BJP-JDS ಮೈತ್ರಿಯಿಂದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ: ಬೊಮ್ಮಾಯಿ
ಕಾಂಗ್ರೆಸ್ ತೆರಿಗೆ ವಂಚನೆ ಪ್ರಶ್ನಿಸಬಾರದೇ ? ಸಿದ್ದರಾಮಯ್ಯ ವಿರುದ್ದ ನಮ್ಮ ಹೋರಾಟ ಇದ್ದೇ ಇರುತ್ತದೆ
Team Udayavani, Mar 31, 2024, 12:14 PM IST
ಗದಗ: ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಗಳು ಒಂದಾಗಿರುವುದರಿಂದ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ಗದಗನಲ್ಲಿ ಇಂದು ಜೆಡಿಎಸ್ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಜೆಡಿಎಸ್ ಮುಖಂಡರ ಜೊತೆ ಸಭೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಸ್ ಹಾಗೂ ಬಿಜೆಪಿ ನಡುವೆ ರಾಜ್ಯಮಟ್ಟದಲ್ಲಿ ಮೈತ್ರಿ ಆಗಿರುವುದರಿಂದ ರಾಜ್ಯದಲ್ಲಿ ಹೊಸ ರಾಜಕೀಯ ಗಾಳಿ ಬೀಸುತ್ತಿದೆ. ಮೊನ್ನೆ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಎಲ್ಲ ಜಿಲ್ಲೆ ಹಾಗೂ ಕ್ಷೇತ್ರದಲ್ಲಿ ಜೆಡಿಎಸ್ ಬಿಜೆಪಿ ಸಮನ್ವಯ ಮುಂದುವರೆಸಿಕೊಂಡು ಹೋಗಬೇಕು ಎಂದು ತೀರ್ಮಾನ ಮಾಡಲಾಗಿದೆ ಅದರಂತೆ ಕ್ಷೇತ್ರದಲ್ಲಿ ಸಮನ್ವಯ ಸಭೆ ಮಾಡುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ಅತ್ಯಂತ ಹೆಚ್ಚು ಸ್ಥಾನ ಗೆಲ್ಲಲು ದೇವೇಗೌಡರು ಹಾಗೂ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸುತ್ತೇವೆ. ಎರಡೂ ಪಕ್ಷಗಳು ಒಂದಾಗಿರುವುದರಿಂದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಷಾಗಿದೆ ಎಂದು ಹೇಳಿದರು.
ಇದೇ ವೇಳೆ ಮಂಡ್ಯದಲ್ಲಿ ಮೈತ್ರಿಯಲ್ಲಿ ಗೊಂದಲದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಗೊಂದಲ ಇಲ್ಲ. ಎರಡೂ ಪಕ್ಷಗಳ ಮುಖಂಡರು ಮಾತುಕತೆ ನಡೆಸುತ್ತಿದ್ದಾರೆ. ಸುಮಲತಾ ಅವರೊಂದಿಗೆ ನಮ್ಮವರು ಮಾತುಕತೆ ನಡೆಸಿದ್ದಾರೆ. ನಮ್ಮ ರಾಜ್ಯಾಧ್ಯಕ್ಷರು ಮಾತನಾಡಿದ್ದಾರೆ. ಅವರ ಮನವೊಲಕೆ ಆಗುತ್ತಿದೆ. ಯಾವುದೇ ಗೊಂದಲ ಇಲ್ಲ. ಚಿತ್ರದುರ್ಗದಲ್ಲಿ ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ. ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ಗದಗ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಅವರೂ ಪಕ್ಷದ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಹೇಳಿದರು.
ಬ್ಲಾಕ್ ಮನಿ ಇಟ್ಟುಕೊಂಡರೆ ಪ್ರಶ್ನಿಸಬಾರದೇ?
ಕಾಂಗ್ರೆಸ್ ಯಾವಾಗಲೂ ಬ್ಲಾಕ್ ಮನಿ ಮೇಲೆ ರಾಜಕಾರಣ ಮಾಡುತ್ತದೆ. ಸುಮಾರು 600 ಕೋಟಿ ರೂ.ತೆರಿಗೆ ವಂಚನೆ ಮಾಡಿದೆ. ಅದನ್ನು ಪ್ರಶ್ನೆ ಮಾಡಬಾರದೇ, ಅದಕ್ಕೂ ಚುನಾವಣೆಗೂ ಸಂಬಂಧವಿಲ್ಲ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಅವರು ದೇವೇಗೌಡರಿಗೆ ಜೆಡಿಎಸ್ ಪಕ್ಷ ಎಲ್ಲಿದೆ ಎಂದು ಪ್ರಶ್ನಿಸಿದ್ದರು. ಆ ಹಿನ್ನೆಲೆಯಲ್ಲಿ ದೇವೇಗೌಡರು ಅವರ ಗರ್ವಭಂಗವಾಗಬೇಕು ಅಂತ ಹೇಳಿಕೆ ಕೊಟ್ಟಿದ್ದಾರೆ. ನಾವು ಕಾಂಗ್ರೆಸ್ ವಿರುದ್ದ ಮೈತ್ರಿ ಮಾಡಿಕೊಂಡಿದ್ದೇವೆ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕರು, ಹೀಗಾಗಿ ಅವರ ವಿರುದ್ದ ನಮ್ಮ ಹೋರಾಟ ಇದ್ದೇ ಇರುತ್ತದೆ ಎಂದರು.
ಇದೇ ವೇಳೆ ದಾವಣಗೆರೆ ಬಿಜೆಪಿ ಮಹಿಳಾ ಅಭ್ಯರ್ಥಿ ಕುರಿತು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಯಾವುದೇ ಪಕ್ಷದ ಅಭ್ಯರ್ಥಿ ಇರಲಿ ಮಹಿಳೆಯರ ಬಗ್ಗೆ ಮಾತನಾಡುವುದು ಸರಿಯಲ್ಲ. ಮಹಿಳೆಯರಿಗೆ ಅವಮಾನ ಮಾಡಿದಂತಾಗುತ್ತದೆ. ಅದಕ್ಕೆ ಸಹಜವಾಗಿ ವಿರೋಧ ವ್ಯಕ್ತವಾಗುತ್ತದೆ ಎಂದು ಹೇಳಿದರು.
ಇನ್ನು ಜೆಡಿಎಸ್ ಶಾಲ್ ಹಾಕಿಕೊಂಡಿರುವುದಕ್ಕೆ ಏನು ಅನಿಸುತ್ತಿದೆ ಎಂದು ಕೇಳಿದ ಪ್ರಶ್ನೆಗೆ ಜವಾಬ್ದಾರಿ ಡಬಲ್ ಆಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Bengaluru: ವಂಡರ್ಲಾದಲ್ಲಿ 2 ಟಿಕೆಟ್ ಖರೀದಿಸಿದರೆ 1 ಟಿಕೆಟ್ ಫ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.