![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 14, 2019, 12:54 PM IST
ಗದಗ: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದ ಗದಗ ವಿಧಾನಸಭಾ ಮತಕ್ಷೇತ್ರದ 769 ಮನೆಗಳು ಹಾನಿಗೊಳಗಾಗಿವೆ ಎಂದು ಶಾಸಕ ಎಚ್.ಕೆ. ಪಾಟೀಲ ಹೇಳಿದರು.
ನಗರದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಮಳೆ ಹಾನಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಗದಗ-ಬೆಟಗೇರಿ ಅವಳಿ ನಗರದಲ್ಲಿಯೂ 15-18 ಮನೆಗಳಿಗೆ ಹಾನಿಯಾಗಿದೆ. ಈಗಾಗಲೇ ಸೊರಟೂರ, ಹಂಗನಕಟ್ಟಿ, ಮುಳಗುಂದ, ಚಿಂಚಲಿ, ನೀಲಗುಂದ, ಕುರ್ತಕೋಟಿ, ಹೊಸಳ್ಳಿ ಸೇರಿ ವಿವಿಧೆಡೆ ತೆರಳಿ ಹಾನಿ ವೀಕ್ಷಣೆ ಮಾಡಲಾಗಿದೆ. ಕೆಲವೆಡೆ ಭಾಗಶಃ, ಮತ್ತೆ ಕೆಲವೆಡೆ ಅರ್ಧ ಮತ್ತು ಕೆಲವು ಸಂಪೂರ್ಣ ಮನೆಗಳು ಬಿದ್ದಿವೆ. ಸೊರಟೂರು, ಹಂಗನಕಟ್ಟಿಯಲ್ಲಿ ಎರಡು ಆಕಳು, ಒಂದು ಎತ್ತು ಸಾವನ್ನಪ್ಪಿದ್ದು, ನಾಲ್ವರಿಗೆ ಗಾಯಗಳಾಗಿವೆ ಎಂದು ಮಾಹಿತಿ ನೀಡಿದರು.
2.70 ಕೋಟಿ ರೂ. ಪರಿಹಾರ ಬಿಡುಗಡೆ: ಗದಗ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಹಾನಿಗೊಳಗಾದ ಮನೆಗಳಿಗೆ 2.70 ಕೋಟಿ ರೂ. ಪರಿಹಾರ ಬಿಡುಗಡೆಯಾಗಿದೆ. ಹಾನಿಗೊಳಗಾದ 769 ಮನೆಗಳ ಪೈಕಿ 577 ಮನೆಗಳಿಗೆ 89,77,540 ರೂ. ಪರಿಹಾರವನ್ನು ಫಲಾನುಭವಿಗಳ ಖಾತೆಗೆ ಆರ್ಟಿಜಿಎಸ್ ಮೂಲಕ ಬಿಡುಗಡೆಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಮಳೆಗೆ ಹಾನಿಯಾದ ಮನೆಗಳ ಸಮೀಕ್ಷೆ ಮಾಡಲಾಗುತ್ತಿದೆ. ಶೇ. 15ರಷ್ಟು ಹಾನಿಯದ ಮನೆಗಳಿಗೆ ಕನಿಷ್ಠ 5,800 ರೂ. ಹಾಗೂ ಶೇ. 75ಕ್ಕಿಂತ ಹೆಚ್ಚು ಹಾನಿಯಾದ ಮನೆಗಳಿಗೆ 95,000 ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದರು.ಗದಗ ಎಪಿಎಂಸಿ ಅಧ್ಯಕ್ಷ ಸಿ.ಬಿ. ಬಡ್ನಿ, ಜಿ.ಪಂ. ಸದಸ್ಯರಾದ ವಾಸಣ್ಣ ಕುರಡಗಿ, ಸಿದ್ಧು ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಗುರಣ್ಣ ಬಳಗಾನೂರ, ಪ್ರಭು ಬುರಬುರೆ, ತಾ.ಪಂ. ಸದಸ್ಯ ವಿದ್ಯಾಧರ ದೊಡ್ಡಮನಿ, ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ನಗರಸಭೆ ಪೌರಾಯುಕ್ತ ಮನ್ಸೂರ ಅಲಿ, ತಾಪಂ ಇಒ ಡಾ| ಎಚ್.ಎಸ್. ಜನಗಿ ಇದ್ದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.