ಪರಭಾಷೆ ದಾಳಿ ಸಮರ್ಥವಾಗಿ ಹಿಮ್ಮೆಟಿಸಿ: ಪಾಟೀಲ

1956, ನ. 1ರಂದು ರಾಜ್ಯದ ಏಕೀಕರಣವಾಗಿ ರಾಜ್ಯೋತ್ಸವ ಆಚರಿಸುವಂತಾಯಿತು.

Team Udayavani, Nov 2, 2021, 7:45 PM IST

ಪರಭಾಷೆ ದಾಳಿ ಸಮರ್ಥವಾಗಿ ಹಿಮ್ಮೆಟಿಸಿ: ಪಾಟೀಲ

ಗದಗ: ಆಧುನಿಕ ಶಿಕ್ಷಣದಿಂದ ಕನ್ನಡ ಕಲಿಕೆಯ ಬಗ್ಗೆ ಮಕ್ಕಳಲ್ಲಿ ಕನ್ನಡದ ಬಗ್ಗೆ ಆಸಕ್ತಿ ಹೆಚ್ಚಿಸಲು ಪಾಲಕರು ಮತ್ತು ಶಿಕ್ಷಕರು ಒಟ್ಟಾಗಿ ಪ್ರಯತ್ನಿಸಬೇಕು. ಕರ್ನಾಟಕ ರಾಜ್ಯೋತ್ಸವ ಆಚರಣೆ ಕೇವಲ ನ. 1ಕ್ಕೆ ಮಾತ್ರ ಸೀಮಿತವಾಗದೇ, ನಿತ್ಯೋತ್ಸವವಾಗಬೇ ಕು ಎಂದು ಲೋಕೊಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ ಅಭಿಪ್ರಾಯಪಟ್ಟರು.

ನಗರದ ಕೆ.ಎಚ್‌. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ಪ್ರಯುಕ್ತ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕನ್ನಡ ಭಾಷೆ ಸಮೃದ್ಧವಾಗಿದೆ ಎಂದು ಕೈ ಕಟ್ಟಿ ಕುಳಿತುಕೊಳ್ಳಬಾರದು. ಭಾಷಾಭಿಮಾನದ
ಮೂಲಕ ಅನ್ಯ ಭಾಷೆಗಳ ದಾಳಿಯನ್ನು ಸಮರ್ಥವಾಗಿ ಹಿಮ್ಮೆಟ್ಟಿಸಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕನ್ನಡಕ್ಕಾಗಿ ನಾವು ಮಾತಾಡ್‌ ಮಾತಾಡ ಕನ್ನಡ ಎಂಬ ವಿಶೇಷ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಕನ್ನಡ ಉಳಿಸಿ ಬೆಳೆಸಲು ಹೊಸ ಸಂಚಲನ ಮೂಡಿಸುತ್ತಿರುವುದು ಅಭಿನಂದನಾರ್ಹ. ಕುವೆಂಪು ಅವರು ಹೇಳಿದಂತೆ ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸುವ ಸಂಕಲ್ಪ ಮಾಡಬೇಕೆಂದು ಹೇಳಿದರು.

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎಂದು ಗದುಗಿನ ಹುಯಿಲಗೋಳ ನಾರಾಯಣರಾವ್‌ ಕನಸು ಕಂಡಂತೆ 1956, ನ. 1ರಂದು ರಾಜ್ಯದ ಏಕೀಕರಣವಾಗಿ ರಾಜ್ಯೋತ್ಸವ ಆಚರಿಸುವಂತಾಯಿತು.

