘಿಸಿದ ಅವರು ಲಾಭಕ್ಕಾಗಿ ಚಿತ್ರೀಕರಣದ ಹೆಚ್ಚುವರಿ 400 ಗಂಟೆಗಳ ಫೋಟೇಜನ್ನು ಕಾನೂನು ಬಾಹಿರವಾಗಿ ಫ್ರಾನ್ಸ್‌ 5, ಜರ್ಮನಿಯ ಸರ್ವಸ್‌ ಟಿವಿ, ಸ್ವೀಡನ್‌ನ ಎಸ್‌ವಿಟಿ, ಬೆಲ್ಜಿಯಂನ ವಿಆರ್‌ಟಿ, ಡೆನ್ಮಾರ್ಕ್ ನ ಡಿಆರ್‌, ಎಸ್ಟೊನಿಯಾದ ಇಟಿವಿ, ಕೊರಿಯಾದ ಕೆಬಿಎಸ್‌, ಭಾರತದಲ್ಲಿ ಡಿಸ್ಕವರಿ, ತೈವಾನ್‌ನ ಪಿಟಿಎಸ್‌, ಎಸ್‌ಬಿಎಸ್‌ ಬ್ರಾಡ್‌ಕಾಸ್ಟ್‌ದಿ ಆಸ್ಟೇಲಿಯನ್‌ ಬ್ರಾಡ್‌ ಕಾಸ್ಟ್‌ ಪ್ರೀಮಿಯರ್‌, ಬಿಬಿಸಿ ಅರ್ಥ್ಗೆ ಮಾರಾಟ ಮಾಡಿದ್ದಾರೆ. ಚಿತ್ರದ ಕಾಪಿರೈಟ್‌ ಹಾಗೂ ಸಹ ಮಾಲೀಕತ್ವ ಹೊಂದಿದ್ದರೂ ಕರ್ನಾಟಕ ಅರಣ್ಯ ಇಲಾಖೆ ಗಮನಕ್ಕೆ ತಾರದೇ ಚಿತ್ರೀಕರಣದ ಫುಟೇಜ್‌ ಮಾರಾಟ ಮಾಡಲಾಗಿದೆ. ವೈಲ್ಡ್‌ಲೈಫ್‌ ಕನ್ಜರ್ವೇಶನ್‌ ಆ್ಯಕ್ಟ್, ಕಾಪಿರೈಟ್‌ ಆ್ಯಕ್ಟ್, ನ್ಯಾಷನಲ್‌ ಟೈಗರ್‌ ಕನ್ಜರ್ವೇಶನ್‌ ಆ್ಯಕ್ಟ್, ಫಾರಿನ್‌ ಕಾಂಟ್ರಿಬ್ಯೂಷನ್‌ ರೆಗ್ಯುಲೇಶನ್‌ ಆ್ಯಕ್ಟ್, ಮನಿ ಲಾಂಡರಿಂಗ್‌ ಆ್ಯಕ್ಟ್, ಪ್ರಿವೆನ್ಶನ್‌ ಆಫ್‌ ಕರಪ್ಶನ್‌ ಆ್ಯಕ್ಟ್ ಉಲ್ಲಂಘನೆಯಾಗಿರುವುದು ಕಂಡು ಬರುತ್ತದೆ ಎಂದು ಆರೋಪಿಸಿದರು. ಚಿತ್ರ ನಿರ್ಮಾಣ ಸಂದರ್ಭದಲ್ಲಿ ಸರಕಾರಿ ಸೌಲಭ್ಯಗಳಲ್ಲದೇ ಜಂಗಲ್‌ ಲಾಡ್ಜ್-ರೆಸಾರ್ಟ್‌ಗಳನ್ನು ವಸತಿಗಾಗಿ ಬಳಸಿಕೊಳ್ಳಲಾಗಿದೆ. ವಾಣಿಜ್ಯೇತರ ಸಾಕ್ಷ್ಯಚಿತ್ರದ ಉದ್ದೇಶ ಹೊಂದಿದ್ದರೂ ಚಿತ್ರದ ವಾಣಿಜ್ಯ ಉದ್ದೇಶಕ್ಕೆ ವ್ಯವಸ್ಥಿತವಾಗಿ “ಮಡ್‌ ಸ್ಕಿಪರ್‌’, “ವೈಲ್ಡ್‌ ಕರ್ನಾಟಕ’ ಹಾಗೂ “ರೌಂಡ್‌ಗ್ಲಾಸ್‌’ ಸಂಸ್ಥೆಗಳನ್ನು ರಚಿಸಿಕೊಂಡು ವ್ಯಾಪಕ ಪ್ರಮಾಣದಲ್ಲಿ ಚಿತ್ರದ ಪ್ರಚಾರ ಮಾಡಲಾಗಿದೆ. ಅರಣ್ಯ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಈ ಕುರಿತು ತನಿಖೆ ನಡೆದು ತಪ್ಪಿತಸ್ಥರೆಲ್ಲರಿಗೆ ಶಿಕ್ಷೆಯಾಗಬೇಕು. ಅವರಿಂದ ಸರಕಾರಕ್ಕಾದ ನಷ್ಟ ಭರಿಸಿಕೊಳ್ಳಬೇಕೆಂದು ಪತ್ರದಲ್ಲಿ ಒತ್ತಾಯಿಸಲಾಗಿದೆ ಎಂದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.