ದಯಾಮರಣಕ್ಕೆ 16 ಅಭ್ಯರ್ಥಿಗಳ ಅರ್ಜಿ


Team Udayavani, Jan 5, 2023, 10:10 AM IST

3-health-inspector-applications

ಗದಗ: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ 2,692 ಆರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆಗಳನ್ನು ಕಳೆದ 7 ವರ್ಷಗಳಿಂದ ಭರ್ತಿ ಮಾಡದೇ ಇರುವುದರಿಂದ ವಯೋಮಿತಿ ಮೀರುತ್ತಿರುವ ಹಲವು ಅಭ್ಯರ್ಥಿಗಳು ದಯಾಮರಣಕ್ಕೆ ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ 2,500 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, 8,871 ಉಪಕೇಂದ್ರಗಳಿವೆ. ಒಂದು ಉಪ ಕೇಂದ್ರಕ್ಕೆ ಒಬ್ಬ ಪುರುಷ ಆರೋಗ್ಯ ಸಹಾಯಕರಂತೆ ಒಟ್ಟು 8,871 ಹುದ್ದೆಗಳ ಅವಶ್ಯಕತೆಯಿದೆ.

ಆದರೆ, 2016ರಕ್ಕೂ ಪೂರ್ವದಲ್ಲಿ 5,827 ಹುದ್ದೆಗಳು ಮಂಜೂರಾಗಿದ್ದು, 3,185 ಆರೋಗ್ಯ ಸಹಾಯಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. 2016ರಿಂದ ಈವರೆಗೂ ಆರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆ ಖಾಲಿ ಉಳಿದಿದ್ದು, ನೇಮಕ ಪ್ರಕ್ರಿಯೆಯನ್ನೇ ಆರಂಭಿಸಿಲ್ಲ.

ಅನುಮೋದನೆ ನೀಡುತ್ತಿಲ್ಲ ಈಗಾಗಲೇ ಆರೋಗ್ಯ ನಿರೀಕ್ಷಣಾಧಿಕಾರಿಗಳ ಖಾಲಿ ಇರುವ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವ ಕುರಿತಂತೆ ಸರಕಾರ ಕಳೆದ ಎಂಟು ತಿಂಗಳ ಹಿಂದೆ ಆರ್ಥಿಕ ಇಲಾಖೆಗೆ ಕಡತ ರವಾನಿಸಿತ್ತು. ಆದರೆ, ಆರ್ಥಿಕ ಇಲಾಖೆ ಹುದ್ದೆಗಳ ಪೂರ್ಣ ಪ್ರಮಾಣದ ನೇಮಕಾತಿಗೆ ಅನುಮೋದನೆ ನೀಡುತ್ತಿಲ್ಲ. ಇದರಿಂದ ಬೇಸತ್ತ ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆ ಆರಂಭಿಸಿ ಇಲ್ಲವೇ ದಯಾಮರಣಕ್ಕೆ ಅನುಮತಿ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.

ಮಯೋಮಿತಿ ಹೆಚ್ಚುತ್ತಿದೆ ರಾಜ್ಯದಲ್ಲಿ ಡಿಪ್ಲೊಮಾ ಇನ್‌ ಹೆಲ್ತ್‌ ಇನ್ಸ್‌ಪೆಕ್ಟರ್‌ ಅಧ್ಯಯನ ಮುಗಿಸಿದ 10,000ಕ್ಕೂ ಹೆಚ್ಚು ಅಭ್ಯರ್ಥಿಗಳಿದ್ದು, 2000ಕ್ಕೂ ಹೆಚ್ಚು ಅಭ್ಯರ್ಥಿಗಳು ಮಯೋಮಿತಿ ಮೀರುತ್ತಿದ್ದಾರೆ. ಡಿಪ್ಲೊಮಾ ಇನ್‌ ಹೆಲ್ತ್‌ ಇನ್ಸ್‌ಪೆಕ್ಟರ್‌ ಅಧ್ಯಯನ ಮುಗಿಸಿದ ಅಭ್ಯರ್ಥಿಗಳು ಖಾಸಗಿ ವಲಯದಲ್ಲಿ ಉದ್ಯೋಗ ಅವಕಾಶವೂ ಸಿಗದೆ ಅಸಹಾಯಕ ಸ್ಥಿತಿಗೆ ತಲುಪಿದ್ದು, ದಯಾಮರಣಕ್ಕೆ ಅವಕಾಶ ಕೋರಿ ಅರ್ಜಿ ಸಲ್ಲಿಸಲು ಮಂದಾಗುತ್ತಿದ್ದಾರೆ.

