ನರೇಗಲ್ಲ ಹಿರೇ ಕೆರೆಗೆ ಕೇಂದ್ರದ ಅಧಿಕಾರಿ ಭೇಟಿ

•ಜಮೀನಿನ ಬದುವುಗಳಲ್ಲಿ ಸಸಿ ನೆಡಲು ರೈತರನ್ನು ಪ್ರೇರೇಪಿಸಿ

Team Udayavani, Jul 8, 2019, 3:07 PM IST

gadaga-tdy-5..

ನರೇಗಲ್ಲ: ಐತಿಹಾಸಿಕ ಹಿರೇ ಕೆರೆಯನ್ನು ಕೇಂದ್ರ ವಾಣಿಜ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಸುನೀಲಕುಮಾರ ಭೇಟಿ ನೀಡಿ ಪರಿಶೀಲಿಸಿದರು.

ನರೇಗಲ್ಲ: ಪಟ್ಟಣದ ಐತಿಹಾಸಿಕ ಹಿರೇ ಕೆರೆಗೆಕೇಂದ್ರ ವಾಣಿಜ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಸುನೀಲಕುಮಾರ ರವಿವಾರ ಭೇಟಿ ನೀಡಿ ಕೆರೆ ಅಭಿವೃದ್ಧಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದಿನದಿಂದ ದಿನಕ್ಕೆ ಅಂತರ್ಜಲ ಮಟ್ಟ ದಾಖಲೆ ಪ್ರಮಾಣದಲ್ಲಿ ಕುಸಿಯುತ್ತಿದೆ. ಸಕಾಲಕ್ಕೆ ಮಳೆಯಾಗುತ್ತಿಲ್ಲ. ಜಲಮೂಲಗಳು ನಾಶವಾಗುತ್ತಿವೆ. ಆದರೆ, ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಪುರಾತ ಜಲಮೂಲಗಳ ಸಂರಕ್ಷO ಕಾರ್ಯ ನಡೆಯುತ್ತಿರುವುದು ಶ್ಲಾಘನೀಯವಾಗಿದೆ. ಇದರಂತೆ ಪ್ರತಿಯೊಂದು ಗ್ರಾಮಗಳ ಕೆರೆ ಅಭಿವೃದ್ಧಿಗೆ ಸಾರ್ವಜನಿಕರು ಮುಂದಾದಲ್ಲಿ ಬರಗಾಲದಿಂದ ಮುಕ್ತಿ ಸಿಗಲಿದೆ ಎಂದು ಹೇಳಿದರು.

ಗದಗ ಜಿಲ್ಲೆಯಲ್ಲಿ ಸರಾಸರಿ ಶೇ.55ರಷ್ಟು ಮಳೆಯಾಗುತ್ತಿದೆ. ಅದರಲ್ಲಿ ಅಂದಾಜು ಶೇ. 15ರಷ್ಟು ಮಾತ್ರ ಬಳಕೆಯಾಗುತ್ತಿದೆ. ಇನ್ನುಳಿದ ನೀರು ಬಳಕೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ಸಾರ್ವಜನಿಕರು, ರೈತರು ಮುಂದೆ ನಿಂತು ಸ್ವಂತ ಹಣದಲ್ಲಿ ಹೂಳೆತ್ತುವ ಕಾರ್ಯದೊಂದಿಗೆ ಕೆರೆ ಅಭಿವೃದ್ಧಿ ಕಾರ್ಯ ಕೈಗೊಂಡಿರುವುದು ಬಹಳ ಸಂತಸದ ವಿಷಯವಾಗಿದೆ. ಕೆರೆಗೆ ನೀರು ತುಂಬಿಸುವ ಮಾರ್ಗ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವಂತೆ ಸೂಚಿಸಿದರು.

ನರೇಗಲ್ಲ ನೆಲ, ಜಲ ಸಂರಕ್ಷಣಾ ಸಮಿತಿ ವತಿಯಿಂದ ಹಿರೇ ಕೆರೆ ಅಭಿವೃದ್ಧಿಗಾಗಿ ಮನವಿ ಸಲ್ಲಿಸಲಾಯಿತು. ನೆಲ ಜಲ ಸಂರಕ್ಷಣಾ ಸಮಿತಿ ಅಧ್ಯಕ್ಷ ಗುರುರಾಜ ಕುಲಕರ್ಣಿ, ಬಸವರಾಜ ವಂಕಲಕುಂಟಿ, ಉಮೇಶ ಸಂಗನಾಳಮಠ, ಕೆ.ಜಿ. ಉಡುಪಿ, ರವೀಂದ್ರನಾಥ ದೊಡ್ಡಮೇಟಿ, ಶಿವನಗೌಡ ಪಾಟೀಲ, ನಿಂಗನಗೌಡ ಲಕ್ಕನಗೌಡ್ರ, ಕೆ.ಸಿ. ಜೋಗಿ, ಪ.ಪಂ ಮುಖ್ಯಾಧಿಕಾರಿ ಎಸ್‌.ಎಸ್‌. ಹುಲ್ಲಮ್ಮನವರ, ಇಂಜಿನಿಯರ್‌ ವಿ.ಪಿ. ಕಾಟೇವಾಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಅಬ್ಬಿಗೇರಿಗೆ ಭೇಟಿ: ನರೇಗಲ್ಲ ಹಿರೇಕೆರೆ ವೀಕ್ಷಣೆ ನಂತರ ಅಧಿಕಾರಿಗಳ ತಂಡ ಅಬ್ಬಿಗೇರಿ ಕೋಟುಮಚಗಿ ರಸ್ತೆ ಪುರಾತನ ಕಲಕೇರಿ ಕೆರೆಯನ್ನು ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣವಾದ ಒಡ್ಡುಗಳ ಕಾಮಗಾರಿ ವೀಕ್ಷಿಸಿತು. ಜಮೀನಿನ ಬದುವುಗಳಲ್ಲಿ ಸಸಿ ನೆಡಲು ರೈತರಿಗೆ ಪ್ರೇರೇಪಿಸಬೇಕು. ರಸ್ತೆ ಅಕ್ಕ ಪಕ್ಕದಲ್ಲಿಯೂ ಸಸಿಗಳನ್ನು ನೆಡುವ ಕಾರ್ಯವಾಗಬೇಕು. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಗುರುತಿಸಿ ಅವುಗಳ ಅಂತರ್ಜಲಮಟ್ಟ ವೃದ್ಧಿಸಲು ಕ್ರಮ ಕೈಗೊಳ್ಳಬೇಕು. ಮಳೆ ನೀರು ಹರಿದು ಹೋಗದಂತೆ ಸಂಗ್ರಹಿಸಲು ಅಗತ್ಯವಾದ ಯೋಜನೆ ರೂಪಿಸಬೇಕು ಎಂದು ಹೆಚ್ಚುವರಿ ಕಾರ್ಯದರ್ಶಿ ಸುನೀಲಕುಮಾರ ಸಲಹೆ ನೀಡಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಿ.ಬಿ. ಬಾಲರಡ್ಡಿ, ಇಒ ಎಂ.ವಿ. ಚಳಗೇರಿ, ಯೋಜನಾ ನಿರ್ಧೇಶಕ ಸಂತೋಷ ಪಾಟೀಲ, ಸಹಾಯಕ ಕೃಷಿ ಅಧಿಕಾರಿ ಸಿದ್ದೇಶ ಕೋಡಿಹಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.