![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 12, 2020, 2:01 PM IST
ಸಾಂದರ್ಭಿಕ ಚಿತ್ರ
ರೋಣ: ತುಂಬಿದ ಬೆಳೆ ವಿಮೆ ಹಣ ಬಿಡುಗಡೆಯಾಗಿಲ್ಲ. ಈ ಕುರಿತು ಕಂದಾಯ ಇಲಾಖೆ, ಗ್ರಾಪಂ ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡುತ್ತಿಲ್ಲ. ಕೂಡಲೇ ಸಮರ್ಪಕ ಮಾಹಿತಿ ನೀಡಿ ಎಂದು ಆಗ್ರಹಿಸಿ ತಾಲೂಕಿನ ಮುಶಿಗೇರಿ ಗ್ರಾಮದ 100ಕ್ಕೂ ಹೆಚ್ಚು ರೈತರು ಮಂಗಳವಾರ ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಳೆದ 2017-18, 2018-19 ಮತ್ತು 2019-20 ಸಾಲಿನಲ್ಲಿ ಬೆಳೆ ಹಾನಿ ಕುರಿತು ತುಂಬಿದ ಬೆಳೆ ವಿಮೆ ಹಣ ತಾಲೂಕಿನ ಬಹುತೇಕ ಗ್ರಾಪಂ ವ್ಯಾಪ್ತಿಯ ಗ್ರಾಮಗಳ ರೈತರಿಗೆ ಬಿಡುಗಡೆಯಾಗಿದೆ. ಆದರೆ ಮುಶಿಗೇರಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಮಾತ್ರ ಬಿಡುಗಡೆಯಾಗಿಲ್ಲ. ಈ ಕುರಿತು ಗ್ರಾಪಂ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಗೆ ಕೇಳಿದರೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಬೆಳೆ ವಿಮೆ ಏಕೆ ಬಿಡುಗಡೆಯಾಗಿಲ್ಲ?. ಕೆಲ ರೈತರಿಗೆ ಬೆಳೆ ವಿಮೆ ಬಂದಿದೆ
ಎಂದು ಅಧಿಕಾರಿಗಳು ಹೇಳುತ್ತಾರೆ. ಆದರೆ ಮುಶಿಗೇರಿ ಗ್ರಾಮದ ಯಾರೊಬ್ಬ ರೈತರಿಗೂ ವಿಮೆ ಬಂದಿಲ್ಲ. ಈ ಕುರಿತು ಸಮರ್ಪಕ ಮಾಹಿತಿ ನಿಡಬೇಕು ಎಂದು ರೈತರು ಕೃಷಿ ಅಧಿಕಾರಿಗಳಿಗೆ ಒತ್ತಾಯಿಸಿದರು. ಸಹಾಯಕ ಕೃಷಿ ನಿರ್ದೇಶಕ ರವೀಂದ್ರಗೌಡ ಪಾಟೀಲ ಮಾತನಾಡಿ, ಮುಶಿಗೇರಿ ಗ್ರಾಪಂ ವ್ಯಾಪ್ತಿಯ ಸಾಕಷ್ಟು ರೈತರಿಗೆ ಕಳೆದ 2017-18 ಮತ್ತು 2018-19 ಸಾಲಿನಲ್ಲಿ ತುಂಬಿದ ಬೆಳೆ ವಿಮೆ ಬಿಡುಗಡೆಯಾಗಿದೆ. ಈ ಕುರಿತು ನಮ್ಮ ಇಲಾಖೆಯ ನಿಖರ ಮಾಹಿತಿ ಇದೆ. 2019-20ನೇ ಸಾಲಿನ ಬೆಳೆ ವಿಮೆ ಆಗಸ್ಟ್ ತಿಂಗಳಲ್ಲಿಯೇ ಬಿಡುಗಡೆಯಾಗುವ ಸಾಧ್ಯತೆಯಿದೆ. ಜೊತೆಗೆ 2020-21ನೇ ಸಾಲಿನ ಬೆಳೆ ವಿಮೆ ತುಂಬಲು ಅವಕಾಶವಿದ್ದು, ಪ್ರಯೋಜನ ಪಡೆಯಬೇಕು ಎಂದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.