ಉದ್ಯಾನ’ವನ’ ತಣಿಸುವುದೇ ‘ಮನ’

•ಅನೈರ್ಮಲ್ಯದ ತಾಣ-ಅಭಿವೃದ್ಧಿ ಎಂಬುದು ಗೌಣ •ಹಸಿರು ಹುಲ್ಲಿನ ಹಾಸಿಗೆ ಮಾಯ

Team Udayavani, Jun 10, 2019, 9:57 AM IST

gadaga-tdy-2..

ಗಜೇಂದ್ರಗಡ: ಉದ್ಯಾನವನ ಇದೆ ಆದರೆ ವಾಯುವಿಹಾರಕ್ಕೆ ಸರಿಯಾದ ಫುಟ್ಪಾತ್‌ ರಸ್ತೆ ಇಲ್ಲ, ವಿದ್ಯುತ್‌ ಸಂಪರ್ಕವಿಲ್ಲ, ಸಮರ್ಪಕ ನಿರ್ವಹಣೆ ಇಲ್ಲ, ಹಸಿರು ಹುಲ್ಲಿನ ಹಾಸಿಗೆಯಂತೂ ಇಲ್ಲವೇ ಇಲ್ಲ.

ಒಂದು ಸಮಯದಲ್ಲಿ ಆಕರ್ಷಣೀಯವಾಗಿದ್ದ ಉದ್ಯಾನವನ ಇದೀಗ ಅಂದ ಕಳೆದುಕೊಂಡು ಕಾಲಗರ್ಭಕ್ಕೆ ಸೇರುವ ಹಂತ ತಲುಪಿದ್ದು, ಅಧಿಕಾರಿಗಳು ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳು ಯೋಚಿಸದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪಟ್ಟಣದ ಜನತೆಯ ಬಹುದಿನದ ಬೇಡಿಕೆ ಮಕ್ಕಳ ಉದ್ಯಾನವನ ನಿರ್ಮಿಸುವ ಮೂಲಕ ಪುರಸಭಾ ಆಡಳಿತ ಜನರ ಕನಸು ಸಾಕಾರಗೊಳಿಸಿದೆ. ಆದರೆ ಉದ್ಯಾನವನ ನಿರ್ವಹಣೆ ಮಾತ್ರ ಕೈ ಚೆಲ್ಲಿ ಕುಳಿತಿದೆ. ಗಾರ್ಡನ್‌ ನಿರ್ವಹಣೆಗಾಗಿ ಪುರಸಭೆ ವತಿಯಿಂದ ಪ್ರತಿ ತಿಂಗಳು ಸಾವಿರಾರು ರೂಪಾಯಿ ಖರ್ಚು ಮಾಡುತ್ತಿದೆ. ಆದಾಗ್ಯೂ ಸ್ವಚ್ಛತೆ ಮರೀಚಿಕೆಯಾಗಿದೆ.

ಸ್ವಚ್ಛತೆಗಿಲ್ಲ ಆದ್ಯತೆ: ಗುಡ್ಡದ ತಳಭಾಗದ ಕೆರೆ ಬಳಿಯ ಮಕ್ಕಳ ಉದ್ಯಾನವನ ಅನೈರ್ಮಲ್ಯದ ತಾಣವಾಗಿದೆ. ಎಲ್ಲೆಂದರಲ್ಲಿ ಸಂಗ್ರಹಿಸಿದ ತ್ಯಾಜ್ಯ, ಗಿಡಗಳು ಅಡ್ಡಾ ದಿಡ್ಡಿ ಬೆಳೆದು ನಿಂತ ಪರಿಣಾಮ ಫುಟ್ಪಾತ್‌ ಪಕ್ಕದಲ್ಲಿ ಸಂಚರಿಸುವ ಸಾರ್ವಜನಿಕರ ಮುಖಕ್ಕೆ ಬಡಿಯುವಂತಾಗಿದೆ. ಉದ್ಯಾನವನದಲ್ಲಿ ವಿದ್ಯುತ್‌ ಸಂಪರ್ಕ ಇಲ್ಲ. ನೀರು ಸಂಗ್ರಹಾಗಾರವಿದ್ದರೂ ನಿರುಪಯುಕ್ತವಾಗಿದೆ.

