![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 22, 2021, 11:00 PM IST
ವರದಿ : ಸಿದ್ಧಲಿಂಗಯ್ಯ ಮಣ್ಣೂರಮಠ
ನರಗುಂದ: ಅಧಿಕಾರ ಶಾಶ್ವತವಲ್ಲ. ಕಷ್ಟಪಟ್ಟು ಮೈಮುರಿದು ದುಡಿಯುವ ದುಡಿಮೆ ಜೀವನಕ್ಕೊಂದು ಆಧಾರವಾಗಿದೆ. ಇದು ಜೀವನಪೂರ್ತಿ ಬದುಕಿಗೆ ನೆರವಾಗುತ್ತದೆ ಎಂಬುದಕ್ಕೆ ಸಾಕ್ಷಿಯಾದ ಗ್ರಾಪಂ ಸದಸ್ಯರೊಬ್ಬರು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಾದರಿಯಾಗಿ ಗುರುತಿಸಿಕೊಂಡಿದ್ದಾರೆ.
ತಾಲೂಕಿನ ಕೊಣ್ಣೂರ ಗ್ರಾಮದ ಗ್ರಾಮ ಪಂಚಾಯತಿ ವ್ಯಾಪ್ತಿಯ 7ನೇ ವಾರ್ಡ್ನಿಂತ ನೂತನವಾಗಿ ಚುನಾಯಿತಗೊಂಡ ಸದಸ್ಯ ಗೂಳಪ್ಪ ಬಸಪ್ಪ ಹುಜರತ್ತಿ ಮಾದರಿ ಕಾರ್ಯದಲ್ಲಿ ಸೈ ಎನಿಸಿಕೊಂಡಿದ್ದಾರೆ. ಗ್ರಾಮೀಣ ಉದ್ಯೋಗ: ಗ್ರಾಮೀಣ ಭಾಗದಲ್ಲಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ರೈತಾಪಿ ಕುಟುಂಬಗಳು, ಕೂಲಿಕಾರರಿಗೆ ಆರ್ಥಿಕ ಭದ್ರತೆ ಒದಗಿಸಿದೆ. ಇಂತಹ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಸ್ವತಃ ಕೂಲಿಕಾರರೊಂದಿಗೆ ತಾವೂ ಗುದ್ದಲಿ, ಸಲಿಕೆಯೊಂದಿಗೆ ಖಾತ್ರಿ ಯೋಜನೆ ಕೆಲಸದಲ್ಲಿ ತೊಡಗಿಸಿಕೊಳ್ಳುವ ಮೂಲಕ ಗ್ರಾಪಂ ಸದಸ್ಯ ಗೂಳಪ್ಪ ಹುಜರತ್ತಿ ಸಹ ಕೆಲಸಗಾರರಿಗೆ ಮಾದರಿಯಾಗಿದ್ದಾರೆ.
ಇದು ಅವರ ವಾರ್ಡ್ನ ಜನರಿಗೆ ಪ್ರೇರಣೆಯಾಗಿದ್ದು, ಗ್ರಾಪಂ ಸದಸ್ಯರೊಂದಿಗೆ ಖಾತ್ರಿ ಯೋಜನೆಯಲ್ಲಿ ಕೆಲಸ ಕೈಗೊಂಡಿರುವುದು ಅವರಿಗೂ ಸ್ಫೂರ್ತಿದಾಯಕವಾಗಿದೆ. ತಮ್ಮ ವಾರ್ಡ್ ಜನರೊಂದಿಗೆ ಕಷ್ಟಪಟ್ಟು ದುಡಿಯುವ ಮೂಲಕ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾದ ಸದಸ್ಯ ಗೂಳಪ್ಪ ಅವರೊಂದಿಗೆ ಅವರ ಧರ್ಮಪತ್ನಿ ರೇಣುಕಾ ಕೈಜೋಡಿಸಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.