“ಗದಗ ಕಾಂಗ್ರೆಸ್‌ ಧೃತರಾಷ್ಟ್ರನ ಆಸ್ಥಾನದಂತಿದೆ’; ಸಿ.ಸಿ.ಪಾಟೀಲ

ಕಾಂಗ್ರೆಸ್‌ 18 ಮತ, ಬಿಜೆಪಿ 19 ಮತಗಳನ್ನು ಪಡೆದು ಅಧಿಕಾರ ತನ್ನದಾಗಿಸಿಕೊಂಡಿದೆ

Team Udayavani, Feb 4, 2022, 5:28 PM IST

“ಗದಗ ಕಾಂಗ್ರೆಸ್‌ ಧೃತರಾಷ್ಟ್ರನ ಆಸ್ಥಾನದಂತಿದೆ’; ಸಿ.ಸಿ.ಪಾಟೀಲ

ಗದಗ: ಗದಗ ಕಾಂಗ್ರೆಸ್‌ ಎಂಬುದು ಧೃತರಾಷ್ಟ್ರನ ಆಸ್ಥಾನದಂತಾಗಿದೆ. ಕಣ್ಣೆದುರೇ ದ್ರೌಪದಿಯ ವಸ್ತ್ರಾಪಹರಣವಾಗುತ್ತಿದ್ದರೂ ಜಿಲ್ಲಾ ಕಾಂಗ್ರೆಸ್‌ನ ನಾಲ್ಕಾರು ಬುದ್ಧಿಜೀವಿಗಳು ಚಕಾರವೆತ್ತುತ್ತಿಲ್ಲ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ತೀವ್ರ ವಾಗ್ಧಾಳಿ ನಡೆಸಿದರು.

ನಗರದ ಶ್ರೀನಿವಾಸ ಭವನದಲ್ಲಿ ನಡೆದ ನಗರಸಭೆಗೆ ನೂತನ ಬಿಜೆಪಿ ಸದಸ್ಯರ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜನಾದೇಶಕ್ಕೆ ತಲೆಬಾಗದೇ ಕಾಂಗ್ರೆಸ್‌ ಹಿಂಬಾಗಿಲ ಮೂಲಕ ಗದಗ-ಬೆಟಗೇರಿ ನಗರಸಭೆ ಅಧಿ ಕಾರ ಹಿಡಿಯುವ ಕಸರತ್ತು ನಡೆಸುತ್ತಿದೆ ಎಂದು ಆರೋಪಿಸಿದರು.

ಇತ್ತೀಚೆಗೆ ನಡೆದ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್‌ 18 ಮತ, ಬಿಜೆಪಿ 19 ಮತಗಳನ್ನು ಪಡೆದು ಅಧಿಕಾರ ತನ್ನದಾಗಿಸಿಕೊಂಡಿದೆ. ನಗರಸಭೆಯಲ್ಲಿ ಬಿಜೆಪಿಗೆ ಸರಳ ಬಹುಮತವಿದೆ. ಆದರೆ ಸಿಬ್ಬಂದಿ ನೀಡಿದ ಪತ್ರದ ವ್ಯತ್ಯಾಸದಿಂದ ಕಾಂಗ್ರೆಸ್‌ ಸದಸ್ಯರು ನ್ಯಾಯಾಲಯ ಮೂಲಕ ತಡೆಯಾಜ್ಞೆ ತಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅನ್ಯ ಜಿಲ್ಲೆಯ ವಿಧಾನ ಪರಿಷತ್‌ ಸದಸ್ಯರನ್ನು ನಗರದ ಮತದಾರರನ್ನಾಗಿಸುವ ವಾಮಮಾರ್ಗ ಹಿಡಿದರು. ಅದೂ ಕೈಗೂಡದಿದ್ದಾಗ ಮತ್ತೂಂದು ದಾರಿ ಹುಡುಕಿದ್ದಾರೆ. ಕಾಂಗ್ರೆಸ್ಸಿಗರು ಹುಡುಕಿರುವ ಕಾನೂನಿನ ಅಂಶಗಳು ನಮಗೂ ಗೊತ್ತಿವೆ. ಸದಾ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಮಾತನಾಡುವ ಕಾಂಗ್ರೆಸ್‌ ನ್ಯಾಯಕರಿಗೆ ಈ ಅನ್ಯಾಯ ಕಾಣುತ್ತಿಲ್ಲವೇ ಎಂದು ಕಿಡಿಕಾರಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಮಾತನಾಡಿ, ನಗರಸಭೆ ಅಧಿಕಾರ ಹಿಡಿಯುವಲ್ಲಿ ಬಿಜೆಪಿ ಜನಾಭಿಪ್ರಾಯ ಹೊಂದಿದ್ದರೂ, ವಿಪಕ್ಷದವರ ಕುತಂತ್ರದಿಂದ ಕಾನೂನಿನ ತೊಡಕುಂಟಾಗಿದೆ. ಕಾಂಗ್ರೆಸ್‌ ನಾಯಕರು ಇದರಲ್ಲಿ ಶಕುನಿ ಪಾತ್ರ ಮಾಡುತ್ತಿದ್ದಾರೆ. ಕೊನೆಗೆ ಮಹಾಭಾರತದಲ್ಲಿ ಗೆಲ್ಲುವುದು ಪಾಂಡವರೇ ಎನ್ನುವುದು ಗೊತ್ತಿರಲಿ ಎಂದು ಎಚ್ಚರಿಸಿದರು.

