ಗದಗ: ಬಿಸಿಲಿನ ಬೇಗೆಗೆ ಸ್ವಿಮ್ಮಿಂಗ್‌ ಫೂಲ್‌ಗೆ ಲಗ್ಗೆ


Team Udayavani, May 14, 2024, 2:50 PM IST

ಗದಗ: ಬಿಸಿಲಿನ ಬೇಗೆಗೆ ಸಿಮ್ಮಿಂಗ್‌ ಫೂಲ್‌ಗೆ ಲಗ್ಗೆ

ಉದಯವಾಣಿ ಸಮಾಚಾರ
ಗದಗ: ಸಾರ್ವಜನಿಕರು ಬಿಸಿಲಿನ ತಾಪದಿಂದ ಹೊರಬರಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಗದಗ-ಬೆಟಗೇರಿ ಅವಳಿ ನಗರದಲ್ಲಿ ನಿರ್ಮಾಣಗೊಂಡಿರುವ ನಾಲ್ಕು ಸ್ವಿಮ್ಮಿಂಗ್‌ ಪೂಲ್‌ಗ‌ಳಿಗೆ ಲಗ್ಗೆಯಿಟ್ಟಿದ್ದಾರೆ.

ಕಳೆದ ನಾಲ್ಕು ತಿಂಗಳ ಅವಧಿ ಯಲ್ಲಿ ಅಂದರೆ ಜನವರಿಯಿಂದ ಏಪ್ರಿಲ್‌ ಅಂತ್ಯದವರೆಗೆ 30 ಸಾವಿರಕ್ಕೂ ಅಧಿಕ ಜನರು ಸ್ವಿಮ್ಮಿಂಗ್‌ ಪೂಲ್‌ ಬಳಕೆ ಮಾಡಿಕೊಂಡಿದ್ದು, 14.62 ಲಕ್ಷ ರೂ. ಕಲೆಕ್ಷನ್‌ ಆಗಿದೆ. ಕಳೆದ ಕೆಲ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಏಪ್ರಿಲ್‌ ತಿಂಗಳಲ್ಲಿ ಬಿಸಿಲು ರೌದ್ರಾವತಾರ ತಾಳಿದಂತಿತ್ತು.

ಉಷ್ಣಾಂಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಏರಿಕೆಯಾಗಿತ್ತು. ಪ್ರಸಕ್ತ ವರ್ಷ ಏಪ್ರಿಲ್‌ 6ರಂದು 41 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿರು ವುದು ಕಳೆದ 12 ವರ್ಷಗಳ ಇತಿಹಾಸದಲ್ಲಿ ದಾಖಲೆಯಾಗಿತ್ತು. ಉಷ್ಣಾಂಶದಲ್ಲಿ ಏರಿಕೆ, ಬಿಸಿಲಿನ ತಾಪ
ಹಾಗೂ ಈಜು ಕಲಿಯುವ ಹುಮ್ಮಸ್ಸಿನಲ್ಲಿ ಅತ್ಯಧಿಕ ಸಂಖ್ಯೆಯ ಸ್ವಿಮ್ಮಿಂಗ್‌ ಪೂಲ್‌ಗೆ ಆಗಮಿಸಿ ಈಜುವ ಮೂಲಕ ತಣಿದಿದ್ದಾರೆ, ಸಂತಸ ಪಟ್ಟಿದ್ದಾರೆ..

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ನಗರದ ಕೆ.ಎಚ್‌. ಪಾಟೀಲ ಜಿಲ್ಲಾ ಕ್ರೀಡಾಂಗಣದ ಆವರಣ, ಕಳಸಾಪೂರ ರಸ್ತೆ ನಂದೀಶ್ವರ ಈಜುಕೊಳ, ರಾಜೀವಗಾಂಧಿ ನಗರದ ಸ್ವಾಮಿ ವಿವೇಕಾನಂದ ಈಜುಕೊಳ, ವಸಂತಸಿಂಗ್‌ ಜಮಾದಾರ ನಗರದಲ್ಲಿರುವ ಈಜುಕೊಳ ಸೇರಿ ಒಟ್ಟು ನಾಲ್ಕು ಈಜುಗೊಳದಲ್ಲಿ ಸಾರ್ವಜನಿಕರು ಬಿಸಿಲಿನ ಬೇಗೆಯಿಂದ ತಣಿಯಲು ಪ್ರಯತ್ನಿಸಿದ್ದಾರೆ.

ಅವಳಿ ನಗರದಲ್ಲಿರುವ ನಾಲ್ಕೂ ಈಜುಕೊಳಗಳಲ್ಲಿ ಪ್ರತಿದಿನ ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಸ್ವಿಮ್ಮಿಂಗ್‌ ಫೂಲ್‌ ತೆರೆದಿದ್ದು ತಲಾ 45 ನಿಮಿಷಗಳಿಗೆ 50 ರೂ. ವಂತಿಗೆ ಪಾವತಿಸಿ ಪ್ರತಿದಿನ ಸುಮಾರು 250ರಿಂದ 300 ಜನರು ಸ್ವಿಮ್ಮಿಂಗ್‌ ಪೂಲ್‌ ಬಳಕೆ
ಮಾಡಿಕೊಂಡಿದ್ದಾರೆ. ಈಜು ಕಲಿಯುವವರು ತರಬೇತಿ ಸಹಿತ 21 ದಿನಗಳಿಗೆ 3 ಸಾವಿರ ರೂ., ಮಾಸಿಕ ಪಾಸ್‌ 1,000 ರೂ. ಶುಲ್ಕ ಪಾವತಿಸಿ ಈಜುಕೊಳಗಳನ್ನು ಸದ್ಬಳಕೆ ಮಾಡಿಕೊಂಡಿದ್ದಾರೆ.

