![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 26, 2019, 11:30 AM IST
ರೋಣ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಹೊರ ರೋಗಿಗಳೊಂದಿಗೆ ವೈದ್ಯೆ ಎನ್.ಎನ್. ನಾಶಿಪುಡಿ ಪ್ರತಿಭಟನೆ ನಡೆಸಿದರು.
ರೋಣ: ಸೂಕ್ತ ಸಮಯದಲ್ಲಿ ವ್ಯವಸ್ಥಿತ ಚಿಕಿತ್ಸೆ ದೊರೆಯದ ಸಂದರ್ಭದಲ್ಲಿ ವೈದ್ಯರ ವಿರುದ್ಧ ರೋಗಿಗಳು ಪ್ರತಿಭಟನೆ ಮಾಡಿದ್ದನ್ನು ನೋಡಿದ್ದೇವೆ. ಆದರೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸಿದ ಎಲ್ಲ ರೋಗಿಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ರೋಗಿಗಳೊಂದಿಗೆ ವೈದ್ಯೆ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ರೋಣ ಪಟ್ಟಣದ ಭೀಮಸೇನ ಜೋಶಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಪಟ್ಟಣದ ಭೀಮಸೇನ ಜೋಶಿ ಸರ್ಕಾರಿ ಆಸ್ಪತ್ರೆಗೆ ಪ್ರತಿನಿತ್ಯ ನೂರಾರು ರೋಗಿಗಳು ಚಿಕಿತ್ಸೆ ಪಡೆಯಲು ವಿವಿಧ ಗ್ರಾಮಗಳಿಂದ ಆಗಮಿಸುತ್ತಾರೆ. ಚಿಕಿತ್ಸೆ ಪಡೆಯಲು ಬರುವ ರೋಗಿಗಳಿಗೆ ಪ್ರತಿನಿತ್ಯ ನಾಲ್ಕು ವೈದ್ಯರು ಬೇಕಾಗುತ್ತದೆ. ಆದರೆ ಶನಿವಾರ ಎನ್.ಎನ್. ನಾಶಿಪುಡಿಯವರನ್ನು ಹೊರತುಪಡಿಸಿ ಬೇರೆ ಯಾವುದೇ ವೈದ್ಯರಿರಲಿಲ್ಲ. ಇದರಿಂದ ಆಸ್ಪತ್ರೆ ಆಡಳಿತಾಧಿಕಾರಿ ವಿರುದ್ಧ ಆಕ್ರೋಶಗೊಂಡ ಹೊರ ರೋಗಿಗಳು ಹಾಗೂ ವೈದ್ಯೆ ಎನ್.ಎನ್.ನಾಶಿಪುಡಿ ಪ್ರತಿಭಟನೆ ನಡೆಸಿದರು.
ಡಾ| ಎನ್.ಎನ್. ನಾಶಿಪುಡಿ ಅಸಹಾಯಕತೆ ತೋರ್ಪಡಿಸಿ, ಶನಿವಾರ ನಾನು ಆಸ್ಪತ್ರೆಗೆ ಆಗಮಿಸಿದಾಗ ನೂರಾರು ರೋಗಿಗಳು ಸರದಿಯಲ್ಲಿ ಕಾಯುತ್ತಿದ್ದರು. ನನ್ನ ಪ್ರಯತ್ನ ಮೀರಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದೆ. ರೋಗಿಗಳ ಸಂಖ್ಯೆ ಹೆಚ್ಚುತ್ತ ಹೋಯಿತು. ಒಬ್ಬಳಿಗೆ ನಿರ್ವಹಣೆ ಮಾಡಲು ಅಸಾಧ್ಯವಾದಾಗ ಗೈರಾಗಿದ್ದ ವೈದ್ಯರಿಗೆ ದೂರವಾಣಿ ಕರೆ ಮಾಡಿ ಆಗಮಿಸುವಂತೆ ಕೇಳಿಕೊಂಡರೂ ಸ್ಪಂದಿಸದಿರುವುದರಿಂದ ರೋಗಿ ಗಳೊಂದಿಗೆ ಸೇರಿ ಪ್ರತಿಭಟನೆ ನಡೆಸಬೇಕಾಯಿತು ಎಂದರು.
ಈ ಸಂದರ್ಭದಲ್ಲಿ ಆಸ್ಪತ್ರೆ ಹೊರ ರೋಗಿಗಳಾದ ಶೈನಾಜಬೀ ಮಾಟಲದಿನ್ನಿ, ಗೀರಿಜವ್ವ ನವಲಗುಂದ, ಗೌರಮ್ಮಾ ತಳ್ಳಿಕೇರಿ, ಸುಕನ್ಯಾ ಕೊಡಿಕೊಪ್ಪ, ಶೋಭಾ ಗಡ್ಡಿ, ನೂರಜಾನ್ ಬಳ್ಳಾರಿ, ಸುನಂದಾ ನಿಲಗುಂದ, ಸವಿತಾ ಹೂಗಾರ, ಸುವರ್ಣಾ ಇಟಗಿ, ಸುಧಾ ಕಮ್ಮಾರ, ಲಲಿತಾ ಹೊಸಮನಿ ಸೇರಿದಂತೆ ಮತ್ತಿತರರು ಇದ್ದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.