ಲಕ್ಷ್ಮೇಶ್ವರ: ಬಿಜೆಪಿಗೆ ಪ್ರತಿಷ್ಠೆ – ಕಾಂಗ್ರೆಸ್‌ಗೆ ಅಸ್ತಿತ್ವ ಪ್ರಶ್ನೆ


Team Udayavani, Oct 10, 2020, 5:17 PM IST

ಲಕ್ಷ್ಮೇಶ್ವರ: ಬಿಜೆಪಿಗೆ ಪ್ರತಿಷ್ಠೆ – ಕಾಂಗ್ರೆಸ್‌ಗೆ ಅಸ್ತಿತ್ವ ಪ್ರಶ್ನೆ

ಲಕ್ಷ್ಮೇಶ್ವರ: ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಪಟ್ಟಿ ಬಿಡುಗಡೆ ಆಗುತ್ತಿದ್ದಂತೇ ಅಧಿಕಾರದ
ಚುಕ್ಕಾಣಿಗಾಗಿ ರಾಜಕೀಯ ಚಟುವಟಿಕೆ ಗರಿಗೆದರಿವೆ. ಇಲ್ಲಿನ ಪುರಸಭೆಗೆ 2018ರ ಚುನಾವಣೆ ಫಲಿತಾಂಶ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಒಟ್ಟು 23 ಸದಸ್ಯರ ಬಲ ಹೊಂದಿರುವ ಪುರಸಭೆಗೆ 9-ಕಾಂಗ್ರೆಸ್‌, 7-ಬಿಜೆಪಿ, 2-ಜೆಡಿಎಸ್‌ ಮತ್ತು 5 ಪಕ್ಷೇತರ ಸದಸ್ಯರು ಆಯ್ಕೆಯಾಗಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿಗೆ ಪ್ರತಿಷ್ಠೆಯಾದರೆ,
ಕಾಂಗ್ರೆಸ್‌ಗೆ ಅಸ್ತಿತ್ವದ ಪ್ರಶ್ನೆಯಾಗಿದೆ. ಇಬ್ಬರಿಗೂ ಜೆಡಿಎಸ್‌ ಮತ್ತು ಪಕ್ಷೇತರರ ಬೆಂಬಲ ಅಗತ್ಯವಾಗಿದೆ.

ಕಾಂಗ್ರೆಸ್‌ ಬಲಾಬಲ: ಎರಡು ವರ್ಷದ ಹಿಂದೆ ಫಲಿತಾಂಶ ಪ್ರಕಟವಾದ ವೇಳೆ ಸಮ್ಮಿಶ್ರ ಸರ್ಕಾರ ಇದ್ದರಿಂದ ಇಬ್ಬರು ಜೆಡಿಎಸ್‌ ಸದಸ್ಯರು ಮತ್ತು 2 ಪಕ್ಷೇತರ ಸದಸ್ಯರ ಬಲದಿಂದ ಕಾಂಗ್ರೆಸ್‌ ಪಕ್ಷ 13 ಸ್ಥಾನಗಳಿಂದ ಬಹುಮತ ಸ್ಪಷ್ಟಪಡಿಸಲು ಸಿದ್ಧವಾಗಿತ್ತು. ಈಗಲೂ ಜೆಡಿಎಸ್‌ ಮತ್ತು ಪಕ್ಷೇತರರ ನಿಲುವು ಬದಲಾಗದಿದ್ದರೆ ಮಾತ್ರ ಕಾಂಗ್ರೆಸ್‌ ಆಸೆ ಜೀವಂತ. ಅಧ್ಯಕ್ಷ ಸ್ಥಾನಕ್ಕೆ ಜಯಕ್ಕ
ಕಳ್ಳಿ, ಜಯವ್ವ ಅಂದಲಗಿ ಹೆಸರು ಕೇಳಿ ಬರುತ್ತಿವೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ನಕಲಿ ಛಾಪಾ ಕಾಗದ ದಂಧೆ: ನಾಲ್ವರ ಬಂಧನ

ಬಿಜೆಪಿಗೇನು ಬಲ?: ರಾಜ್ಯ, ಕೇಂದ್ರ, ಜಿಲ್ಲೆ, ತಾಲೂಕಿನಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಬಹುಮತ ಇಲ್ಲದಿದ್ದರೂ ಪಕ್ಷೇತರ, ಜೆಡಿಎಸ್‌ ಸದಸ್ಯರ ಬೆಂಬಲ ಪಡೆದು ಶತಾಯಗತಾಯ ಅಧಿಕಾರದ ಚುಕ್ಕಾಣಿ ಹಿಡಿಯಲೇ ಬೇಕು ಎಂದು ತಂತ್ರ ರೂಪಿಸುತ್ತಿದೆ. ಬಿಜೆಪಿ ಏಳು ಸದಸ್ಯರ ಬಳಗಕ್ಕೆ ಇಬ್ಬರು ಪಕ್ಷೇತರರ ಬೆಂಬಲವಿದೆ. ತಮ್ಮ ಬೆಂಬಲ ಯಾರಿಗೆ ಎಂಬುದನ್ನು ಸ್ಪಷ್ಟಪಡಿಸದ
ಓರ್ವ ಪಕ್ಷೇತರ ಸದಸ್ಯ ಮತ್ತು ಈಗ ಸಮ್ಮಿಶ್ರ ಸರ್ಕಾರ ಇಲ್ಲದಿದ್ದರಿಂದ ಇಬ್ಬರು ಜೆಡಿಎಸ್‌ ಸದಸ್ಯರನ್ನು ಸೆಳೆಯುವ ತಂತ್ರ ನಡೆಸಿದ್ದಾರೆ. ಅಲ್ಲದೇ ಸಂಸದ, ಶಾಸಕ ಬೆಂಬಲದಿಂದ ಅಧಿಕಾರದ ಚುಕ್ಕಾಣಿ ಹಿಡಿಯುವ ಆತ್ಮ ವಿಶ್ವಾಸ ಬಿಜೆಪಿಯದ್ದಾಗಿದೆ.
ಆದರೆ ಭಿನ್ನಾಭಿಪ್ರಾಯ ಬಿಟ್ಟು ಪಕ್ಷದ ತೀರ್ಮಾನಕ್ಕೆ ಎಲ್ಲ ಸದಸ್ಯರು ಬದ್ಧರಾಗಿರಬೇಕಾಗುತ್ತದೆ. ಬಿಜೆಪಿಯಲ್ಲಿ 7 ಜನ ಮಹಿಳಾ ಸದಸ್ಯರಿದ್ದು, ಪೂರ್ಣಿಮಾ ಪಾಟೀಲ, ಅಶ್ವಿ‌ನಿ ಅಂಕಲಕೋಟಿ ಹೆಸರುಗಳು ಮುಂಚೂಣಿಯಲ್ಲಿವೆ.

