Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ
Team Udayavani, May 16, 2024, 4:15 PM IST
ಗದಗ: ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸರ್ಕಾರ ಪೊಲೀಸರನ್ನು ರಾಜಕೀಯ ವಿರೋಧಿಗಳ ದಮನಕ್ಕೆ ಬಳಸುತ್ತಿದ್ದಾರೆ. ಚುನಾವಣೆ ಬಳಿಕ ಎಲ್ಲಾ ಕ್ಷೇತ್ರದಲ್ಲಿ ವಿಪಕ್ಷ ಕಾರ್ಯಕರ್ತರ ಮೇಲೆ ಕೇಸ್ ಹಾಕುವುದರಲ್ಲಿ ಪೊಲೀಸರು ನಿರತರಾಗಿದ್ದಾರೆ. ಅಟ್ರಾಸಿಟಿ ಇನ್ನಿತರ ಕೇಸ್ ಹಾಕುವುದರಲ್ಲಿ ನಿರತರಾಗಿದ್ದಾರೆ. ಇಸ್ಪಿಟ್, ಮಟ್ಕ, ಕ್ಲಬ್ಗಳು, ಮರಳು ದಂಧೆಯಲ್ಲಿ ಸಂಪೂರ್ಣ ಪೊಲೀಸ್ ಅಧಿಕಾರಿಗಳು ಶಾಮೀಲಾಗಿದ್ದಾರೆ. ದೊಡ್ಡ ಲಂಚ ಕೊಟ್ಟು ಪೋಸ್ಟಿಂಗ್ ಹಾಕಿಸಿಕೊಂಡಿದ್ದಾರೆ. ಹೀಗಾಗಿ ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ನಿರ್ಭೀತಿಯಿಂದ ಗೂಂಡಾಗಳು ಓಡಾಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಜಲಿ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವೈಫಲ್ಯವಾಗಿದೆ. ಕೊಲೆಗಾರ ನೇಹಾ ರೀತಿಯಲ್ಲೇ ಕೊಲೆ ಮಾಡುತ್ತೇನೆ ಎಂದಿದ್ದಾನೆ. ಪೊಲೀಸರಿಗೆ ದೂರು ನೀಡಿದರೂ ಸಾಧ್ಯವಿಲ್ಲವೆಂದು ಉದಾಸೀನ ಮಾಡಿದ್ದಾರೆ ಎಂದು ಹೇಳಿದರು.
ಅದೇ ಊರಲ್ಲಿ ಇಷ್ಟು ದೊಡ್ಡ ಪ್ರಕರಣ ನಡೆದರೂ ಪೊಲೀಸರು ಅರೆಸ್ಟ್ ಮಾಡಿದ್ದರೆ ಈ ಕೊಲೆ ತಪ್ಪಿಸಬಹುದಿತ್ತು. ಅಂಜಲಿ ಕೊಲೆಯಲ್ಲಿ ಪೊಲೀಸರ ಪಾತ್ರ ದೊಡ್ಡದಿದೆ. ಪೊಲೀಸರು ಕೊಲೆ ತಡೆಯದೆ ಪರೋಕ್ಷವಾಗಿ ಕಾರಣವಾಗಿದ್ದಾರೆ ಎಂದು ಕಿಡಿಕಾರಿದರು.
ಗದಗನಲ್ಲಿ ಒಂದು ಗಂಟೆಯಲ್ಲಿ ನಾಲ್ಕು ಜನ ಕೊಲೆ ಮಾಡಿ ಹೋಗುತ್ತಾರೆಂದರೆ ಎಷ್ಟು ಧೈರ್ಯ ಇರಬೇಕು, ಹಂತಕರಿಗೆ ಯಾರ ಭಯವೂ ಇಲ್ಲದಂತಾಗಿದೆ. ರಾಜ್ಯದಲ್ಲಿ ಯಾರ ಪ್ರಾಣವೂ ಸುರಕ್ಷಿತವಾಗಿಲ್ಲ. ಯಾವ ಸಂದರ್ಭದಲ್ಲ ಎಲ್ಲಿ ಏನಬೇಕಾದರು ಗಲಾಟೆ, ದಾಂಧಲೆಯಾಗಿ ಕೊಲೆಗಳಾಗಿ ಮಾರ್ಪಡುತ್ತಾವೆ. ಸಂಪೂರ್ಣ ಭಯದ ವಾತಾವರಣ, ಗೂಂಡಾ ಸರ್ಕಾರ ಈ ರಾಜ್ಯದಲ್ಲಿದೆ ಎಂದರು.