ನಗರಸಭೆ ನೂತನ ಸದಸ್ಯರ ಮೇಲೆ ದೊಡ್ಡ ಜವಾಬ್ದಾರಿಯಿದೆ. ಅದನ್ನರಿತು ಆಡಳಿತ ನಡೆಸಬೇಕು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ನಗರಸಭೆಗೆ ನೂತನವಾಗಿ ಆಯ್ಕೆಯಾದ ಸದಸ್ಯರನ್ನು ಸನ್ಮಾನಿಸಲಾಯಿತು. ಶಾಸಕ ಕಳಕಪ್ಪ ಬಂಡಿ, ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ, ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ
ಬಾಕಳೆ, ರಾಜ್ಯ ಒಬಿಸಿ ಕಾರ್ಯದರ್ಶಿ ರವಿ ದಂಡಿನ, ಸಂಗಮೇಶ ದುಂದೂರ, ಕಾಂತೀಲಾಲ ಬನ್ಸಾಲಿ, ಎಂ.ಎಸ್‌. ಕರಿಗೌಡ್ರ, ಶ್ರೀಪತಿ ಉಡುಪಿ, ಮಧವ ಗಣಚಾರಿ, ವಿಜಯಲಕ್ಷ್ಮಿ ಮಾನ್ವಿ ಮುಂತಾದವರಿದ್ದರು.

ಕಾಂಗ್ರೆಸ್‌ ಪಕ್ಷ ಮೊಂಡುತನ ಬಿಟ್ಟು ಜನಾದೇಶಕ್ಕೆ ತಲೆಬಾಗಬೇಕು. ಮುಂದಿನ ಕಾನೂನು ಹೋರಾಟದಲ್ಲಿ ಮುಖಭಂಗವಾದರೆ ಶಾಸಕ ಎಚ್‌. ಕೆ.ಪಾಟೀಲ ಅವರು ಜನರಿಗೆ ಯಾವ ಉತ್ತರ ನೀಡುತ್ತಾರೆ?
ಸಿ.ಸಿ.ಪಾಟೀಲ,
ಲೋಕೋಪಯೋಗಿ ಸಚಿವರು

ಬಿ.ಎಸ್‌.ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಬೇಕೆಂಬ ಉದ್ದೇಶದಿಂದ ಕಾಂಗ್ರೆಸ್‌ ಪಕ್ಷ ತೊರೆದ 17 ಜನ ಶಾಸಕರು ಜಾತ್ಯತೀತವಾಗಿ ಬಿಜೆಪಿ ಬೆಂಬಲಿಸಿ ಸುಭದ್ರ ಸರಕಾರವನ್ನಾಗಿ ಮಾಡಲಾಯಿತು. ಮುಂದಿನ ದಿನಗಳಲ್ಲೂ ನಾವೆಲ್ಲರೂ ಪಕ್ಷದ ಕಂಬಗಳಾಗಿ ನಿಲ್ಲುತ್ತೇವೆ.
ಬಿ.ಸಿ.ಪಾಟೀಲ,
ಜಿಲ್ಲಾ ಉಸ್ತುವಾರಿ ಸಚಿವರು

ಟಾಪ್ ನ್ಯೂಸ್

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

Darshan; ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ರಾಶಿ ಹಾಕಿದ ಕಿಡಿಗೇಡಿಗಳು

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು

body of Mamtaz Ali found under Koolur Bridge

Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ

Mangaluru: ಮಮ್ತಾಜ್ ಅಲಿ ನಾಪತ್ತೆ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್

Mangaluru: ಮಮ್ತಾಜ್ ಅಲಿ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್

Navratri Special: ತಾಯ್ತನ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?

Navratri Special: ತಾಯ್ತನದ ಭಾವ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?

Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಪ್ರಶಸ್ತಿ ರದ್ದು!

Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಪ್ರಶಸ್ತಿ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

1-yttt

Veerashaiva Lingayat ಧರ್ಮವು ವಿಶ್ವಮಾನ್ಯ ಮೌಲ್ಯಗಳನ್ನು ಹೊಂದಿದೆ: ವಿ. ಸೋಮಣ್ಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

Darshan; ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ರಾಶಿ ಹಾಕಿದ ಕಿಡಿಗೇಡಿಗಳು

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು

body of Mamtaz Ali found under Koolur Bridge

Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ

Mangaluru: ಮಮ್ತಾಜ್ ಅಲಿ ನಾಪತ್ತೆ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್

Mangaluru: ಮಮ್ತಾಜ್ ಅಲಿ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.