ಕಳಸಾ ಬಂಡೂರಿ ನೀರು ತಂದೇ ಕಾಲಿಡುವೆ


Team Udayavani, Oct 29, 2017, 12:37 PM IST

h1-kalasa.jpg

ಧಾರವಾಡ: ಉತ್ತರ ಕರ್ನಾಟಕ ಭಾಗದ ಅನ್ನದಾತರಿಗೆ ತುರ್ತಾಗಿ ಬೇಕಾಗಿರುವ ಕಳಸಾ-ಬಂಡೂರಿ ನೀರನ್ನು ರಾಜ್ಯಕ್ಕೆ ಪಡೆದ ಮೇಲೆಯೇ ಈ ಭಾಗದಲ್ಲಿ ಸಂಚರಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಶಪಥ ಮಾಡಿದರು. 

ಇಲ್ಲಿನ ಸವದತ್ತಿ ರಸ್ತೆ ಬಸವ ಮಾರ್ಗದಲ್ಲಿ ನಿರ್ಮಿಸಿರುವ ಪದ್ಮಾವತಿ ಹತ್ತಿ ಕಾರ್ಖಾನೆ ಉದ್ಘಾಟಿಸಿ ಮಾತನಾಡಿದರು. ಕಳಸಾ-ಬಂಡೂರಿ ನೀರು ಉತ್ತರ ಕರ್ನಾಟಕ ಭಾಗದ ರೈತರಿಗೆ ಎಷ್ಟು ಅಗತ್ಯವಾಗಿ ಬೇಕೆಂಬುದರ ಅರಿವು ನನಗಿದೆ. ಈಗಾಗಲೇ ಈ ಬಗ್ಗೆ ಗೋವಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಎರಡೂರು ಸುತ್ತಿನ ಮಾತುಕತೆ ನಡೆಸಲಾಗಿದೆ.

ಈ ಸಂಬಂಧ ನಾನು ಗೋವಾದ ಮುಖ್ಯಮಂತ್ರಿ ಮನೋಹರ್‌ ಪರ್ರಿಕ್ಕರ್‌ ಮತ್ತು ಪ್ರಧಾನಿ ನರೇಂದ್ರ ಮೋದಿವರೊಂದಿಗೆ 10 ದಿನದೊಳಗೆ ಚರ್ಚಿಸುತ್ತೇನೆ. ನವ ಕರ್ನಾಟಕ ಯಾತ್ರೆ ಈ ಭಾಗಕ್ಕೆ ಬರುವ ಮುಂಚೆಯೇ 7.56 ಟಿಎಂಸಿ ಕುಡಿಯುವ ನೀರನ್ನು ಕಳಸಾ ಬಂಡೂರಿಯಿಂದ ಮಲಪ್ರಭೆಗೆ ಹರಿಸುವ ಕೆಲಸ ಮಾಡುತ್ತೇನೆ ಎಂದರು. 

ಸೋನಿಯಾಗಾಂಧಿ ಮತ್ತು ಕಾಂಗ್ರೆಸ್‌ನವರಿಂದ ಈ ಯೋಜನೆ ನನೆಗುದಿಗೆ ಬಿದ್ದಿದೆ. ನಾನು ರಾಜ್ಯದ ಉಪಮುಖ್ಯಮಂತ್ರಿ ಇದ್ದಾಗ ಹಣಕಾಸು ನೆರವು ನೀಡಿ ಕಾಮಗಾರಿ ಆರಂಭಿಸಿಯೇ ಬಿಟ್ಟಿದ್ದೆ. ಆದರೆ ಕಾಂಗ್ರೆಸ್‌ ಪಕ್ಷದ ನಿಲುವಿನಿಂದ ಯೋಜನೆ ಸಂಕಷ್ಟಕ್ಕೆ ಸಿಲುಕಿತು. ಇದು ಹಿಂದಿನವರು ಮಾಡಿದ ಪ್ರತಿಫಲ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ಧಾಳಿ ನಡೆಸಿದರು. 

