ಹಸಿ-ಒಣ ಕಸ ವಿಂಗಡಣೆಗೆ ಒತ್ತು


Team Udayavani, Oct 1, 2019, 2:07 PM IST

gadaga-tdy-1

ಗದಗ: “ಸ್ವಚ್ಛತಾ ಸೇವಾ’ ಅಭಿಯಾನ ಭಾಗವಾಗಿ ಅ. 2ರ ಒಳಗಾಗಿ ಪ್ಲಾಸ್ಟಿಕ್‌ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಡಳಿತ ಉದ್ದೇಶಿಸಿದೆ. ಅದಕ್ಕಿಂತ ಒಂದು ಹೆಜ್ಜೆ ಮುಂದಿಟ್ಟಿರುವ ಗದಗ-ಬೆಟಗೇರಿ ನಗರಸಭೆ ಆಡಳಿತ ಮನೆಯಿಂದಲೇ ಹಸಿ ಒಣ ಕಸ ವಿಂಗಡಿಸಲು ಮನೆಗೆರಡು ಕಸದು ಡಬ್ಬಿಗಳನ್ನು ವಿತರಿಸಲು ಮುಂದಾಗಿದೆ. ಅದಕ್ಕಾಗಿ ಸುಮಾರು 1.31 ಕೋಟಿ ರೂ. ವೆಚ್ಚದಲ್ಲಿ ಕಸದ ಡಬ್ಬಿಗಳ ಖರೀದಿಗೆ ಮುಂದಾಗಿದೆ.

ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ 35 ವಾರ್ಡ್ಗ ಳಲ್ಲಿ ಸುಮಾರು 42 ಸಾವಿರ ಕುಟುಂಬಗಳಿದ್ದು, ಪ್ರತಿದಿನ 50 ರಿಂದ 60 ಟನ್‌ ಕಸ ಸಂಗ್ರಹವಾಗುತ್ತದೆ. ಈ ಪೈಕಿ ಶೇ. 50ರಷ್ಟು ಹಸಿಕಸ, ಶೇ. 30ರಷ್ಟು ಒಣ ಕಸ ಹಾಗೂ ಶೇ. 20ರಷ್ಟು ಕಟ್ಟಡಗಳ ಅವಶೇಷಗಳನ್ನು ಒಳಗೊಂಡಿರುತ್ತವೆ. ಮನೆಗಳಲ್ಲಿ ಸಂಗ್ರಹವಾಗುವ ತ್ಯಾಜ್ಯ ವಿಲೇವಾರಿ ಮತ್ತು ಸಂಸ್ಕರಿಸುವುದು ನಗರಸಭೆಗೆ ಪ್ರತಿನಿತ್ಯ ಸವಾಲಿನ ಕೆಲಸ.

ಹಳೆ ಪದ್ಧತಿಗೆ ಗುಡ್‌ ಬೈ: ನಗರಸಭೆ ವ್ಯಾಪ್ತಿಯ 35 ವಾರ್ಡ್ ಗಳಲ್ಲಿ ಅಲ್ಲಲ್ಲಿ ಕಂಟೇನರ್‌ಗಳನ್ನು ಇಟ್ಟು ಕಸ ಸಂಗ್ರಹಿಸುವ ಹಳೇ ಪದ್ಧತಿಯನ್ನು ಕೈಬಿಟ್ಟು, ನಗರಸಭೆ ವಾಹನಗಳ ಮೂಲಕ ಮನೆಯಿಂದಲೇ ಕಸ ಸಂಗ್ರಹ ಪ್ರಕ್ರಿಯೆಗೆ ಚಾಲನೆ ನೀಡಿದೆ. ಈಗಾಗಲೇ ಅವಳಿ ನಗರದಲ್ಲಿ ಪ್ಲಾಸ್ಟಿಕ್‌ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ಪ್ಲಾಸ್ಟಿಕ್‌ ಬಳಕೆ ಮಾಡಬೇಡಿ, ಎಲ್ಲೆಂದರಲ್ಲಿ ಕಸ ಚೆಲ್ಲಬೇಡಿ, ನಗರಸಭೆ ಕಸದ ವಾಹನಗಳಿಗೆ ಕಸ ನೀಡಿ, ಸ್ವತ್ಛತೆ ಕಾಪಾಡಿ ಎಂದು ಸ್ಥಳೀಯ ಆಡಳಿತ ಧ್ವನಿವರ್ದಕಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

