ಭೂಸೇನಾ ನಿಗಮ ನಿರ್ಲಕ್ಷ್ಯ: ಮೇಲೇಳದ ಗ್ರಾಪಂ ಕಟ್ಟಡ


Team Udayavani, Nov 16, 2019, 12:57 PM IST

gadaga-tdy-3

ಲಕ್ಷ್ಮೇಶ್ವರ: ತಾಲೂಕಿನ ಅಡರಕಟ್ಟಿ ಗ್ರಾಮ ಪಂಚಾಯಿತಿಗೆ ಸ್ವಂತ ಕಟ್ಟಡಕ್ಕಾಗಿ ಭೂ ಸೇನಾ ನಿಗಮಕ್ಕೆ ಎರಡು ವರ್ಷಗಳ ಹಿಂದೆಯೇ 15 ಲಕ್ಷ ರೂ.ಗಳ ಚೆಕ್‌ ನೀಡಿದ್ದರೂ ನಿಗಮದವರು ತಳಪಾಯ ಹಾಕಿ ಕೈಬಿಟ್ಟಿದ್ದಾರೆ.

ಹೊಸ ಕಟ್ಟಡದ ಕನಸು ಇನ್ನೂ ನನಸಾಗಿಲ್ಲ. ರಾಜ್ಯ ಸರ್ಕಾರದ 15 ಲಕ್ಷ ರೂ. ಅನುದಾನದಲ್ಲಿ ಭೂಸೇನಾ ನಿಗಮದವರು ಕಟ್ಟಡದ ವಿನ್ಯಾಸ, ಬುನಾದಿ ಮತ್ತು ಕಾಲಂ ನಿರ್ಮಿಸಿಕೊಡುವ ಜವಾಬ್ದಾರಿ ಮಾತ್ರ. ಆದರೆ 2017 ರಲ್ಲಿಯೇ ಪಂಚಾಯತಿಯಿಂದ ನಿಗಮಕ್ಕೆ 15 ಲಕ್ಷ ರೂ. ಗಖಳ ಚೆಕ್‌ ನೀಡಿದ್ದರೂ ಇದುವರೆಗೂ ಕಟ್ಟಡ ನೆಲ ಬಿಟ್ಟು ಮೇಲೆದ್ದಿಲ್ಲದಿರುವುದು ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ಗ್ರಾಪಂ ಆರಂಭವಾದಾಗಿನಿಂದಲೂ ಕಂದಾಯ ಇಲಾಖೆಗೆ ಸೇರಿದ ಛಾವಡಿಯಲ್ಲಿಯೇ ಕಾರ್ಯ ನಿರ್ವಹಿಸುತ್ತಿದೆ. ಕಳೆದ ಮೂರ್‍ನಾಲ್ಕು ವರ್ಷಗಳಿಂದ ಈ ಕಟ್ಟಡ ಶಿಥಿಲಗೊಂಡಿದ್ದರಿಂದ ಪಕ್ಕದಲ್ಲಿಯೇ ಇರುವ ಚಿಕ್ಕದಾದ ಯುವಕ ಮಂಡಳದ ಕೊಠಡಿಯಲ್ಲಿ ಗ್ರಾಪಂ ಕಾರ್ಯಾಲಯ ಕಾರ್ಯ ನಿರ್ವಹಿಸುತ್ತಿದೆ. ಈ ಪಂಚಾಯಿತಿ ಅಡರಕಟ್ಟಿ, ಕೊಂಡಿಕೊಪ್ಪ, ಅಡರಕಟ್ಟಿ ತಾಂಡಾ ಮತ್ತು ಹರದಗಟ್ಟಿ ಗ್ರಾಮಗಳನ್ನು ಒಳಗೊಂಡಿದೆ.

ಗ್ರಾಪಂ ಸದಸ್ಯರು ಸೇರಿ ಸಾರ್ವಜನಿಕರು ಕಿಷ್ಕಿಂದೆಯಂತಿರುವ ಕಟ್ಟಡದಲ್ಲಿಯೇ ಕಾಲ ಕಳೆಯಬೇಕಾಗಿದೆ. ಸ್ವಂತ ಕಟ್ಟಡ ಹೊಂದುವ ಉದ್ದೇಶದಿಂದ ಎನ್‌ಆರ್‌ಇಜಿಯಲ್ಲಿ 16.25 ಲಕ್ಷ, 14ನೇ ಹಣಕಾಸಿನಲ್ಲಿ 3.75 ಲಕ್ಷ ಹಣ ತೆಗೆದಿರಿಸಲಾಗಿದೆ. ಒಟ್ಟು 40 ಲಕ್ಷ ರೂ.ಗಳ ಅಂದಾಜು ವೆಚ್ಚದ ಕಟ್ಟಡಕ್ಕೆ ಬೇಕಾಗುವ 5 ಲಕ್ಷ ರೂ. ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಕಟ್ಟಡ ಪೂರ್ಣ ಗೊಳಿಸುವ ಉದ್ದೇಶವನ್ನು ಗ್ರಾಪಂ ಆಡಳಿತ ಮಂಡಳಿ ಹೊಂದಿದೆ. ಕಳೆದ ಒಂದು ವರ್ಷದ ಹಿಂದೆಯೇ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿದ್ದರೂ ಭೂಸೇನಾ ನಿಗಮದ ನಿರ್ಲಕ್ಷ್ಯದಿಂದಾಗಿ ಕಟ್ಟಡ ಕಾಮಗಾರಿಯ ಹೊಣೆ ಮುಗಿಯುವಂತೆ ಕಾಣುತ್ತಿಲ್ಲ.

ಭೂಸೇನಾ ನಿಗಮದವರಿಗೆ 2 ವರ್ಷಗಳ ಹಿಂದೆಯೇ ಚೆಕ್‌ ನೀಡಲಾಗಿದೆ. ಕಳೆದ ಏಳೆಂಟು ತಿಂಗಳಿಂದ ತಮ್ಮ ಪಾಲಿನ ಕಾಮಗಾರಿ ಪೂರ್ಣಗೊಳಿಸಿ ಪಂಚಾಯಿತಿಗೆ ಹಸ್ತಾಂತರಿಸಿದರೆ ಕಟ್ಟಡವನ್ನು ಗ್ರಾಪಂ ವತಿಯಿಂದ ಪೂರ್ಣಗೊಳಿಸಲು ಸಿದ್ಧರಿದ್ದೇವೆ. –ಗಣೇಶ ನಾಯಕ, ಗ್ರಾಪಂ ಅಧ್ಯಕ್ಷ

ಭೂಸೇನಾ ನಿಗಮದವರಿಗೆ ಕಾಮಗಾರಿ ಪೂರ್ಣಗೊಳಿಸಿ ಪಂಚಾಯಿತಿಗೆ ಹಸ್ತಾಂತರಿಸುವಂತೆ ಚುನಾಯಿತ ಪ್ರತಿನಿಧಿಗಳು, ಹಿರಿಯ ಅಧಿಕಾರಿಗಳ ಮೂಲಕ ತಿಳಿಸಿದ್ದರೂ ಸ್ಪಂದಿಸುತ್ತಿಲ್ಲ. ಈ ಬಾರಿಯ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು.ಎಸ್‌.ಆರ್‌. ಸೋಮಣ್ಣವರ, ಪಿಡಿಒ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.