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜಿಲ್ಲಾ ಕ್ರೀಡಾಂಗಣದ ಈಜುಕೊಳದಲ್ಲಿ ಮಕ್ಕಳಿಗೆ ಮತ್ತು ವಯಸ್ಕರಿಗೆ ವಿಶೇಷ ಬೇಸಿಗೆ ಶಿಬಿರ ಆರಂಭಿಸಿತ್ತು. ನಗರದ ಕೆ.ಎಚ್‌. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿನ ಈಜುಕೊಳದಲ್ಲಿ 3 ಸಿಬ್ಬಂದಿ, ಕಳಸಾಪೂರ ರಸ್ತೆಯ ನಂದೀಶ್ವರ ಈಜುಕೊಳ, ರಾಜೀವಗಾಂಧಿ ನಗರದ ಸ್ವಾಮಿ ವಿವೇಕಾನಂದ ಈಜುಕೊಳ ಹಾಗೂ ವಸಂತಸಿಂಗ್‌ ಜಮಾದಾರ ನಗರದಲ್ಲಿರುವ ಈಜುಕೊಳದಲ್ಲಿ ತಲಾ ಇಬ್ಬರಂತೆ ಒಟ್ಟು 9 ಸಿಬ್ಬಂದಿ ಈಜುಕೊಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈ ವಿಶೇಷ ಶಿಬಿರದಲ್ಲಿ ಮನರಂಜನೆಗಾಗಿ ಮಾತ್ರ ಗಂಟೆ ಮತ್ತು ತಿಂಗಳ ಲೆಕ್ಕದಲ್ಲಿ ಶುಲ್ಕ ಪಾವತಿಸಿ
ಈಜುಕೊಳಕ್ಕೆ ಆಗಮಿಸಿ ದೇಹ ತಣ್ಣಗೆ ಮಾಡಿಕೊಳ್ಳುತ್ತಿದ್ದಾರೆ. ಶಿಬಿರಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಕ್ರೀಡಾ ತರಬೇತುದಾರ ಮಾಹಿತಿ ನೀಡಿದರು.

ಮಾರ್ಚ್‌, ಏಪ್ರಿಲ್‌ನಲ್ಲೆ ಅತೀ ಹೆಚ್ಚು ಶುಲ್ಕ ಸಂದಾಯ: ಕಳೆದ ಮಾರ್ಚ್‌ ತಿಂಗಳಿನಲ್ಲಿ ನಾಲ್ಕು ಈಜುಕೊಳ ಮೂಲಕ ಸಾರ್ವಜನಿಕರಿಂದ 3,90, 100 ರೂ. ಹಣ ಸಂದಾಯವಾದರೆ, ಏಪ್ರಿಲ್‌ನಲ್ಲಿ ದಾಖಲೆಯ 9,24,350 ರೂ. ಸಂದಾಯವಾಗುವ
ಮೂಲಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬೊಕ್ಕಸಕ್ಕೆ ಅತ್ಯಧಿಕ ಹಣ ಪಾವತಿಯಾಗಿರುವುದು ಇದೇ ಮೊದಲ ಬಾರಿಯಾಗಿದೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ನಾಲ್ಕು ಈಜುಕೊಳಗಳು ಕಾರ್ಯ ನಿರ್ವಹಿಸುತ್ತಿರುವುದು
ಹೆಮ್ಮೆಯ ವಿಷಯ. ಈ ಭಾಗದ ವಿದ್ಯಾರ್ಥಿಗಳಿಗೆ, ಈಜುಪಟುಗಳಿಗೆ, ಸಾರ್ವಜನಿಕರಿಗೆ ಈಜುಕೊಳಗಳು ಸದ್ಬಳಕೆಯಾಗುತ್ತಿವೆ. ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌., ಜಿಪಂ ಸಿಇಒ ಭರತ್‌ ಎಸ್‌. ಸಂಪೂರ್ಣ ಸಹಾಯ, ಸಹಕಾರ ನೀಡಿದ್ದರಿಂದಲೇ ಇಷ್ಟೆಲ್ಲ ಸಾಧ್ಯವಾಗಿದೆ.

ಡಾ|ಶರಣು ಗೊಗೇರಿ, ಸಹಾಯಕ
ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ.

*ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಯಿಲಗೋಳ ಆರೋಗ್ಯ ಕೇಂದ್ರಕ್ಕಿಲ್ಲ ರಸ್ತೆ: ಬೀದಿದೀಪಗಳ ವ್ಯವಸ್ಥೆಯೂ ಇಲ್ಲ

ಹುಯಿಲಗೋಳ ಆರೋಗ್ಯ ಕೇಂದ್ರಕ್ಕಿಲ್ಲ ರಸ್ತೆ: ಬೀದಿದೀಪಗಳ ವ್ಯವಸ್ಥೆಯೂ ಇಲ್ಲ

7-gadag

Gadag: ತಂಗಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಅಣ್ಣ

Jamadhar

Vachana Darshan: ಆರ್‌ಎಸ್‌ಎಸ್‌ನಿಂದ ಲಿಂಗಾಯತರಲ್ಲಿ ಒಡಕು ಮೂಡಿಸುವ ಹುನ್ನಾರ: ಡಾ.ಜಾಮದಾರ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag

ಕಳಸಾ-ಬಂಡೂರಿ: ಮಹದಾಯಿ ಜಾರಿಗೆ ಕರವೇ ಪಾದಯಾತ್ರೆ ಆರಂಭ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.