ಜೊತೆಗೆ ಕಸದ ಸಮಸ್ಯೆಯನ್ನು ಮೂಲದಲ್ಲೇ ಪರಿಹರಿಸಲು ಅವಳಿ ನಗರದಲ್ಲಿರುವ ಎಲ್ಲ ಮನೆಗಳಿಗೆ ತಲಾ ಎರಡು ಪ್ಲಾಸ್ಟಿಕ್‌ ಕಸದ ಡಬ್ಬಿಗಳನ್ನು ನೀಡಲು ಉದ್ದೇಶಿಸಿದೆ. ಅದಕ್ಕಾಗಿ ಗದಗ-ಬೆಟಗೇರಿ ನಗರಸಭೆಯಿಂದ 1.31 ಕೋಟಿ ರೂ. ಮೊತ್ತದಲ್ಲಿ 10 ಲೀಟರ್‌ ಸಾವರ್ಥ್ಯದ 82,486 ಪ್ಲಾಸ್ಟಿಕ್‌ ಕಸದ ಡಬ್ಬಿಗಳ ಖರೀದಿಗೆ ಟೆಂಡರ್‌ ಪ್ರಕ್ರಿಯೆ ಆರಂಭಿಸಿದೆ. ಡಬ್ಬಿಗಳನ್ನು ಪಡೆಯುವ ಸಾರ್ವಜನಿಕರು, ತಮ್ಮ ಮನೆಯಲ್ಲಿ ಉತ್ಪತ್ತಿಯಾಗುವ ಹಸಿ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕ ಡಬ್ಬಿಗಳಲ್ಲಿ ಸಂಗ್ರಹಿಸಬೇಕು. ಮರುದಿನ ಬೆಳಗ್ಗೆ ಮನೆ ಬಾಗಿಲಿಗೆ ಬರುವ ನಗರಸಭೆ ವಾಹನಗಳಿಗೆ ಅದನ್ನು ನೀಡಬೇಕು. ಇದರಿಂದ ವೇಸ್ಟ್‌ ಮ್ಯಾನೇಜ್‌ಮೆಂಟ್‌ ಸುಲಭವಾಗಲಿದೆ ಎನ್ನುತ್ತಾರೆ ನಗರಸಭೆ ಪರಿಸರ ವಿಭಾಗದ  ಅಧಿಕಾರಿಗಳು.

ಮನೆಯಿಂದಲೇ ಕಸ ವಿಭಜನೆಯಾಗುವುದರಿಂದ ಅಳಿದುಳಿದ ಆಹಾರ ಪದಾರ್ಥ, ತರಕಾರಿ ಮತ್ತಿತರೆ ಹಸಿ ಕಸ(ಕೊಳೆಯಬಹುದಾದ)ವನ್ನು ನೇರವಾಗಿ ನಗರಸಭೆಯ ಕಾಂಪೋಸ್ಟ್‌ ಗೊಬ್ಬರ ಯಾರ್ಡ್‌ಗೆ ಸಾಗಿಸಬಹುದು. ಇನ್ನುಳಿದಂತೆ ಒಣ ಕಸದಲ್ಲಿ ಸಂಗ್ರಹವಾಗುವ ಪ್ಲಾಸ್ಟಿಕ್‌ ಕವರ್‌, ಪ್ಲಾಸ್ಟಿ ಕ್‌ ಬಾಟಲ್‌ ಹಾಗೂ ರಬ್ಬರ್‌ ಚಪ್ಪಲ್‌, ಟೈ ಮತ್ತು ಟ್ಯೂಬ್‌, ಬಟ್ಟೆಯನ್ನು ಪ್ರತ್ಯೇಕವಾಗಿ ಸಾಗಾಣಿಕೆ ಮತ್ತು ವೈಜ್ಞಾನಿಕ ರೀತಿಯ ಸಂಸ್ಕರಣೆಗೆ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಗದಗ-ಬೆಟಗೇರಿ ಅವಳಿ ನಗರದ ಪ್ರತಿ ಮನೆಗೆ ಎರಡು ಕಸದ ಡಬ್ಬಿಗಳನ್ನು ನೀಡಲು ಉದ್ದೇಶಿಸಿದ್ದು, ಇನ್ನೂ 15- 20 ದಿನಗಳಲ್ಲಿ ಡಬ್ಬಿಗಳನ್ನು ಮನೆ ಮನೆಗೆ ಉಚಿತವಾಗಿ ತಲುಪಿಸಲಿದೆ ಎನ್ನಲಾಗಿದೆ.

 

ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.