ಜಿಲ್ಲೆಯಲ್ಲಿ 16 ಜನರಿಂದ ಅರ್ಜಿ ಉದ್ಯೋಗದಿಂದ ಅವಕಾಶ ವಂಚಿತರಾಗಿ, ವಯೋಮಿತಿ ಮೀರುತ್ತಿರುವ ಡಿಪ್ಲೊಮಾ ಇನ್‌ ಹೆಲ್ತ್‌ ಇನ್ಸ್‌ಪೆಕ್ಟರ್‌ ಅಧ್ಯಯನ ಮುಗಿಸಿದ 13 ಅಭ್ಯರ್ಥಿಗಳು ಡಿ.29ರಂದು ಮತ್ತು 3 ಅಭ್ಯರ್ಥಿಗಳು ಜ.4ರಂದು ದಯಾಮರಣಕ್ಕೆ ಅವಕಾಶ ಕೊಡಿ ಇಲ್ಲವೇ, ನೇಮಕಾತಿ ಪ್ರಕ್ರಿಯೆ ಆರಂಭಿಸಿ ಎಂದು ಮನವಿ ಮಾಡಿದ್ದಾರೆ.

ಚಂದ್ರು ಕುರ್ತಕೋಟಿ, ಅರುಣ ಉಗಲಾಟ, ಬಸವರಾಜ ತೇಜಪ್ಪನವರ, ಮಲ್ಲಪ್ಪ ಅಡವಿ, ಕಲ್ಲಯ್ಯ ಪತ್ರಿಮಠ, ಮುತ್ತು ಗುಜುಲರ ಸೇರಿ ಒಟ್ಟು 16 ಜನರು ಅರ್ಜಿ ಸಲ್ಲಿಸಿದ್ದಾರೆ.

ನೇಮಕಾತಿಯಿಲ್ಲ ರಾಜ್ಯದಲ್ಲಿ ಸರಕಾರ ಡಿಪ್ಲೊಮಾ ಇನ್‌ ಹೆಲ್ತ್‌ ಇನ್ಸ್‌ಪೆಕ್ಟರ್‌ ಕಾಲೇಜುಗಳನ್ನು ತೆರೆಯಲು ಅನುಮತಿ ನೀಡುತ್ತಿದೆ. ಆದರೆ, ನೇಮಕಾತಿ ಮಾತ್ರ ಮಾಡಿಕೊಳ್ಳುತ್ತಿಲ್ಲ. ಪ್ರತಿ ವರ್ಷ ಡಿಪ್ಲೊಮಾ ಇನ್‌ ಹೆಲ್ತ್‌ ಇನ್ಸ್‌ಪೆಕ್ಟರ್‌ ಕೋರ್ಸ್‌ ಪೂರ್ಣಗೊಳಿಸಿ 2000 ಅಭ್ಯರ್ಥಿಗಳು ಹೊರಬರುತ್ತಿದ್ದಾರೆ. ಇದರಿಂದ ಸಾಕಷ್ಟು ಯುವಕರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಡಿಪ್ಲೊಮಾ ಇನ್‌ ಹೆಲ್ತ್‌ ಇನ್ಸ್‌ಪೆಕ್ಟರ್‌ ಕೋರ್ಸ್‌ ಬಂದ್‌ ಮಾಡುವಂತೆ ಅಭ್ಯರ್ಥಿಗಳು ಒತ್ತಾಯಿಸುತ್ತಿದ್ದಾರೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.