ಪರಿಸರ ಜಾಗೃತಿಗಾಗಿ ಸೈಕಲ್ ಯಾತ್ರೆ
Team Udayavani, Apr 2, 2022, 4:38 PM IST
ಗಜೇಂದ್ರಗಡ: ಪರಿಸರ ಉಳಿಸದೆ ಹೋದಲ್ಲಿ ಮನುಷ್ಯನಿಗೆ ಉಸಿರು ಇಲ್ಲದಂತಾಗುತ್ತದೆ. ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಜೀವನ ನಡೆಸುವ ಪರಿಸ್ಥಿತಿ ಎದುರಾಗಲಿದೆ. ಈ ನಿಟ್ಟಿನಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಯಾದಗಿರಿ ವರೆಗೆ ಸೈಕಲ್ ಪರ್ಯಟಣೆ ಕೈಗೊಂಡಿದ್ದೇನೆ ಎಂದು ಪರಿಸರ ಪ್ರೇಮಿ ಮುತ್ತಣ್ಣ ತಿರ್ಲಾಪೂರ ಹೇಳಿದರು.
ರೋಣ ತಾಲೂಕಿನ ಕರ್ಕಿಕಟ್ಟಿ ಗ್ರಾಮದಿಂದ ಯಾದಗಿರಿ ವರೆಗೆ ಕೈಗೊಂಡ ಪರಿಸರ ಜಾಗೃತಿ ಸೈಕಲ್ ಪರ್ಯಟಣೆ ನಿಮಿತ್ತ ಪಟ್ಟಣದ ಪುಟ್ಟರಾಜ ಗವಾಯಿಗಳ ವೃತ್ತದಲ್ಲಿ ಶುಕ್ರವಾರ ಸಾರ್ವಜನಿಕರಿಗೆ ಪರಿಸರ ಉಳಿವಿನ ಕುರಿತು ಅರಿವು ಮೂಡಿಸಿ ಮಾತನಾಡಿದರು.
ಇಂದು ಕುಡಿಯುವ ನೀರಿನ ಬಾಟಲ್ ಗಳನ್ನು ಖರೀದಿಸಿ ಕೊಂಡೊಯ್ಯುವಂತೆ, ಮುಂದಿನ ದಿನಗಳಲ್ಲಿ ಆಮ್ಲಜನಕ ಕೊರತೆಯಾಗಿ ಸಿಲಿಂಡರ್ ಹೊತ್ತು ಸಾಗುವ ಪರಿಸ್ಥಿತಿ ಎದುರಾಗದಂತೆ ಪರಿಸರವನ್ನು ಉಳಿಸಲು ಸಹಸ್ರ ಸಂಖ್ಯೆಯ ಗಿಡಗಳನ್ನು ಬೆಳೆಸಬೇಕೆಂದರು.
ಬಹುತೇಕರು ತಮ್ಮ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ಮುಂದಾಗುತ್ತಾರೆ. ಆದರೆ, ಮನುಕುಲವನ್ನು ಸಲುಹುವ ಪರಿಸರದ ಬಗ್ಗೆ ಕಾಳಜಿ ವಹಿಸಿ, ಪ್ರತಿಯೊಬ್ಬರ ಜನ್ಮದಿನದ ಸಂದರ್ಭದಲ್ಲಿ ಸಸಿಗಳನ್ನು ನೆಟ್ಟು, ಪೋಷಣೆಯ ಜವಾಬ್ದಾರಿ ಹೊರಬೇಕಿದೆ. ರಸ್ತೆಗಳಲ್ಲಿ ಗಿಡ, ಮರಗಳನ್ನು ಕಡಿಯದಂತೆ ಎಚ್ಚರಿಕೆ ವಹಿಸಬೇಕಿದೆ. ನಾನು ಪರಿಸರವನ್ನು ಮಕ್ಕಳಂತೆ ರಕ್ಷಿಸುತ್ತೇನೆ ಎಂದರು.
ರೋಣ ತಾಲೂಕಿನಿಂದ ಯಾದಗಿರಿ ವರೆಗೂ ಪರಿಸರ ಜಾಗೃತಿ ಜಾಥಾ ಹಮ್ಮಿಕೊಂಡಿದ್ದು, ರಸ್ತೆಯುದ್ದಕ್ಕೂ ಸಾರ್ವಜನಿಕರಿಗೆ ಪರಿಸರ ಅರಿವು ಮೂಡಿಸುವುದು ನನ್ನ ಕರ್ತವ್ಯವಾಗಿದೆ. ಹೀಗಾಗಿ, ಸೈಕಲ್ ಮೂಲಕ ಈ ಯಾತ್ರೆ ಕೈಗೊಂಡಿದ್ದೇನೆ. ಪ್ರತಿಯೊಬ್ಬರೂ ಸಸ್ಯ ಸಂಪತ್ತು, ಅರಣ್ಯೀಕರಣದ ಬಗ್ಗೆ ಹೆಚ್ಚಿನ ಒತ್ತು ನೀಡುವುದಲ್ಲದೇ, ಬದುಕಿನ ಒಂದು ಭಾಗವಾಗಿ ಸ್ವೀಕರಿಸಬೇಕಿದೆ ಎಂದು ಕರೆ ನೀಡಿದರು.
ಪರಿಸರ ಪ್ರೇಮಿ ಮುತ್ತಣ್ಣ ತಿರ್ಲಾಪೂರ 53 ವರ್ಷದ ಇಳಿವಯಸ್ಸಿನವರಾದರೂ ಎಲ್ಲರೂ ನಾಚುವಂತೆ ಇಂತಹ ಮಹತ್ಕಾರ್ಯಕ್ಕೆ ಮುಂದಾಗಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಲ್ಲದೇ, ಮೈಮೇಲೆ ಹಾಕಿಕೊಂಡಿರುವ ಹಸಿರು ಬಟ್ಟೆಯ ತುಂಬ ಪರಿಸರ ಜಾಗೃತಿಯ ಘೋಷವಾಕ್ಯಗಳು, ಸೈಕಲ್ಗೆ ಅಳಡಿಸಿದ್ದ ತ್ರಿವರ್ಣ ಧ್ವಜ ಎಲ್ಲರನ್ನೂ ಆಕರ್ಷಿಸುತ್ತಿದೆ. ಈ ಸಂದರ್ಭದಲ್ಲಿ ಶ್ರೀಶೈಲ ಅಂಗಡಿ, ಅಲ್ಲಾಭಕ್ಷಿ ನಿಶಾನದಾರ, ರಾಚಪ್ಪ ಅಂಗಡಿ, ಬಾಷೇಸಾಬ ಮುದಗಲ್ಲ, ಅಬ್ದುಲಅಹ್ಮದ ಹಿರೇಮನಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು
Veerashaiva Lingayat ಧರ್ಮವು ವಿಶ್ವಮಾನ್ಯ ಮೌಲ್ಯಗಳನ್ನು ಹೊಂದಿದೆ: ವಿ. ಸೋಮಣ್ಣ
Siddaramaiah;ಔಷಧಿ ಇಲ್ಲದ ಹಾಗೆ ಗಾಯ ಮಾಡಿಕೊಂಡಿದ್ದಾರೆ: ವಿ.ಸೋಮಣ್ಣ
ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.