ನೇಹಾ ಹಿರೇಮಠ ಕೇಸ್ ನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದರು. ಹಾಡಹಗಲೇ ಕಾಲೇಜ್ ಕ್ಯಾಂಪಸ್ ನಲ್ಲಿ ಕೊಲೆಯಾದರೆ ಸಾರ್ವಜನಿಕರು ಪ್ರತಿಭಟನೆ ಮಾಡಿದರು, ಜನರು ರಾಜಕೀಯ ಮಾಡುತ್ತಾರಾ? ಭಯಾನಕ ಕೊಲೆಯಾದರೆ ವಿಪಕ್ಷಗಳು ಸುಮ್ಮನೆ ಇರಬೇಕೆ ಎಂದು ಪ್ರಶ್ನಿಸಿದರು.
ಕಾಲೇಜ್ ಆವರಣ, ಮನೆ ಹೊಕ್ಕು ಕೊಲೆ ಮಾಡುತ್ತಾರೆಂದರೆ ಇದು ಗೂಂಡಾ ರಾಜ್ಯ ಅಲ್ದೇ ಯಾವ ರಾಜ್ಯ ಎಂದು ಕರೆಯಬೇಕು. ಇಷ್ಟೆಲ್ಲಾ ಆದರೂ ಕೂಡ ಗೃಹ ಸಚಿವರು, ಮುಖ್ಯಮಂತ್ರಿಗಳು ಏನೂ ಆಗದ ರೀತಿಯಲ್ಲಿ ಇದ್ದಾರೆ. ಕೊಲೆ ಬಗ್ಗೆ ಸಣ್ಣ ಪರಿಶೀಲನೆ ಕೂಡ ಮಾಡುತ್ತಿಲ್ಲ. ಪರಮೇಶ್ವರ್ ಅವರು ನೇಹಾ ಕೊಲೆಯಾದಾಗ ಬರ್ಲಿಲ್ಲ. ಸಾಂತ್ವನ ಬಿಡಿ ತನಿಖೆ ಚುರುಕುಗೊಳಿಸಲಿಲ್ಲ. ಪೊಲೀಸರ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಳ್ಳಲಿಲ್ಲ. ಈಗ ಅಂಜಲಿ ಕೊಲೆಯಾಗಿದೆ. ಈಗಲೂ ಉದಾಸೀನ ಮಾಡುತ್ತಿದ್ದೀರಾ ಎಂದು ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಯಿಲಗೋಳ ಆರೋಗ್ಯ ಕೇಂದ್ರಕ್ಕಿಲ್ಲ ರಸ್ತೆ: ಬೀದಿದೀಪಗಳ ವ್ಯವಸ್ಥೆಯೂ ಇಲ್ಲ
Gadag: ತಂಗಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಅಣ್ಣ
Vachana Darshan: ಆರ್ಎಸ್ಎಸ್ನಿಂದ ಲಿಂಗಾಯತರಲ್ಲಿ ಒಡಕು ಮೂಡಿಸುವ ಹುನ್ನಾರ: ಡಾ.ಜಾಮದಾರ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
ಕಳಸಾ-ಬಂಡೂರಿ: ಮಹದಾಯಿ ಜಾರಿಗೆ ಕರವೇ ಪಾದಯಾತ್ರೆ ಆರಂಭ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.