ಕ್ರಿಯಾಶೀಲ ಕುಬೇರಪ್ಪರನ್ನು ಗೆಲ್ಲಿಸಿ


Team Udayavani, Oct 23, 2020, 6:18 PM IST

gadaga-tdy-1

ಲಕ್ಷ್ಮೇಶ್ವರ: ಪಶ್ಚಿಮ ಪದವೀಧರ ಮತಕ್ಷೇತ್ರ ನನ್ನ ರಾಜಕೀಯದ ಮಹತ್ತರ ಮೈಲುಗಲ್ಲಾಗಿದೆ. ನಾಲ್ಕು ಅವಧಿಗೆ ಈ ಕ್ಷೇತ್ರವನ್ನು ಪ್ರತಿನಿಧಿಸಿರುವ ನನಗೆ ಕಾರ್ಯಕರ್ತರೆಲ್ಲರೂ ಸೇರಿ ಮತ್ತೆ ಈ ಕ್ಷೇತ್ರವನ್ನು ಗೆಲ್ಲಿಸಿಕೊಟ್ಟಲ್ಲಿ ಪಕ್ಷದ ಅಭ್ಯರ್ಥಿ ಕುಬೇರಪ್ಪನವರಿಗಿಂತ ಹೆಚ್ಚು ಖುಷಿ ಪಡುವ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತೇನೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎಚ್‌.ಕೆ.ಪಾಟೀಲ ಹೇಳಿದರು.

ಪಟ್ಟಣದ ಚನ್ನಮ್ಮನ ವನ ಕಲ್ಯಾಣ ಮಂಟಪದಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ| ಆರ್‌.ಎಂ.ಕುಬೇರಪ್ಪ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಪಕ್ಷ ರಾಜಕಾರಣವನ್ನು ಮೀರಿ ನಿಂತು ಕೆಲಸ

ಮಾಡುವ ಅವಕಾಶ ಈ ಕ್ಷೇತ್ರದಲ್ಲಿದೆ ಮತ್ತು ಅಂತಹ ವ್ಯಕ್ತಿತವ್ವನ್ನು ಕುಬೇರಪ್ಪ ಹೊಂದಿದ್ದಾರೆ. ಪದವೀಧರರ ನೋವು, ನಲಿವುಗಳಿಗೆ ಸ್ಪಂದಿಸುವ ಉತ್ತಮ ಆಡಳಿತಗಾರ ಕುಬೇರಪ್ಪನವರಿಗೆ ಪದವೀಧರರು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ತಮ್ಮ ಸೇವೆಗೆ ಅವಕಾಶ ಕಲ್ಪಿಸಿಕೊಡಬೇಕು. ಬಿಜೆಪಿ ಪಕ್ಷ ಚುನಾವಣೆ ಸಂದರ್ಭದಲ್ಲಿ ಇಲ್ಲಸಲ್ಲದ ಸುಳ್ಳು ಆಶ್ವಾಸನೆಗಳನ್ನು ನೀಡುತ್ತಾ ಎರಡು ಬಾರಿ ಕ್ಷೇತ್ರವನ್ನು ಕಾಂಗ್ರೆಸ್‌ನಿಂದ ಪಡೆದುಕೊಂಡಿದೆ. ಇದೀಗ ಪದವೀಧರ ಮತದಾರರಿಗೆ ಬಿಜೆಪಿ ಬಗ್ಗೆ ಇದ್ದ ನಂಬಿಕೆ ದೂರವಾಗಿದ್ದು, ಪದವೀಧರರಲ್ಲಿ ಮತ ಕೇಳುವ ನೈತಿಕ ಹಕ್ಕಿಲ್ಲ. ಈ ಬಾರಿ ಕಾಂಗ್ರೇಸ್‌ ಪಕ್ಷ ಈ ಕ್ಷೇತ್ರವನ್ನು ತನ್ನ ವಶಕ್ಕೆ ಪಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಶಾಸಕರಾದ ರಾಮಕೃಷ್ಣ ದೊಡ್ಡಮನಿ, ಬಿ.ಆರ್‌.ಯಾವಗಲ್‌, ಗದಗ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಿ.ಎಸ್‌.ಪಾಟೀಲ ಮಾತನಾಡಿ, ಬಿಜೆಪಿ ಪಕ್ಷದ ಕೇಂದ್ರ ಮತ್ತು ರಾಜ್ಯದಲ್ಲಿ ತುಘಲಕ್‌ ದರ್ಬಾರ್‌ ನಂತೆ ಆಡಳಿತ ನಡೆಸುತ್ತಿವೆ. ಕೃಷಿ, ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ಸುರ್ಗಿವಾಜ್ಞೆ ಮೂಲಕ ಜಾರಿಗೊಳಿಸಿರುವುದು ಜನ ವಿರೋಧಿಯಾಗಿದೆ. ಇದಕ್ಕೆ ತಕ್ಕ ಉತ್ತರ ನೀಡಲು ಚುನಾವಣೆಗಳು ಅಸ್ತ್ರವಾಗಿವೆ. ಈ ವೇಳೆ ಮತದಾರರಲ್ಲಿ ತೆರಳಿ ಮತಯಾಚಿಸುವ ಪ್ರಾಮಾಣಿಕ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದರು.

ಸಭೆಯಲ್ಲಿ ಜಿ.ಪಂ.ಅಧ್ಯಕ್ಷ ಸಿದ್ದು ಪಾಟೀಲ, ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ ಮಂದಾಲಿ, ಪಶ್ಚಿಮ ಪದವೀಧರ ಕ್ಷೇತ್ರದ ಉಸ್ತುವಾರಿ ಆನಂದಸ್ವಾಮಿ ಗಡ್ಡದೇವರಮಠ, ಎಸ್‌.ಪಿ.ಬಳಿಗಾರ, ರಾಜಣ್ಣ ಕುಂಬಿ ಎಂ.ಎಸ್‌.ದೊಡ್ಡಗೌಡ್ರ, ಹುಮಾಯೂನ್‌ ಮಾಗಡಿ, ಸುಜಾತಾ ದೊಡ್ಡಮನಿ, ನೀಲಮ್ಮ ಕೋಣನವರ, ಜಯಕ್ಕ ಕಳ್ಳಿ, ವಿರುಪಾಕ್ಷಪ್ಪ ಪಡಗೇರಿ, ಭಾಗ್ಯಶ್ರೀ ಬಾಬಣ್ಣ, ಸೋಮಣ್ಣ ಬೆಟಗೇರಿ, ವೀರೇಂದ್ರ ಪಾಟೀಲ, ಚನ್ನಪ್ಪ ಜಗಲಿ, ವೀರನಗೌಡ್ರ ನಾಡಗೌಡ್ರ, ರಾಜು ಪಾಟೀಲ, ರಾಮಣ್ಣ ಲಮಾಣಿ(ಶಿಗ್ಲಿ), ಬಸವರಾಜ ಬಾಳೇಶ್ವರಮಠ, ವಿಜಯ ಕರಡಿ, ವಿರೂಪಾಕ್ಷಪ್ಪ ನಂದೆಣ್ಣವರ, ಫಕ್ಕೀರೇಶ ಮ್ಯಾಟಣ್ಣವರ, ಬಸವರಾಜ ಕಡೆಮನಿ, ಸುರೇಶ ಬೀರಣ್ಣವರ, ಅಮರೇಶ ತೆಂಬದಮನಿ, ಸೇರಿದಂತೆ ಅನೇಕ ಮುಖಂಡರು ನೂರಾರು ಕಾರ್ಯಕರ್ತರು ಹಾಜರಿದ್ದರು.

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.