ಗದಗ: ಬರದ ಬವಣೆ ನೀಗಿಸಿದ ಎಸ್‌.ಜಿ. ಬಾಳೇಕುಂದ್ರಿ

ಗುರುನಾಥ ಸುತಾರ ಅವರ ವಚನ ಸಂಗೀತದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು.

Team Udayavani, May 17, 2023, 4:32 PM IST

ಗದಗ: ಬರದ ಬವಣೆ ನೀಗಿಸಿದ ಎಸ್‌.ಜಿ. ಬಾಳೇಕುಂದ್ರಿ

ಗದಗ: ಎಸ್‌.ಜಿ. ಬಾಳೇಕುಂದ್ರಿ ಅವರು ನಮ್ಮ ನಾಡಿನ ಹೆಸರಾಂತ ಅಭಿಯಂತರರು. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ರೂವಾರಿಗಳು ಎಂದು ಡಾ| ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.

ನಗರದ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ 2641ನೇ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ತಂದೆ-ತಾಯಿಯ ಬಗ್ಗೆ ಅಪಾರ ಗೌರವ ಹೊಂದಿದ ಬಾಳೇಕುಂದಿ ಅವರು ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ ಒಂದು ಪೈಸೆಗೂ ಆಸೆ ಪಡದೇ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ. ಅವರ ನೇರ, ನಿಷ್ಠುರ, ದಕ್ಷ, ಪ್ರಾಮಾಣಿಕತೆಗೆ ಜನಪ್ರತಿನಿಧಿಗಳು ಸಹ ಭಯಪಡುತ್ತಿದ್ದುದನ್ನು ಒಡನಾಡಿಗಳಿಂದ ಕೇಳಿದ್ದೇವೆ ಎಂದರು.

ಉತ್ತರ ಕರ್ನಾಟಕದ ಜನರು ಬರಗಾಲದಿಂದ ತತ್ತರಿಸಿ ಬೇರೆ ಕಡೆಗೆ ಗುಳೇ ಹೋಗುತ್ತಿದ್ದರು. ಈ ಬರಗಾಲದ ಪ್ರದೇಶವನ್ನು ನೀರಾವರಿ ಪ್ರದೇಶವನ್ನಾಗಿ ರೂಪಿಸಿದ ಮಹಾನ್‌ ವ್ಯಕ್ತಿ ಎಸ್‌.ಜಿ. ಬಾಳೇಕುಂದ್ರಿ ಅವರು ಎಂದು ಹೇಳಿದರು.

ಎಸ್‌.ಜಿ. ಬಾಳೇಕುಂದ್ರಿ ಅವರ ಪರಿಶ್ರಮ, ಮುಂದಾಲೋಚನೆಗಳ ಪರಿಣಾಮವಾಗಿ ಇಂದು ನಾವೆಲ್ಲರೂ ವಿದ್ಯುತ್‌ ಮತ್ತು ನೀರನ್ನು ಕಾಣುವಂತಾ ಗಿದೆ. ನಮ್ಮ ಗುರುಗಳಾದ ಲಿಂ| ಡಾ| ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳವರು ಸಹಿತ ಎಸ್‌.ಜಿ. ಬಾಳೇಕುಂದ್ರಿ ಅವರ ಪ್ರಾಮಾಣಿಕತೆ ಮತ್ತು ಕಾರ್ಯವೈಖರಿ ಕುರಿತು ಅಪಾರ ಅಭಿಮಾನ ಹೊಂದಿದ್ದರು ಎಂದು ಹೇಳಿದರು.

ಎಸ್‌.ಜಿ. ಬಾಳೇಕುಂದ್ರಿ ಅವರ ಜನ್ಮಶತಮಾನೋತ್ಸವ ಸಂದರ್ಭದಲ್ಲಿ ಸರಕಾರ ಅವರನ್ನು ಗೌರವಿಸದೇ ಇರುವುದು ಬಹಳಷ್ಟು ಖೇದಕರ ಸಂಗತಿ. ಸಾಕಷ್ಟು ಬಾರಿ ಸರಕಾರಕ್ಕೆ ಮನವಿ ಪತ್ರಗಳನ್ನು ಸ್ವತಃ ಸಲ್ಲಿಸಿದ್ದೇವೆ. ಅಷ್ಟೇ ಅಲ್ಲದೇ, ಈ ಭಾಗದ ಗಣ್ಯಮಾನ್ಯರೂ ಮನವಿಗಳನ್ನು ಸರಕಾರಕ್ಕೆ ಸಲ್ಲಿಸಿದ್ದಾರೆ. ಆದರೂ, ಬೆಳಗಾವಿಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಅವರ ಹೆಸರಿನಿಂದ ಅಧ್ಯಯನ ಪೀಠ ಸ್ಥಾಪಿಸದೇ ಇರುವುದು ಈ ಭಾಗದ ಜನರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಶ್ರೀಗಳು ಹೇಳಿದರು.

