ಬಗರ್‌ಹುಕುಂ ಸಾಗುವಳಿದಾರರ ಧರಣಿ ಅಂತ್ಯ

ರೈತರು ಯಾವುದೇ ಹಂತದಲ್ಲಿ ಆತಂಕಗೊಳ್ಳುವ ಅಗತ್ಯವಿಲ್ಲ

Team Udayavani, Sep 17, 2022, 6:32 PM IST

ಬಗರ್‌ಹುಕುಂ ಸಾಗುವಳಿದಾರರ ಧರಣಿ ಅಂತ್ಯ

ಶಿರಹಟ್ಟಿ: ಬಗರ್‌ಹುಕುಂ ಸಾಗುವಳಿದಾರರು ಕಳೆದ 5 ದಿನಗಳಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹ ಜಿಲ್ಲಾಡಳಿತದ ಸಕಾರಾತ್ಮಕ ಭರವಸೆ ಹಿನ್ನೆಲೆಯಲ್ಲಿ ಅಂತ್ಯಗೊಂಡಿದೆ. ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರಶಾಂತ ವರಗಪ್ಪನವರ, ತಹಶೀಲ್ದಾರ್‌ ಕಲಗೌಡ ಪಾಟೀಲ, ಸಿಪಿಐ ವಿಕಾಸ ಲಮಾಣಿ ಅವರು ಧರಣಿನಿರತರಿಗೆ ಎಳನೀರು ಕುಡಿಸುವ ಮೂಲಕ ಸತ್ಯಾಗ್ರಹಕ್ಕೆ ತೆರೆ ಎಳೆದರು.

ಈ ವೇಳೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿ, ಈಗಾಗಲೇ ತಿರಸ್ಕೃತಗೊಂಡಿರುವ 802 ಅರ್ಜಿಗಳನ್ನು ನ. 15ರ ನಂತರ ಪುನರ್‌ ಪರಶೀಲನೆ ಮಾಡಿ ಮತ್ತೆ ಸೂಕ್ತ ದಾಖಲೆ ಪಡೆದು ಯಾರಿಗೆ ಭೂಮಿ ಇಲ್ಲವೋ ಅವರಿಗೆ ಮೊದಲ ಅವಕಾಶ ಕಲ್ಪಿಸಿಕೊಡುವ ಕುರಿತು ಮೇಲಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಈಗಾಗಲೇ ಸಾಗುವಳಿ ಮಾಡುತ್ತಿರುವ ರೈತರಿಗೆ ಯಾವುದೇ ತೊಂದರೆ ಆಗದಂತೆ ಅರಣ್ಯ ಇಲಾಖೆ ಅಧಿ ಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದ್ದು, ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಸೂಚನೆ ನೀಡಲಾಗಿದೆ. ರೈತರು ಯಾವುದೇ ಹಂತದಲ್ಲಿ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದರು.

ಸಂಘಟನೆಯ ಮುಖಂಡ ರವಿಕಾಂತ ಅಂಗಡಿ ಮಾತನಾಡಿ, ನಮ್ಮ ಧರಣಿ ಸತ್ಯಾಗ್ರಹ ಬಹುತೇಕ ಯಶಸ್ವಿಯಾಗಿದ್ದು, ಬಹುತೇಕ ಬೇಡಿಕೆಗಳಿಗೆ ಜಿಲ್ಲಾಧಿಕಾರಿಗಳು ಸ್ಪಂದಿಸಿದ್ದಾರೆ. ಕಂದಾಯ, ಗೋಮಾಳ, ಹುಲ್ಲುಗಾವಲು ಪ್ರದೇಶಗಳಲ್ಲಿ ಭೂಮಿ ಸಾಗುವಳಿ ಮಾಡುತ್ತಿರುವ ರೈತರು ಯಾವುದೇ ಆತಂಕ ಪಡಬಾರದು ಎಂದು ಹೇಳಿದರು. ನ.15ರ ನಂತರ ತಿರಸ್ಕೃತಗೊಂಡಿರುವ 802 ಅರ್ಜಿಗಳ ಪುನರ್‌ ಪರಿಶೀಲನೆ ನಡೆಸಿ, ಕಾನೂನಿನಡಿ ಹಕ್ಕುಪತ್ರ ವಿತರಿಸುವ ಕಾರ್ಯ ನಡೆಯಲಿದೆ.

ಕೆಲೂರಿನಲ್ಲಿ ಹುತಾತ್ಮರಾದ ರೈತ ಮಹಿಳೆಗೂ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು. ದೇವಪ್ಪ ಲಮಾಣಿ, ಶಿವು ಲಮಾಣಿ, ಈರಣ್ಣ ಲಮಾಣಿ, ಶ್ರೀನಿವಾಸ ಬಾರಬಾರ, ಮಂಜುನಾಥ ಅರೆಪಲ್ಲೆ, ಎನ್‌.ಟಿ.ಪೂಜಾರ, ಪುಂಡಲೀಕ ಲಮಾಣಿ, ಶಿವು ಲಮಾಣಿ, ಹನುಮಂತ ನಾದಿಗಟ್ಟಿ, ರೂಪಾ ನಾಯಕ, ಧನಸಿಂಗಪ್ಪ ಲಮಾಣಿ, ಚಂದ್ರಕಾಂತ ಚವ್ಹಾಣ, ರಮೇಶ ಪವಾರ, ನಾಮದೇವ ಮಾಂಡ್ರೆ, ನೀಲು ರಾಠೊಡ, ಸಿಪಿಐ ವಿಕಾಸ ಲಮಾಣಿ ಮತ್ತು ಪಿಎಸ್‌ಐ ಪ್ರವೀಣ ಗಂಗೋಳ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.