ಗದಗ: ಮನೆ ಆರೋಗ್ಯಕರ ವಾತಾವರಣಕ್ಕೆ ಗೋವು ಪೂರಕ


Team Udayavani, Jun 12, 2023, 3:10 PM IST

ಗದಗ: ಮನೆ ಆರೋಗ್ಯಕರ ವಾತಾವರಣಕ್ಕೆ ಗೋವು ಪೂರಕ

ಗದಗ: ಭಾರತೀಯ ಆಧ್ಯಾತ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ನಡೆಯುವ ಪ್ರತಿಯೊಂದು ಆಧ್ಯಾತ್ಮಿಕ ಕಾರ್ಯಗಳಲ್ಲಿ ನಮ್ಮ ಪೂರ್ವಜರ
ಕಾರ್ಯ ಚಟುವಟಿಕೆ ವೈಜ್ಞಾನಿಕತೆಯಿಂದ ಕೂಡಿದ ಸಂಸ್ಕೃತಿ, ಸಂಪ್ರದಾಯಗಳ ಜ್ಞಾನವನ್ನು ನೀಡಲಾಗುತ್ತಿದೆ ಎಂದು ಬೆಳ್ಳಟ್ಟಿ-ಕೊಕ್ಕರಗುಂದಿಯ ರಾಮಲಿಂಗೇಶ್ವರ ದಾಸೋಹ ಮಠದ ಬಸವರಾಜ ಸ್ವಾಮೀಜಿ ಹೇಳಿದರು.

ತಾಲೂಕಿನ ಹರ್ಲಾಪುರ ಗ್ರಾಮದ ಕೊಟ್ಟೂರೇಶ್ವರ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಕೊಟ್ಟೂರೇಶ್ವರ ಪುರಾಣ ಮಂಗಲ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು, ನಮ್ಮ ಪೂರ್ವಜರು ಗೋವುಗಳನ್ನು ಹೆಚ್ಚು ಸಾಕುತ್ತಿದ್ದರು. ಕಾರಣ ಅದರ ಪ್ರತಿಯೊಂದು ಚಲನ ವಲನ ಮನುಷ್ಯನಿಗೆ ಉಪಯುಕ್ತವಾಗುವುದರ ಜೊತೆಗೆ ತನ್ನ ಮನೆಯ
ಆರೋಗ್ಯಕರ ವಾತವಾರಣಕ್ಕೆ ಪೂರಕವಾಗಿತ್ತು ಎಂದರು.

ಆಕಳಿನ ಹಾಲಿನ ಉತ್ಪನ್ನಗಳು ಬೆಳೆಯುವ ಮಕ್ಕಳಿಗೆ ಸಕಾರಾತ್ಮಕವಾಗಿರುತ್ತಿತ್ತು. ಅದರ ಜೊತೆಗೆ ಆಕಳಿನ ಸಗಣಿಯಿಂದ ವಿಭೂತಿ, ಮತ್ತು ಅದರ ಮೂತ್ರವಂತೂ ಅಮೃತಕ್ಕೆ ಸಮಾನವಾಗಿದ್ದು, ಇಂದಿಗೂ ಸಹ ಮೂತ್ರವು ಮನುಷ್ಯನ ಆರೋಗ್ಯಕ್ಕೆ ಉತ್ತಮ ಔಷ ಧಿಯಾಗಿದೆ. ಮನುಷ್ಯ ಇಂದಿನ ಒತ್ತಡದ ಬದುಕಿನಲ್ಲಿ ವಿಕೃತನಾಗುತ್ತಿದ್ದು ಮಠಗಳಲ್ಲಿಯ ಗುರುಗಳ ಸಂಪರ್ಕವನ್ನು ಹೊಂದಿ ಸರಳ ಜೀವನ ನಡೆಸಬೇಕು ಎಂದು ಹೇಳಿದರು.

ಬೆಂಗಳೂರು ಮಿರಾಂಡ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಎಸ್‌.ಎನ್‌. ಕಾತರಕಿ ಮಾತನಾಡಿ, ಮಹಾತ್ಮರು, ಯುಗ ಪುರುಷರು, ತಪಸ್ವಿಗಳು ಎನಿಸಿಕೊಂಡ ಪ್ರತಿ ವ್ಯಕ್ತಿ ಬಾಲ್ಯ ಜೀವನವನ್ನು ಅವಲೋಕಿಸಿದಾಗಲೇ ಅವರ ದಿವ್ಯ ಶಕ್ತಿ ಗೊತ್ತಾಗುತ್ತದೆ. ಕೆಲವರು ಹುಟ್ಟಿನಿಂದಲೇ ತಿಳಿದರೆ ಇನ್ನೂ ಕೆಲವರು ಹುಟ್ಟಿದ ಮೇಲೆ ಅವರ ಶಕ್ತಿ ಈ ಸಮಾಜಕ್ಕೆ ಅರಿವು ಬರುತ್ತದೆ. ಈ ದಿಸೆಯಲ್ಲಿ ಹಠಯೋಗಿ ಕೊಟ್ಟೂರೇಶ್ವರರ ಶಕ್ತಿ ಹುಟ್ಟಿದ ಮೇಲೆ ಗೊತ್ತಾಗಿದ್ದು, ಕೊಪ್ಪಳದ ಗವಿಮಠ, ಕಪೋತಗಿರಿಯಲ್ಲಿ ಶಿವಧ್ಯಾನದ ತಪಸ್ಸು ಮಾಡಿದ ನಂತರ ಹರ್ಲಾಪುರದ ಹಡಪದವರ ಮನೆಯಿಂದ ಅವರ ಜೀವನ ಆರಂಭವಾಗಿ ಹಠಯೋಗದಿಂದ ಪವಾಡಗಳನ್ನು ಸೃಷ್ಟಿಸಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡರು.

