ಸ್ಮಾರ್ಟ್‌ಸಿಟಿ ಟೆಂಡರ್‌ಗೆ ವರ್ಷಾಂತ್ಯದ ಗಡುವು


Team Udayavani, Sep 18, 2019, 9:35 AM IST

huballi-tdy-3

ಹುಬ್ಬಳ್ಳಿ: ಕೇಂದ್ರ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಸ್ಮಾರ್ಟ್‌ ಸಿಟಿ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ. ಕಾಮಗಾರಿಗಳು ಗೋಚರಿಸುತ್ತಿಲ್ಲ ಎಂಬ ಅಸಮಾಧಾನ-ಆರೋಪಗಳ ನಡುವೆ, 2019ರ ಡಿಸೆಂಬರ್‌ದೊಳಗೆ ಪ್ರೊಜೆಕ್ಟ್ಗಳ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳ್ಳಬೇಕು. 2020ರ ಮಾರ್ಚ್‌ದೊಳಗೆ ಕಾಮಗಾರಿಗಳಿಗೆ ಕೆಲಸದ ಕಾರ್ಯಾದೇಶ(ವರ್ಕ್‌ ಆರ್ಡರ್‌)ನೀಡಬೇಕೆಂದು ಕೇಂದ್ರ ಸರಕಾರ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ.

ಸ್ಮಾರ್ಟ್‌ ಸಿಟಿ ಯೋಜನೆಯ ಎರಡನೇ ಪಟ್ಟಿಯಲ್ಲಿ ಅವಕಾಶ ಗಿಟ್ಟಿಸಿಕೊಂಡಿರುವ ಹುಬ್ಬಳ್ಳಿ-ಧಾರವಾಡದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ ಎಂಬ ಬೇಸರ ಜನರದ್ದಾಗಿದೆ. ಸ್ಮಾರ್ಟ್‌ ಸಿಟಿ ಯೋಜನೆ ಅನುಷ್ಠಾನ ತೀವ್ರಗೊಳಿಸುವ, ಕಾಲಮಿತಿಯೊಳಗೆ ಕಾಮಗಾರಿಗಳ ಪೂರ್ಣಗೊಳಿಸಲು ಒತ್ತು ನೀಡಿರುವ ಕೇಂದ್ರ ಸರಕಾರ, ಕಾಲಮಿತಿಯ ಪಟ್ಟಿಯಂತೆಯೇ ಎಲ್ಲ ಯೋಜನೆಗಳ ಅನುಷ್ಠಾನ ಆಗಲೇಬೇಕೆಂದು ಸ್ಮಾರ್ಟ್‌ ಸಿಟಿ ಯೋಜನೆಗೆ ಆಯ್ಕೆಯಾಗಿರುವ ಎಲ್ಲ ಮಹಾನಗರಗಳಿಗೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದೆ.

ಶೇ.25 ಕಾಮಗಾರಿ ಪೂರ್ಣ ಅವಶ್ಯ: ಸ್ಮಾರ್ಟ್‌ ಸಿಟಿ ಯೋಜನೆ ಅನುಷ್ಠಾನ ನಿಟ್ಟಿನಲ್ಲಿ ಆಯಾ ರಾಜ್ಯಗಳ ರಾಜ್ಯ ಸರಕಾರದ ಸಹಕಾರವೂ ಅವಶ್ಯವಾಗಿದೆ. ಯೋಜನೆಗೆ ಕೇಂದ್ರ-ರಾಜ್ಯ ಸರಕಾರಗಳು ಸಮಾನ ಹಣ ನೀಡುತ್ತಿವೆ. ಯೋಜನೆ ಪ್ರಗತಿ ಮಾತ್ರ ನಿರೀಕ್ಷಿತ ರೀತಿಯಲ್ಲಿ ಇಲ್ಲದಿರುವುದು ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಲ್ಲಿ ಬೇಸರ ತರಿಸುವಂತೆ ಮಾಡಿದೆ.

ಸ್ಮಾರ್ಟ್‌ ಸಿಟಿ ಯೋಜನೆ ಅನುಷ್ಠಾನ ನಿಟ್ಟಿನಲ್ಲಿ ವಿವಿಧ ಕಡೆ ಟೀಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರಕಾರ ಹಲವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಕೇಂದ್ರದ ನಿಯಮದ ಪ್ರಕಾರ 2019ರ ಡಿಸೆಂಬರ್‌ ಅಂತ್ಯದೊಳಗೆ ಸ್ಮಾರ್ಟ್‌ ಯೋಜನೆಯ ಎಲ್ಲ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳ್ಳಲೇಬೇಕಿದೆ.

2020ರ ಮಾರ್ಚ್‌ ಅಂತ್ಯದೊಳಗೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿದ ಎಲ್ಲ ಕಾಮಗಾರಿಗಳಿಗೆ ಕೆಲಸದ ಆದೇಶ ಪತ್ರ ನೀಡಬೇಕಿದೆ. ಅದೇ ರೀತಿ 2020ರ ಜೂನ್‌ ಅಂತ್ಯದೊಳಗೆ ವಿವಿಧ ಯೋಜನೆಗಳ ಕಾಮಗಾರಿ ಕನಿಷ್ಠ ಶೇ.25ರಷ್ಟಾದರೂ ಮುಗಿಯಬೇಕಿದೆ.