ಉಪನ್ಯಾಸಕ ಡಾ| ಕಲ್ಲಯ್ಯ ಹಿರೇಮಠ ಮಾತನಾಡಿ, ಎಸ್‌.ಜಿ. ಬಾಳೇಕುಂದ್ರಿ ಅವರು ಉತ್ತರ ಕರ್ನಾಟಕ ಭಾಗದಲ್ಲಿ ನೀರಾವರಿ ಮತ್ತು ವಿದ್ಯುತ್‌ ಕ್ಷೇತ್ರದಲ್ಲಿ ಅಭೂತಪೂರ್ವ ಸೇವೆ ಸಲ್ಲಿಸಿದ್ದಾರೆ. ಇಂತಹ ಪುಣ್ಯಪುರುಷರ ಜನ್ಮಶತಮಾನೋತ್ಸವವನ್ನು ಶಿವಾನುಭವ ಕಾರ್ಯಕ್ರಮದಲ್ಲಿ ಆಚರಿಸುತ್ತಿರುವುದು ಔಚಿತ್ಯಪೂರ್ಣವಾದುದು ಎಂದು ಹೇಳಿದರು.

ನಮ್ಮ ಭಾಗದಲ್ಲಿ ಹಲವಾರು ನೀರಾವರಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಈ ಭಾಗದ ರೈತರ ಜೀವನವನ್ನು ಹಚ್ಚಹಸಿರಾಗಿಸಿದವರು ಎಸ್‌.ಜಿ. ಬಾಳೇಕುಂದ್ರಿ ಅವರು. ಲೋಕೋಪಯೋಗಿ ಇಲಾಖೆಯಲ್ಲಿ ಉನ್ನತ ಹುದ್ದೆ ಅಲಂಕರಿಸಿದ ಅವರು ಮಲಪ್ರಭಾ, ಘಟಪ್ರಭಾ, ಹಿಡಕಲ್‌, ಕೂಡಲಸಂಗಮ ಹೀಗೆ ಅನೇಕ ಡ್ಯಾಮ್‌ಗಳನ್ನು ನಿರ್ಮಿಸಿ ಬರದ ಸಮಸ್ಯೆ ನೀಗಿಸಿದ ಮಹಾನುಭಾವರು ಎಂದು ಅಭಿಪ್ರಾಯಪಟ್ಟರು.

ಭಕ್ತಿಸೇವೆ ವಹಿಸಿದ ಬಸವರಾಜ ಬಿಂಗಿ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ನೀರಾವರಿ ಕ್ರಾಂತಿ ಮಾಡಿ ಬಡ ರೈತರಿಗೆ ನೀರಾವರಿ ಸೌಲಭ್ಯಗಳನ್ನು ಒದಗಿಸಿದ ಕೀರ್ತಿ ಎಸ್‌.ಜಿ. ಬಾಳೇಕುಂದ್ರಿ ಅವರಿಗೆ ಸಲ್ಲುತ್ತದೆ ಎಂದರು. ಶ್ರೀಮಠದ ಕಲಾವಿದರಾದ ಮೃತ್ಯುಂಜಯ ಹಿರೇಮಠ ಮತ್ತು ಗುರುನಾಥ ಸುತಾರ ಅವರ ವಚನ ಸಂಗೀತದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು.

ಲಾವಣ್ಯ ಗೌಡರ ಧರ್ಮಗ್ರಂಥ ಪಠಿಸಿದರು. ಪ್ರತೀಕ್ಷಾ ಕುಂಬಾರ ವಚನ ಚಿಂತನ ನಡೆಯಿತು. ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಕಳಸಾಪೂರ ಸ್ವಾಗತಿಸಿ, ಮಂಜುಳಾ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.