ಅವರ ಹಾದಿಯಲ್ಲಿಯೇ ಇಂದಿನ ಕೊಟ್ಟೂರೇಶ್ವರ ಶ್ರೀಗಳು ತಮ್ಮ ವಾಕ್‌ ಸಿದ್ಧಿಯಿಂದ ಆಧುನಿಕ ಜಗತ್ತಿಗೆ ಹೊಂದುವಂಥ ಜ್ಞಾನವನ್ನು ನೀಡುತ್ತ ಈ ಭಾಗದ ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿರುವುದು ಶ್ಲಾಘನೀಯ ಎಂದರು.
ಹಿರೇವಡ್ಡಟ್ಟಿಯ ವೀರೇಶ್ವರ ಶಿವಾಚಾರ್ಯರು, ಡಾ| ಕೊಟ್ಟೂರೇಶ್ವರ ಶ್ರೀಗಳು ಮಾತನಾಡಿದರು. ಇದೇ ಸಂದರ್ಭದಲ್ಲಿ ಕೋವಿಡ್‌ ಹರಡಿರುವ ಸಂದರ್ಭದಲ್ಲಿ ಗ್ರಾಮದ ವೈದ್ಯ ಡಾ|ಎಸ್‌ .ವಿ. ಸರ್ವಿ ಅವರು ಸಲ್ಲಿಸಿದ ಸೇವೆಯನ್ನು ಗುರುತಿಸಿ “ದೀನರ ಧನ್ವಂತರಿ’ ಎಂಬ ಬಿರುದು ನೀಡಿ ಗೌರವಿಸಲಾಯಿತು.

ದೇಣಿಗೆ ನೀಡಿದ ವಿವಿಧ ಮಹನೀಯರನ್ನು ಸನ್ಮಾನಿಸಲಾಯಿತು. ಡಾ| ಕೊಟ್ಟೂರೇಶ್ವರ ಶ್ರೀಗಳ ತುಲಾಭಾರ ಕಾರ್ಯಕ್ರಮ ನಡೆಯಿತು. ಶಶಿಧರ ಶಾಸ್ತ್ರೀಗಳು ಹಿರೇಮಠ ಅವರು ಕೊಟ್ಟೂರೇಶ್ವರ ಪುರಾಣವನ್ನು ಮಂಗಲ ಮಾಡಿದರು. ಕೆ.ಬಿ. ವೀರಾಪೂರ ಸಂಗೀತ ಸೇವೆ ನೀಡಿದರು.

ವಸಂತಗೌಡ ಪಾಟೀಲ, ಗ್ರಾಪಂ ಅಧ್ಯಕ್ಷೆ ಸುಮಂಗಲಾ ಚಟ್ರಿ, ಉಪಾಧ್ಯಕ್ಷೆ ರೇಣುಕಾ ವಡ್ಡರ. ಮಲ್ಲೇಶ ಹುಲಕೋಟಿ ಇದ್ದರು.
ಸಿದ್ದಲಿಂಗಯ್ಯ ಹಿರೇಮಠ ಸ್ವಾಗತಿಸಿದರು. ಕೆ.ಬಿ. ಕೊಣ್ಣೂರು ನಿರೂಪಿಸಿದರು. ಕೆ.ಎಂ. ಮಜ್ಜಿಗುಡ್ಡ ವಂದಿಸಿದರು.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಯಿಲಗೋಳ ಆರೋಗ್ಯ ಕೇಂದ್ರಕ್ಕಿಲ್ಲ ರಸ್ತೆ: ಬೀದಿದೀಪಗಳ ವ್ಯವಸ್ಥೆಯೂ ಇಲ್ಲ

ಹುಯಿಲಗೋಳ ಆರೋಗ್ಯ ಕೇಂದ್ರಕ್ಕಿಲ್ಲ ರಸ್ತೆ: ಬೀದಿದೀಪಗಳ ವ್ಯವಸ್ಥೆಯೂ ಇಲ್ಲ

7-gadag

Gadag: ತಂಗಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಅಣ್ಣ

Jamadhar

Vachana Darshan: ಆರ್‌ಎಸ್‌ಎಸ್‌ನಿಂದ ಲಿಂಗಾಯತರಲ್ಲಿ ಒಡಕು ಮೂಡಿಸುವ ಹುನ್ನಾರ: ಡಾ.ಜಾಮದಾರ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag

ಕಳಸಾ-ಬಂಡೂರಿ: ಮಹದಾಯಿ ಜಾರಿಗೆ ಕರವೇ ಪಾದಯಾತ್ರೆ ಆರಂಭ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

04

Kasaragod: ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.