ಹು.ಧಾ.ದಲ್ಲಿ 54 ಪ್ರೊಜೆಕ್ಟ್: ಅವಳಿನಗರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ಅಡಿಯಲ್ಲಿ ಒಟ್ಟು 54 ಪ್ರೊಜೆಕ್ಟ್ಗಳನ್ನು ಕೈಗೊಳ್ಳಲಾಗುತ್ತಿದೆ. ಇದರಲ್ಲಿ ಅಂದಾಜು 304.51ಕೋಟಿ ರೂ.ವೆಚ್ಚದ 17 ಕಾಮಗಾರಿಗಳು ಟೆಂಡರ್‌ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿವೆ. ಅದೇ ರೀತಿ 368.57ಕೋಟಿ ರೂ.ವೆಚ್ಚದ ಸುಮಾರು 25 ಪ್ರೊಜೆಕ್ಟ್ಗಳು ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿದ್ದು, ಕಾಮಗಾರಿ ಕೆಲಸದಾದೇಶ ಪತ್ರ ನೀಡಲಾಗಿದೆ. ಕೆಲ ಕಾಮಗಾರಿಗಳು ಪ್ರಗತಿ ಹಂತದಲ್ಲಿವೆ. ಅಂದಾಜು 283.05 ಕೋಟಿ ರೂ.ವೆಚ್ಚದಲ್ಲಿನ ನಾಲಾ ಅಭಿವೃದ್ಧಿ, ನೆಹರು ಮೈದಾನ, ಉಣಕಲ್ಲ ಕೆರೆ ಇನ್ನಿತರ ಕಾಮಗಾರಿಗಳು ಡಿಪಿಆರ್‌ ಹಂತದಲ್ಲಿವೆ. ಒಟ್ಟು ಎಂಟು ಕಾಮಗಾರಿಗಳು ಇನ್ನೂ ಬಾಕಿ ಇದ್ದು, ಇದರಲ್ಲಿ ಆರು ಕಾಮಗಾರಿ ಡಿಪಿಆರ್‌ ಹಂತದಲ್ಲಿದ್ದರೆ, ಎರಡು ಕಾಮಗಾರಿ ಕಾನ್ಸೆಪ್ಟ್ ಹಂತದಲ್ಲಿವೆ. ಅಕ್ಟೋಬರ್‌ ಅಂತ್ಯದೊಳಗೆ ಟೆಂಡರ್‌ ಪ್ರಕ್ರಿಯೆ ಕೈಗೊಳ್ಳಲು ನಿರ್ಧರಿಸಲಾಗಿದೆ.

ಹೊಸೂರು ವೃತ್ತದ ಬಳಿ ಇರುವ ವೇರ್‌ಹೌಸ್‌ ಜಾಗ ಬಳಕೆ ಇಲ್ಲದೆ ಇದ್ದು, ಆ ಜಾಗ ಪಡೆದು ಅಲ್ಲಿ ಸಾರ್ವಜನಿಕರ ಬಳಕೆಗೆ ಕೆಲ ಸೌಲಭ್ಯಗಳನ್ನು ನೀಡಲು ಯೋಜಿಸಲಾಗಿದೆಯಾದರೂ, ಜಾಗ ನೀಡಿಕೆಗೆ ವಾರ್ಷಿಕ 1.29 ಕೋಟಿ ರೂ.ಗಳ ಬಾಡಿಗೆ ಬೇಡಿಕೆ ಇರಿಸಿದ್ದರಿಂದ ಸ್ಮಾರ್ಟ್‌ ಸಿಟಿ ಯೋಜನೆ ಹಾಗೂ ವೇರ್‌ಹೌಸ್‌ಗೆ ಸಂಬಂಧಿಸಿದ ಇಲಾಖೆ ನಡುವೆ ಚರ್ಚೆ ನಡೆಯುತ್ತಿದೆ.

ಈಗಾಗಲೇ ಎಸ್‌ಪಿವಿ ರಚನೆಯಾಗಿದ್ದು, ಕಂಟ್ರೋಲ್ ಆ್ಯಂಡ್‌ ಕಮಾಂಡ್‌ ರೂಂ ರೂಪುಗೊಂಡಿದೆ. ಜನತಾ ಬಜಾರ್‌, ಎಂ.ಜಿ.ಮಾರುಕಟ್ಟೆ ಅಭಿವೃದ್ಧಿ ಕಾಮಗಾರಿ ಇನ್ನು ತೀವ್ರತೆ ಪಡೆಯಬೇಕಿದೆ. ಬಹುಪಯೋಗಿ ಕಾರುಗಳ ನಿಲುಗಡೆ ಕಟ್ಟಡ ಕಾಮಗಾರಿ ಶುರುವಾಗಿದೆ. ಕೆಲ ಕಾಮಗಾರಿಗಳಿಗೆ ಟೆಂಡರ್‌ ಹಾಕಲು ಗುತ್ತಿಗೆದಾರರು ಮುಂದೆ ಬಾರದ್ದರಿಂದ ಮತ್ತೆ ಟೆಂಡರ್‌ ಕರೆಯಬೇಕಿದೆ.