ನಾಡಿನ ಕಲೆ, ಸಾಹಿತ್ಯ, ಸಂಗೀತ ಕ್ಷೇತ್ರಗಳಿಗೆ ಜಿಲ್ಲೆಯ ಕೊಡುಗೆ ಅಪಾರ. ಗದುಗಿನ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಎತ್ತರಿಸಿದ ಹುಯಿಲಗೋಳ್‌ ನಾರಾಯಣರಾವ್‌, ಡಾ| ಎಂ.ಎಸ್‌. ಸುಂಖಾಪುರ, ಪ್ರೊ| ಕೀರ್ತಿನಾಥ ಕುರ್ತಕೊಟಿ, ಡಾ| ಚನ್ನವೀರ ಕಣವಿ, ಡಾ| ಕೆ.ಎಚ್‌. ಕುಲಕರ್ಣಿ, ಮಾಧವ  ಕುಲಕರ್ಣಿ, ಡಾ| ಎಚ್‌.ಎನ್‌. ಹೂಗಾರ, ಭಾರತ ರತ್ನ ಭೀಮಸೇನ ಜೋಶಿ, ಸಂಗೀತ  ದಿಗ್ಗಜ ಪಂಚಾಕ್ಷರಿ ಗವಾಯಿಗಳು, ಡಾ| ಪುಟ್ಟರಾಜ ಗವಾಯಿಗಳು, ಕ್ರಿಕೆಟಿಗ ಸುನೀಲ ಜೋಶಿ ಸೇರಿದಂತೆ ಅನೇಕ ಸಾಧಕರು ಗದುಗಿನ ಹೆಮ್ಮೆ. ಸಂಘ ಸಂಸ್ಥೆಗಳ ವಿಭಾಗದಲ್ಲಿ ವೀರೇಶ್ವರ ಪುಣ್ಯಾಶ್ರಮದ ಅಂಧ ಮಕ್ಕಳ ಶಾಲೆಗೆ ಸ್ವಾತಂತ್ರೊತ್ಸವದ ಅಮೃತ ಮಹೋತ್ಸವದ ಅಂಗವಾಗಿ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ಸಾವಿತ್ರಿ ಗೌಡ್ರ ಅವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಬಂದಿದ್ದು ಅಭಿನಂದನಾರ್ಹ ಎಂದರು. ಕೃಷಿ
ಸಮ್ಮಾನ ನಿಧಿ  ಯೋಜನೆಯಡಿ ಜಿಲ್ಲೆಯ 1,31,047 ರೈತರ ಖಾತೆಗಳಿಗೆ ಅಂದಾಜು 53 ಕೋಟಿ ರೂ. ಸಂದಾಯ ಮಾಡಲಾಗಿದೆ. ಬೆಳೆ ವಿಮೆಗೆ ನೋಂದಾಯಿಸಿದ 52,400 ರೈತರಿಗೆ 97 ಕೋಟಿ ರೂ. ವಿಮೆ ಮಂಜೂರಾಗಿದೆ.

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಅಮೃತ ಗ್ರಾಪಂ ಯೋಜನೆಯಡಿ ಜಿಲ್ಲೆಯ 14 ಗ್ರಾಪಂಗಳನ್ನು ಆಯ್ಕೆ ಮಾಡಲಾಗಿದೆ. ಲೋಕೊಪಯೋಗಿ ಇಲಾಖೆಯಿಂದ 21-22ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 96 ಕಾಮಗಾರಿಗಳಿಗೆ 11,517 ಲಕ್ಷ ಅಂದಾಜು ಮೊತ್ತದ ಕಾಮಗಾರಿಗಳು ಮಂಜೂರಾಗಿವೆ. ಅದರಲ್ಲಿ 10 ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿಗಳು ಭರದಿಂದ ಸಾಗಿವೆ ಎಂದು ಸಚಿವ ಸಿ.ಸಿ. ಪಾಟೀಲ ವಿವರಿಸಿದರು.

ಇದೇ ವಿವಿಧ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ಮತ್ತು ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಶಾಸಕ ಎಚ್‌. ಕೆ.ಪಾಟೀಲ, ವಿಪ ಸದಸ್ಯ ಎಸ್‌.ವಿ. ಸಂಕನೂರ, ಸಂಗಮೇಶ ದುಂದೂರ ಇತರರಿದ್ದರು.

ಮೆರವಣಿಗೆ
ಇದಕ್ಕೂ ಮುನ್ನ ಬೆಳಗ್ಗೆ 8ಕ್ಕೆ ಇಲ್ಲಿನ ನಗರಸಭೆ ಪಪೂ ಕಾಲೇಜು ಆವರಣದಲ್ಲಿ ಕನ್ನಡಾಂಬೆ ಪ್ರತಿಮೆಗೆ ಸಚಿವರಾದ ಸಿ.ಸಿ. ಪಾಟೀಲ ಅವರು ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು. ಇಲ್ಲಿನ ಗಾಂಧಿ  ಸರ್ಕಲ್‌, ರೋಟರಿ ಸರ್ಕಲ್‌,
ಬಸವೇಶ್ವರ ಶಾಲೆ, ವೆಂಕಟೇಶ ಟಾಕೀಸ್‌ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ತಾಯಿ ಕನ್ನಡಾಂಬೆ ಪ್ರತಿಮೆ ಮೆರವಣಿಗೆ ನಡೆಯಿತು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.