ವಿದ್ಯಾರ್ಥಿಗಳ ಮೇಲೆ ಕಟ್ಟಡ ಬೀಳುವ ಆತಂಕ


Team Udayavani, Jul 27, 2019, 9:43 AM IST

gadaga-tdy-2

ಲಕ್ಷ್ಮೇಶ್ವರ: ಗೊಜನೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಕಸ್ತೂರಿಬಾ ವಸತಿ ಶಾಲೆಗೆ ಹೊಂದಿಕೊಂಡಿರುವ ಶಿಥಿಲಗೊಂಡಿರುವ ಗ್ರಾಪಂ ಕಟ್ಟಡ.

ಲಕ್ಷ್ಮೇಶ್ವರ: ತಾಲೂಕಿನ ಗೊಜನೂರ ಗ್ರಾಮದ ಶಾಲಾ ಆವರಣದಲ್ಲಿರುವ ಗ್ರಾಪಂ ಹಳೆಯದಾದ ಕಟ್ಟಡ ಸಂಪೂರ್ಣ ಶಿಥಿಲಗೊಂಡು ಆಗಲೋ-ಈಗಲೋ ನೆಲಕಚ್ಚುವ ಸ್ಥಿತಿಯಲ್ಲಿದ್ದು, ಈ ಪ್ರಾಂಗಣದಲ್ಲಿ ಓದುತ್ತಿರುವ ನೂರಾರು ಮಕ್ಕಳ ಪ್ರಾಣಕ್ಕೆ ಎರವಾಗುವಂತಿದೆ.

ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದೊಳಗೆ ಇರುವ ಗ್ರಾಪಂ ಕಟ್ಟಡ ಸಂಪೂರ್ಣ ಶಿಥಿಲಗೊಂಡಿರುವುದರಿಂದ ಕಳೆದ ಅನೇಕ ವರ್ಷಗಳ ಹಿಂದೆಯೇ ಕಾರ್ಯಾಲಯವನ್ನು ಗ್ರಾಮದ ಸಮುದಾಯ ಭವನದಲ್ಲಿ ನಡೆಸುತ್ತಿದ್ದಾರೆ. ಶಿಥಿಲಗೊಂಡು ಅರ್ಧಮರ್ಧ ಉಳಿದಿರುವ ಕಲ್ಲಿನ ಕಟ್ಟಡ ಬೀಳುವ ಸ್ಥಿತಿಯಲ್ಲಿದೆ. ಈ ಕಟ್ಟಡಕ್ಕೆ ಹೊಂದಿಕೊಂಡಂತೆ 40 ಮಕ್ಕಳು ಓದುವ ಅಂಗನವಾಡಿ, 80 ಮಕ್ಕಳಿರುವ ಕರ್ನಾಟಕ ಕಸ್ತೂರಿಬಾ ವಸತಿ ನಿಲಯ ಮತ್ತು 275ಕ್ಕೂ ಹೆಚ್ಚು ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳು ನಿತ್ಯವೂ ಇದರಡಿಯೇ ಕಾಲ ಕಳೆಯುತ್ತಿದ್ದಾರೆ.

ಇದೀಗ ಮಳೆಗಾಲವಾಗಿದ್ದರಿಂದ ಬಿರುಕು ಬಿಟ್ಟಿರುವ ಕಲ್ಲು ಮಣ್ಣಿನ ಗೋಡೆಯಲ್ಲಿ ನೀರಿಳಿದು ನೆಲಕಚ್ಚುವ ಹಂತದಲ್ಲಿದೆ. ಇದರಿಂದ ಇಲ್ಲಿನ ಮಕ್ಕಳು ಜೀವ ಹಿಡಿದುಕೊಂಡು ಶಾಲಾವಧಿ ಕಳೆಯಬೇಕಾಗಿದೆ. ಅಲ್ಲದೇ ಇದು ಇಲ್ಲಿನ ಶಿಕ್ಷಕರಿಗೂ ದೊಡ್ಡ ಜವಾಬ್ದಾರಿಯಾಗಿದೆ. ಒಂದೊಮ್ಮೆ ಏನಾದರೂ ಅವಘಡ ಸಂಭವಿಸಿದರೆ ಯಾರು ಹೊಣೆ ಎಂಬುದು ಶಿಕ್ಷಕರನ್ನು ಕಾಡುತ್ತಿರುವ ಪ್ರಶ್ನೆಯಾಗಿದೆ. ಪಾಲಕರೂ ತಮ್ಮ ಮಕ್ಕಳಿಗೆ ಕಟ್ಟಡದತ್ತ ಸುಳಿಯದಂತೆ ತಾಕೀತು ಮಾಡಿ ಕಳಿಸುತ್ತಿದ್ದಾರೆ. ಗ್ರಾಪಂನವರು ಸಮುದಾಯ ಭವನಕ್ಕೆ ಕಾರ್ಯಾಲಯ ಸ್ಥಳಾಂತರಗೊಳಿಸಿದ ನಂತರ ಅರ್ಧಕ್ಕೆ ಕೆಡವಿ ನಿಂತಿರುವ ಕಟ್ಟಡದತ್ತ ಚಿತ್ತ ಹರಿಸಿಲ್ಲ. ಈ ಕಟ್ಟಡ ನೆಲಸಮಗೊಳಿಸುವಂತೆ ಶಿಕ್ಷಕ ಮತ್ತು ಪಾಲಕರು ಸಂಬಂಧಪಟ್ಟವರಿಗೆ ತಿಳಿಸುತ್ತಾ ಬಂದಿದ್ದಾರೆ. ಆದರೂ ಯಾರೊಬ್ಬರೂ ಇದರ ಬಗ್ಗೆ ನಿಗಾವಹಿಸುತ್ತಿಲ್ಲ. ಇನ್ನಾದರೂ ಗ್ರಾಪಂನವರು ಅವಘಡ ಸಂಭವಿಸುವ ಮೊದಲೇ ಶಿಥಿಲ ಕಟ್ಟಡ ತೆರವುಗೊಳಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಕುರಿತು ಬಿಇಒ ವಿ.ವಿ. ಸಾಲಿಮಠ ಅವರನ್ನು ಸಂಪರ್ಕಿಸಿದರೆ ಕಟ್ಟಡ ತೆರವು ಗೊಳಿಸಲು ಪಿಡಿಒ ಅವರಿಗೆ ತಿಳಿಸಲಾಗಿದೆ ಎನ್ನುತ್ತಾರೆ. ಗ್ರಾಪಂ ಪಿಡಿಒ ಎಸ್‌.ಎಫ್‌. ಮಾಳವಾಡ ಅವರನ್ನು ಸಂಪರ್ಕಿಸಿದರೆ ಈ ಕಟ್ಟಡದ ಅರ್ಧಭಾಗ ಈಗಾಗಲೇ ತೆರವುಗೊಳಿಸಲಾಗಿದೆ. ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಇನ್ನುಳಿದ ಕಟ್ಟಡ ತೆರವುಗೊಳಿಸುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.