![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Jul 31, 2024, 10:07 AM IST
ಗದಗ: ಬಿಡಾಡಿ ದನಗಳ ಹಾವಳಿಗೆ ವೃದ್ಧ ಬಲಿಯಾಗಿರುವ ಘಟನೆ ಬುಧವಾರ ಬೆಳಗ್ಗೆ ಬೆಟಗೇರಿ ಪಟ್ಟಣದಲ್ಲಿ ನಡೆದಿದೆ.ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಶಂಕರಪ್ಪ ಹೊಳಿ (70) ವರ್ಷದ ವೃದ್ಧ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಟಗೇರಿಯ ಸರಕಾರಿ ಪ್ರಾಥಮಿಕ ಶಾಲೆ ನಂಬರ್ 7ರ ಹತ್ತಿದ ಬಿಡಾಡಿ ಗೂಳಿ ಇತರೆ ದನಗಳೊಂದಿಗೆ ಗುದ್ದಾಡುತ್ತಿರುವಾಗ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧನಿಗೆ ರಭಸವಾಗಿ ಗುದ್ದಿದೆ. ಪರಿಣಾಮ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಗದಗ-ಬೆಟಗೇರಿ ಅವಳಿ ನಗರದಲ್ಲಿ ಬಿಡಾಡಿ ದನಗಳ ಹಾವಳಿ ಶಿರ್ಷಿಕೆಯಡಿ ಉದಯವಾಣಿ ಕಳೆದ ಜು. 19ರಂದು ವಿಸ್ತೃತವಾದ ವರದಿ ಪ್ರಕಟಿಸುತ್ತು. ಇಷ್ಟಾದರೂ ಎಚ್ಚೆತ್ತುಕೊಳ್ಳದ ನಗರಸಭೆ ನಿರ್ಲಕ್ಷ್ಯದಿಂದ ವೃದ್ಧನೊಬ್ಬ ಸಾವಿಗೀಡಾಗುವಂತಾಗಿದೆ.
ಈ ಕುರಿತು ಬೆಟಗೇರಿ ಪಿಎಸ್ಐ ಲಕ್ಷ್ಮಣ ಆರಿ ಮಾತನಾಡಿ, ಈಗಾಗಲೇ ನಗರಸಭೆಗೆ ಬಿಡಾಡಿ ದನಗಳ ಹಾವಳಿ ತಪ್ಪಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಈಗಾಗಲೇ ಪತ್ರ ಬರೆಯಲಾಗಿತ್ತು. ಈಗ ಮತ್ತೆ ನಗರಸಭೆಗೆ ಬಿಡಾಡಿ ದನಗಳ ಸ್ಥಳಾಂತರ ಮಾಡುವಂತೆ ಸೂಚಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.