ಜೆಡಿಎಸ್‌ ನಡೆ ನಿಗೂಢ: ಓರ್ವ ಪಕ್ಷೇತರ ಮತ್ತು ಇಬ್ಬರು ಜೆಡಿಎಸ್‌ ಸದಸ್ಯರ ನಡೆ ನಿಗೂಢವಾಗಿದೆ. ಆದರೆ ನಡೆಯುತ್ತಿರುವ ಬೆಳವಣಿಗೆ ಮತ್ತು ಚುನಾವಣೆ ಪ್ರಕ್ರಿಯೆಯ ಕೊನೆ ಘಳಿಗೆಯಲ್ಲಿ ಜೆಡಿಎಸ್‌ ಮತ್ತು ಪಕ್ಷೇತರರು ಕೈಗೆ ಜೈ ಎನ್ನುತ್ತಾರೋ?
ಕಮಲ ಅರಳಿಸುತ್ತಾರೋ ಎಂಬ ಕುತೂಹಲದ ಪ್ರಶ್ನೆಯ ಉತ್ತರಕ್ಕಾಗಿ ಕಾಯಬೇಕಿದೆ.

ಇದನ್ನೂ ಓದಿ:ಮೊಳಕಾಲ್ಮೂರು: ಸಿಡಿಲು ಬಡಿದು‌ ಕುರಿಗಾಯಿ ಸಾವು

ಹೊಂದಾಣಿಕೆ ರಾಜಕಾರಣವಾದರೂ ಅಚ್ಚರಿಯಿಲ್ಲ: ಆದರೆ ಎಲ್ಲ ಲೆಕ್ಕಾಚಾರ, ರಾಜ್ಯದ ರಾಜಕಾರಣದ ಪರಿಸ್ಥಿತಿ ಮೀರಿ
ಕಳೆದ ಅವಧಿಯಂತೆ ಪುರಸಭೆಯಲ್ಲಿ ರಾಜಕೀಯ ಕಿತ್ತಾಟ ಬೇಡ, ಪಟ್ಟಣದ ಅಭಿವೃದ್ಧಿ ಮುಖ್ಯ ಎಂಬ ತೀರ್ಮಾನಕ್ಕೆ
ಮೂರೂ ಪಕ್ಷದ ನಾಯಕರು, ಮುಖಂಡರು ಬಂದರೆ ಈ ಹಿಂದಿನಂತೆ (ಸಮಬಾಳು – ಸಮಪಾಲು) ಲಕ್ಷ್ಮೇಶ್ವರ ಪುರಸಭೆಯಲ್ಲಿ ಹೊಂದಾಣಿಕೆ ಮೂಲಕ ಆಡಳಿತ ಮಂಡಳಿ ರಚನೆಯಾದರೂ ಅಚ್ಚರಿಪಡಬೇಕಿಲ್ಲ. ಈ ಹಿಂದೆ ಎರಡೂ ಪಕ್ಷಕ್ಕೂ ಅಧಿಕಾರ
ನಡೆಸುವ ಅವಕಾಶವಿದ್ದಾಗಲೂ ಸ್ಥಳೀಯ ಪ್ರಮುಖ ಪಕ್ಷದ ಮುಖಂಡರು, ಹಿರಿಯರು, ಸದಸ್ಯರು ಲಕ್ಷ್ಮೇಶ್ವರದ ಹಿತಾಭಿವೃದ್ಧಿ ಸಮಿತಿ ರಚಿಸಿ ಹೊಂದಾಣಿಕೆಯ ರಾಜಕಾರಣಕ್ಕೆ ಅಂಕಿತ ಹಾಕಿದ್ದುಂಟು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

Gadag; ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

Gadag; ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Gadag; ಹಬ್ಬದ ಖರೀದಿಗೆಂದು ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Mundargi: Bike rider went to Kochi without overbridge; Protest by villagers

Mundargi: ನೀರಿನಲ್ಲಿ ಕೊಚ್ಚಿ ಹೋದ ಬೈಕ್; ಓರ್ವ ಸಾವು

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.