ಸಾಲ ಮನ್ನಾ ನಿಮ್ಮ ಹೊಣೆ: ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ ಎರಡು ಬಾರಿ ರೈತರ ಸಾಲ ಮನ್ನಾ ಮಾಡಲಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇವಲ ಸಹಕಾರ ಬ್ಯಾಂಕ್‌ಗಳಲ್ಲಿನ  ಸಾಲವನ್ನು ಮಾತ್ರ ಮನ್ನಾ ಮಾಡಿ ವಾಣಿಜ್ಯ ಬ್ಯಾಂಕ್‌ ಸಾಲಮನ್ನಾ ಮಾಡಲು ನಾಮೇಷ ಎನಿಸುತ್ತಿದ್ದಾರೆ.

ಕಾಂಗ್ರೆಸ್‌ ಸರ್ಕಾರಕ್ಕೆ ರೈತರ ಬಗ್ಗೆ ನಿಜವಾಗಿ ಕಾಳಜಿ ಇದ್ದರೆ ಕೂಡಲೇ ವಾಣಿಜ್ಯ ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿದರು. ಕೇಂದ್ರ ಸರ್ಕಾರ ಹಣ ಕೊಟ್ಟರೂ ರಾಜ್ಯ ಸರ್ಕಾರ ಅದನ್ನು ಬಳಸಿಕೊಂಡು ಸರಿಯಾಗಿ ಬರ ನಿರ್ವಹಣೆ ಮಾಡುತ್ತಿಲ್ಲ ಎಂದು ರಾಜ್ಯದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರೇ ಹೇಳಿದ್ದಾರೆ. 

ಇದಕ್ಕಿಂತ ಪುರಾವೆ ನಿಮಗೇನು ಬೇಕು? ಎಂದು ಯಡಿಯೂರಪ್ಪ ವ್ಯಂಗ್ಯವಾಡಿದರು. ಡಿಸೆಂಬರ್‌ 21ಕ್ಕೆ ಹುಬ್ಬಳ್ಳಿಯಲ್ಲಿ ಬೃಹತ್‌ ಬಿಜೆಪಿ ಸಮಾವೇಶ ನಡೆಯಲಿದ್ದು, ಇದರಲ್ಲಿ 5 ಲಕ್ಷ ಜನರನ್ನು ಸೇರಿಸಲಾಗುವುದು. ಇದಕ್ಕೆ ಶೆಟ್ಟರ್‌ ಮತ್ತು ಜೋಷಿ ಶ್ರಮಿಸಲಿದ್ದಾರೆ ಎಂದರು. 

ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್‌ ಮಾತನಾಡಿ, ಬಿಜೆಪಿ ಐದು ವರ್ಷದ ಆಡಳಿತದ ಅವಧಿಯಲ್ಲಿ ಕೇಂದ್ರದತ್ತ ಬೊಟ್ಟು ಮಾಡದೇ ರೈತರ  ಸಾಲ ಮನ್ನಾ ಮಾಡಿತ್ತು. ಇದೀಗ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿನ ಸರ್ಕಾರಗಳು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ 40 ಸಾವಿರ ಕೋಟಿ ರೂ.ನಷ್ಟು ಸಾಲ ಮನ್ನಾ ಮಾಡಿವೆ.

ಇದನ್ನೇ ಯಾಕೆ ರಾಜ್ಯ ಸರ್ಕಾರ ಮಾಡಬಾರದು ಎಂದು ಪ್ರಶ್ನಿಸಿದರು. ಇದೇ ವೇಳೆ ಉದ್ಯಮಿ ಹಾಗೂ ರಾಜಕಾರಣಿ ತವನಪ್ಪ ಅಷ್ಟಗಿ ದಂಪತಿಯನ್ನು ಸನ್ಮಾನಿಸಲಾಯಿತು. ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಸದ ಪ್ರಹ್ಲಾದ ಜೋಷಿ ಮಾತನಾಡಿದರು.

ಮಾಜಿ ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ವೀರಭದ್ರಪ್ಪ ಹಾಲಹರವಿ, ಮೋಹನ ಲಿಂಬಿಕಾಯಿ, ಸೀಮಾ ಮಸೂತಿ, ಎಸ್‌.ಐ.ಚಿಕ್ಕನಗೌಡರ, ಶಿವಾನಂದ ಅಂಬಡಗಟ್ಟಿ, ಬಿಜೆಪಿ ಮುಖಂಡರಾದ ಮಹೇಶ ಟೆಂಗಿನಕಾಯಿ, ಸಿ.ಎಂ.ನಿಂಬಣ್ಣವರ ಇತರರಿದ್ದರು. 

ಟಾಪ್ ನ್ಯೂಸ್

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.