ಜನಮನ ರಂಜಿಸಿದ ಗಿರಿಜನ ಉತ್ಸವ; ಜೋಗುತಿ ನೃತ್ಯ ಪ್ರದರ್ಶನ
ವೆಂಕಟಾಪೂರ ಗ್ರಾಮದ ಗೌಡಪ್ಪ ಬೊಮ್ಮಪ್ಪನವರ ತಂಡದ ತತ್ವಪದಗಳು ಗಮನ ಸೆಳೆದವು
Team Udayavani, Sep 3, 2022, 4:11 PM IST
ಗದಗ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತಾಲೂಕಿನ ಲಕ್ಕುಂಡಿ ಗ್ರಾಮದ ಅನ್ನದಾನೇಶ್ವರ ಸಮುದಾಯ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ
ಇಲಾಖೆ ವತಿಯಿಂದ ಜರುಗಿದ ಗಿರಿಜನ ಉತ್ಸವ ಸ್ಥಳೀಯರನ್ನು ಮನರಂಜಿಸುವಲ್ಲಿ ಯಶಸ್ವಿಯಾಯಿತು.
ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನಗೊಂಡ ಜೋಗುತಿ ನೃತ್ಯ ಪ್ರದರ್ಶಿಸಿದ ಕೊತಬಾಳ ಗ್ರಾಮದ ಅರಣೋದಯ ಕಲಾ ತಂಡ ನೂರಾರು ಜನರನ್ನು ಮಂತ್ರ ಮುಗ್ಧರನ್ನಾಗಿಸಿತು. ಅಡವಿಸೋಮಾಪೂರದ ಸಿದ್ಧಲಿಂಗೇಶ್ವರ ಜಾನಪದ ಕಲಾ ತಂಡದ ಸುಗ್ಗಿ ಕುಣಿತ, ಹಿರೇಮಣ್ಣೂರಿನ ಹನುಮಂತ ತಳವಾರ ಕಲಾ ತಂಡದ ದೀಪ ನೃತ್ಯ, ಪಾಪನಾಶಿ ತಾಂಡಾದ ಸಾವಿತ್ರಿ ತಳವಾರ ತಂಡದ ಲಂಬಾಣಿ ನೃತ್ಯ ಜನಾಕರ್ಷಿಸಿತು.
ಇನ್ನು ಮುಂಡರಗಿಯ ಕರ್ನಾಟಕ ಜಾನಪದ ಕಲಾ ತಂಡದ ನಾಡಗೀತೆ ಹಾಗೂ ಜನಪದ ಸಂಗೀತ, ಲಕ್ಕುಂಡಿಯ ನೂಲಿ ಚಂದಯ್ಯ ಜಾನಪದ ಕಲಾ ತಂಡದ ಶರೀಫ್ ಸಾಹೇಬರ ತತ್ವ ಪದಗಳು, ಬಸವರಾಜ ಹಡಗಲಿಯವರ ಕಲಾ ತಂಡದ ಗೀಗೀ ಪದ, ಡೋಣಿಯ ಬೀರಲಿಂಗೇಶ್ವರ ಜಾನಪದ ಕಲಾ ತಂಡದ ಡೊಳ್ಳಿನ ಪದಗಳು, ಎಚ್. ಎಸ್. ವೆಂಕಟಾಪೂರ ಗ್ರಾಮದ ಗೌಡಪ್ಪ ಬೊಮ್ಮಪ್ಪನವರ ತಂಡದ ತತ್ವಪದಗಳು ಗಮನ ಸೆಳೆದವು. ಕೊತಬಾಳ ತಂಡದ ಕಲಾವಿದರ ಜಾನಪದ ಹಾಸ್ಯವುಳ್ಳ ಹಾಡು ಜನರನ್ನು ನಗೆಗಡಲಲ್ಲಿ ತೇಲಿಸಿತು.
ಇದಕ್ಕೂ ಮುನ್ನ ಗಿರಿಜನ ಉತ್ಸವ ಉದ್ಘಾಟಿಸಿ ಮಾತನಾಡಿದ ಗ್ರಾಪಂ ಅಧ್ಯಕ್ಷೆ ಲಲಿತಾ ಗದಗಿನ, ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗುವ ನಾಡಿನ ಜಾನಪದ ಕಲೆಯ ಕಲಾವಿದರನ್ನು ಪ್ರೋತ್ಸಾಹಿಸುವ ಮೂಲಕ ಮುಂದಿನ ಪೀಳಿಗೆಗೆ ಈ ಕಲೆ ಉಳಿಸಿ ಬೆಳೆಸಬೇಕಾಗಿದೆ ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಪಂ ಉಪಾಧ್ಯಕ್ಷ ರೇವಣಸಿದ್ದಪ್ಪ
ಮುಳಗುಂದ, ಸದಸ್ಯರಾದ ವಿರೂಪಾಕ್ಷಪ್ಪ ಬೆಟಗೇರಿ, ಬಸವರಾಜ ಹಟ್ಟಿ, ಲಕ್ಷ್ಮವ್ವ ಭಜಂತ್ರಿ, ನಿವೃತ್ತ ಶಿಕ್ಷಕ ಅಶೋಕ ಬೂದಿಹಾಳ, ಮುತ್ತಪ್ಪ ನೋಟಗಾರ
ಇದ್ದರು. ಅಂಬರೀಶ ಕರೆಕಲ್ಲ ನಿರೂಪಿಸಿ, ಕಲಾವಿದ ಶಿವು ಭಜಂತ್ರಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ
ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ
Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್
ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!
Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್.ಕೆ.ಪಾಟೀಲ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.