ಇನ್ನೊಂದೆಡೆ ಹಸಿರು ಹುಲ್ಲಿನ ಹಾಸಿಗೆಯಾಗುವ ಬದಲು ಸಂಪೂರ್ಣ ಒಣಗಿದ ಭೂಮಿಯಾಗಿದೆ. ಕೆಲ ಭಾಗದಲ್ಲಿ ಪುಟ್ಪಾತ್‌ ನಿರ್ಮಾಣಕ್ಕೆಂದು ಇರಿಸಿದ ಕಲ್ಲುಗಳು ಅದೇ ಸ್ಥಳದಲ್ಲಿವೆ. ಮಕ್ಕಳ ಆಟೋಟಕ್ಕೆ ನಿರ್ಮಿಸಿರುವ ಉಪಕರಣಗಳನ್ನು ಪುರುಷ, ಮಹಿಳೆಯರು ಉಪಯೋಗಿಸುತ್ತಿರುವುದು ಉದ್ಯಾನವನ ನಿರ್ವಹಣೆ ಲೋಪಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಕಣ್ಮರೆಯಾದ ಹಲವು ಪ್ರಭೇದ ಸಸ್ಯವರ್ಗ: ಉದ್ಯಾನವನದಲ್ಲಿ ಹಲವಾರು ಸಸ್ಯವರ್ಗ ವಿವಿಧ ಅಲಂಕಾರಗಳಿಂದ ನಿರ್ಮಿಸಲಾಗಿದೆ. ವರ್ಷ ಕಳೆದಂತೆ ಅವುಗಳೆಲ್ಲವೂ ಮಾಯವಾಗುವ ಹಂತಕ್ಕೆ ತಲುಪಿದೆ. ಸಮಯಕ್ಕೆ ಸರಿಯಾಗಿ ನೀರು ಹಾಕಿ ಬೆಳೆಸದ ಹಿನ್ನೆಲೆಯಲ್ಲಿ ಸಸ್ಯಗಳು ಒಣಗಿವೆ.

ಶಾಸಕರೇ ಇತ್ತ ಕಣ್ಣು ಹಾಯಿಸಿ: 2012ರಲ್ಲಿ 4.40 ಲಕ್ಷ ರೂ. ವೆಚ್ಚದಲ್ಲಿ 851 ಚದರ ಜಾಗೆಯಲ್ಲಿ ಅಂದಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿ, ಪ್ರಸ್ತುತ ಶಾಸಕರಾದ ಕಳಕಪ್ಪ ಬಂಡಿ ಅವರ ಅಧಿಕಾರವಧಿಯಲ್ಲಿ ಸುಂದರವಾಗಿ ಅವತಾರವೆತ್ತಿದ್ದ ಉದ್ಯಾನವನ ಇಂದು ಹಾಳು ಕೊಂಪೆಯಂತಾಗಿ ನಿಂತಿದೆ. ಅಂದು ನಿರ್ಮಿಸಿದ ಉದ್ಯಾನವನ ಇದೀಗ ಪಟ್ಟಣದ ಜನತೆಯ ನೆಚ್ಚಿನ ಸ್ಥಳವಾಗಿದೆ. ಹೀಗಾಗಿ ಶಾಸಕರು ಇತ್ತ ಗಮನ ಹರಿಸಿ ಉದ್ಯಾನವನ ಪುನಶ್ಚೇತನಕ್ಕೆ ಕಾಳಜಿ ವಹಿಸಬೇಕಿದೆ.

•ಡಿ.ಜಿ ಮೋಮಿನ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.