ಸ್ಮಾರ್ಟ್‌ ಸಿಟಿ ಯೋಜನೆಗೆ ಪೂರ್ಣಾವಧಿ ವ್ಯವಸ್ಥಾಪಕ ನಿರ್ದೇಶಕರು ಇರಲಿಲ್ಲ, ಸಿಬ್ಬಂದಿ ಕೊರತೆ ಇತ್ತು. ಆದರೆ ಇದೀಗ ಪೂರ್ಣಾವಧಿ ಎಂಡಿ ಬಂದಿದ್ದು, ಸ್ಮಾರ್ಟ್‌ ಸಿಟಿ ಯೋಜನೆ ನಿರ್ವಹಣೆಗೆ ಹೊರಗುತ್ತಿಗೆ ಆಧಾರದಲ್ಲಿ ಮುಖ್ಯ ಅಭಿಯಂತರ, ಸಹಾಯಕ ಹಾಗೂ ಕಿರಿಯ ಅಭಿಯಂತರು ಸೇರಿದಂತೆ ಒಟ್ಟು 33 ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಸಿಬ್ಬಂದಿ ಕೊರತೆ ಇಲ್ಲವಾಗಿದೆ. ಇನ್ನಾದರೂ ಸ್ಮಾರ್ಟ್‌ ಸಿಟಿ ಯೋಜನೆ ನಿರೀಕ್ಷಿತ ರೀತಿಯಲ್ಲಿ ಅನುಷ್ಠಾನಗೊಳ್ಳುವುದೇ ಕಾದು ನೋಡಬೇಕು.

ಕ್ವಾಲಿಟಿ ಕಂಟ್ರೋಲ್ ಕಚೇರಿ: ವಿವಿಧ ಕಾಮಗಾರಿಗೆ ಬಳಸುವ ಸಾಮಗ್ರಿಗಳ ಗುಣಮಟ್ಟ ಪರೀಕ್ಷೆಗೆ ಸ್ಮಾರ್ಟ್‌ ಸಿಟಿ ಯೋಜನೆ ಅಡಿಯಲ್ಲಿ ಕ್ವಾಲಿಟಿ ಕಂಟ್ರೋಲ್ ಕಚೇರಿಯನ್ನು ಇಲ್ಲಿನ ಹೊಸೂರು ಬಳಿ ಆರಂಭಿಸಲಾಗುತ್ತದೆ. ವಿವಿಧ ಕಾಮಗಾರಿಗಳಿಗೆ ಬಳಸುವ ಜಲ್ಲಿ, ಮರಳು ಇನ್ನಿತರ ಸಾಮಗ್ರಿಗಳ ಗುಣಮಟ್ಟ ಪರೀಕ್ಷೆಯನ್ನು ಈ ಕಚೇರಿಯಲ್ಲಿ ಕೈಗೊಳ್ಳಲಾಗುತ್ತದೆ. ಸರಕಾರದ ಲೋಕೋಪಯೋಗಿ, ಜಲಸಂಪನ್ಮೂಲ ಇಲಾಖೆ ಸೇರಿದಂತೆ ಸರಕಾರದ ವಿವಿಧ ಇಲಾಖೆಗಳು ತಾವು ಬಳಸುವ ಸಾಮಗ್ರಿಗಳ ಗುಣಮಟ್ಟ ಪರೀಕ್ಷೆಯನ್ನು ಇಲ್ಲಿ ಕೈಗೊಳ್ಳಬಹುದಾಗಿದೆ. ಅಂದಾಜು 85 ಲಕ್ಷ ರೂ.ವೆಚ್ಚದಲ್ಲಿ ಕ್ವಾಲಟಿ ಕಂಟ್ರೋಲ್ ಕಚೇರಿ ರೂಪುಗೊಳ್ಳಲಿದ್ದು, ಗುಣಮಟ್ಟ ಪರೀಕ್ಷೆಗೆ ಅಗತ್ಯವಿರುವ ಅತ್ಯಾಧುನಿಕ ಸಮಾಗ್ರಿಗಳನ್ನು ಇದು ಹೊಂದಲಿದೆ. ಅದೇ ರೀತಿ ಕಚೇರಿಯಲ್ಲಿ ಒಬ್ಬರು ಸಹಾಯಕ ಅಭಿಯಂತರ ಹಾಗೂ ಇಬ್ಬರು ಸಿಬ್ಬಂದಿ ಇರಲಿದ್ದಾರೆ. ಸುಮಾರು 3ಸಾವಿರ ಚದರ ಅಡಿ ಜಾಗದಲ್ಲಿ ಕಚೇರಿ ರೂಪುಗೊಳ್ಳಲಿದೆ.

 

 

•ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.