ಹೊರ ರೋಗಿಗಳೊಂದಿಗೆ ಸೇರಿ ವೈದ್ಯೆ ಪ್ರತಿಭಟನೆ!

ವೈದ್ಯರ ಅನುಪಸ್ಥಿತಿಗೆ ರೋಗಿಗಳು ಹೈರಾಣು ಆಸ್ಪತ್ರೆ ಅವ್ಯವಸ್ಥೆಗೆ ರೋಸಿ ಹೋದ ವೈದ್ಯೆ

Team Udayavani, May 26, 2019, 11:30 AM IST

gadaga-tdy-4..

ರೋಣ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಹೊರ ರೋಗಿಗಳೊಂದಿಗೆ ವೈದ್ಯೆ ಎನ್‌.ಎನ್‌. ನಾಶಿಪುಡಿ ಪ್ರತಿಭಟನೆ ನಡೆಸಿದರು.

ರೋಣ: ಸೂಕ್ತ ಸಮಯದಲ್ಲಿ ವ್ಯವಸ್ಥಿತ ಚಿಕಿತ್ಸೆ ದೊರೆಯದ ಸಂದರ್ಭದಲ್ಲಿ ವೈದ್ಯರ ವಿರುದ್ಧ ರೋಗಿಗಳು ಪ್ರತಿಭಟನೆ ಮಾಡಿದ್ದನ್ನು ನೋಡಿದ್ದೇವೆ. ಆದರೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸಿದ ಎಲ್ಲ ರೋಗಿಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ರೋಗಿಗಳೊಂದಿಗೆ ವೈದ್ಯೆ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ರೋಣ ಪಟ್ಟಣದ ಭೀಮಸೇನ ಜೋಶಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಪಟ್ಟಣದ ಭೀಮಸೇನ ಜೋಶಿ ಸರ್ಕಾರಿ ಆಸ್ಪತ್ರೆಗೆ ಪ್ರತಿನಿತ್ಯ ನೂರಾರು ರೋಗಿಗಳು ಚಿಕಿತ್ಸೆ ಪಡೆಯಲು ವಿವಿಧ ಗ್ರಾಮಗಳಿಂದ ಆಗಮಿಸುತ್ತಾರೆ. ಚಿಕಿತ್ಸೆ ಪಡೆಯಲು ಬರುವ ರೋಗಿಗಳಿಗೆ ಪ್ರತಿನಿತ್ಯ ನಾಲ್ಕು ವೈದ್ಯರು ಬೇಕಾಗುತ್ತದೆ. ಆದರೆ ಶನಿವಾರ ಎನ್‌.ಎನ್‌. ನಾಶಿಪುಡಿಯವರನ್ನು ಹೊರತುಪಡಿಸಿ ಬೇರೆ ಯಾವುದೇ ವೈದ್ಯರಿರಲಿಲ್ಲ. ಇದರಿಂದ ಆಸ್ಪತ್ರೆ ಆಡಳಿತಾಧಿಕಾರಿ ವಿರುದ್ಧ ಆಕ್ರೋಶಗೊಂಡ ಹೊರ ರೋಗಿಗಳು ಹಾಗೂ ವೈದ್ಯೆ ಎನ್‌.ಎನ್‌.ನಾಶಿಪುಡಿ ಪ್ರತಿಭಟನೆ ನಡೆಸಿದರು.

ಡಾ| ಎನ್‌.ಎನ್‌. ನಾಶಿಪುಡಿ ಅಸಹಾಯಕತೆ ತೋರ್ಪಡಿಸಿ, ಶನಿವಾರ ನಾನು ಆಸ್ಪತ್ರೆಗೆ ಆಗಮಿಸಿದಾಗ ನೂರಾರು ರೋಗಿಗಳು ಸರದಿಯಲ್ಲಿ ಕಾಯುತ್ತಿದ್ದರು. ನನ್ನ ಪ್ರಯತ್ನ ಮೀರಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದೆ. ರೋಗಿಗಳ ಸಂಖ್ಯೆ ಹೆಚ್ಚುತ್ತ ಹೋಯಿತು. ಒಬ್ಬಳಿಗೆ ನಿರ್ವಹಣೆ ಮಾಡಲು ಅಸಾಧ್ಯವಾದಾಗ ಗೈರಾಗಿದ್ದ ವೈದ್ಯರಿಗೆ ದೂರವಾಣಿ ಕರೆ ಮಾಡಿ ಆಗಮಿಸುವಂತೆ ಕೇಳಿಕೊಂಡರೂ ಸ್ಪಂದಿಸದಿರುವುದರಿಂದ ರೋಗಿ ಗಳೊಂದಿಗೆ ಸೇರಿ ಪ್ರತಿಭಟನೆ ನಡೆಸಬೇಕಾಯಿತು ಎಂದರು.

ಈ ಸಂದರ್ಭದಲ್ಲಿ ಆಸ್ಪತ್ರೆ ಹೊರ ರೋಗಿಗಳಾದ ಶೈನಾಜಬೀ ಮಾಟಲದಿನ್ನಿ, ಗೀರಿಜವ್ವ ನವಲಗುಂದ, ಗೌರಮ್ಮಾ ತಳ್ಳಿಕೇರಿ, ಸುಕನ್ಯಾ ಕೊಡಿಕೊಪ್ಪ, ಶೋಭಾ ಗಡ್ಡಿ, ನೂರಜಾನ್‌ ಬಳ್ಳಾರಿ, ಸುನಂದಾ ನಿಲಗುಂದ, ಸವಿತಾ ಹೂಗಾರ, ಸುವರ್ಣಾ ಇಟಗಿ, ಸುಧಾ ಕಮ್ಮಾರ, ಲಲಿತಾ ಹೊಸಮನಿ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.