ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು


Team Udayavani, Jul 18, 2024, 3:53 PM IST

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಉದಯವಾಣಿ ಸಮಾಚಾರ
ಗದಗ: ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಪೈಪ್‌ಲೈನ್‌ ಮೂಲಕ ಮನೆ-ಮನೆಗಳಿಗೆ ಅಡುಗೆ ಅನಿಲ ಪೂರೈಕೆ ಯೋಜನೆಯ ಕಾಮಗಾರಿಯನ್ನು ಬಿಪಿಸಿಎಲ್‌ ಆರಂಭಿಸುವ ಮುನ್ನ ಕೇಂದ್ರ ಸರಕಾರದ ಯೋಜನೆಯನ್ನು ಆರಂಭಿಸುವ ಕುರಿತು ಜನಪ್ರತಿನಿಧಿಗಳ ಗಮನಕ್ಕೆ ಏಕೆ ತರಲಿಲ್ಲ.

ಸ್ವತಃ ತಮಗೂ ಈ ಬಗ್ಗೆ ಮಾಹಿತಿಯೇ ಇಲ್ಲ. ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ನಗರದ ರಸ್ತೆಗಳನ್ನು ಪುನರ್‌ ನಿರ್ಮಾಣದ  ಜವಾಬ್ದಾರಿ ಯಾರದು? ಎಂದು ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಪ್ರಶ್ನಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋಟ್ಯಾಂತರ ರೂ. ಮೌಲ್ಯದ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯೊಂದು ನಗರಸಭೆ ಅಧ್ಯಕ್ಷರು, ಸದಸ್ಯರು, ಅಷ್ಟೇ ಏಕೆ, ಗದಗ ಶಾಸಕರು, ವಿಧಾನಪರಿಷತ್‌ ಸದಸ್ಯರು, ಲೋಕಸಭೆಯ ಸದಸ್ಯರ ಗಮನಕ್ಕೆ ತಾರದೇ ಗದಗ-ಬೆಟಗೇರಿ ನಗರಸಭೆಯ ಪ್ರಭಾರ ಪೌರಾಯುಕ್ತರೊಬ್ಬರು ಕಾಮಗಾರಿಗೆ ಅನುಮತಿ ನೀಡಿದ್ದು, ಪೌರಾಡಳಿತ ಇಲಾಖೆ ಅವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಿದೆ ಎಂದು ವಿಧಾನಪರಿಷತ್‌ ಕಲಾಪದಲ್ಲಿ ಪ್ರಶ್ನಿಸಿದ್ದಾರೆ.

ಕ್ರಮಕ್ಕೆ ಒತ್ತಾಯ: ಭಾರತ ಪೆಟ್ರೋಲಿಯಂ  ಕಾರ್ಪೋರೇಶನ್‌ ಲಿಮಿಟೆಡ್‌ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಪೈಪ್‌ಲೈನ್‌ ಮೂಲಕ ಮನೆ-ಮನೆಗಳಿಗೆ ಅಡುಗೆ ಅನಿಲ ಪೂರೈಕೆ ಕಾಮಗಾರಿಯನ್ನು ಆರಂಭಿಸಿದ್ದು, ನಗರ ಪ್ರದೇಶದಲ್ಲಿ ಪೈಪ್‌ಲೈನ್‌ ಅಳವಡಿಕೆಗೆ ತೆಗೆದ ತೆಗ್ಗುಗಳು, ರಸ್ತೆ ಹಾನಿಯಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಎದುರಿಸುವಂತಾಗಿದೆ. ಸಾರ್ವಜನಿಕರು ತಮಗೆ ದೂರು ನೀಡುತ್ತಿದ್ದಾರೆ.

ಗದಗ-ಬೆಟಗೇರಿ ನಗರಸಭೆಯ ಅಂದಿನ ಪ್ರಭಾರ ಪೌರಾಯುಕ್ತರು ಯೋಜನೆ ಕುರಿತು ನಗರಸಭೆ ಆಡಳಿತ ಮಂಡಳಿ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಾರದೇ ದಿನಾಂಕ 7-11-2023ರಂದು ಯೋಜನೆಯ ಅನುಷ್ಠಾನಕ್ಕೆ ಅನುಮತಿ ಕೊಟ್ಟಿದ್ದಾರೆ. ಭಾರತ ಪೆಟ್ರೋಲಿಯಂ ಕಾರ್ಪೋರೇಶನ್‌ ಲಿಮಿಟೆಡ್‌ ಅವರಿಗೆ ಒಟ್ಟು 216 ಕಿಮೀ ಪೈಪ್‌ಲೈನ್‌ ಅಳವಡಿಕೆ ಕಾಮಗಾರಿಯಲ್ಲಿ ಮೊದಲ ಹಂತದಲ್ಲಿ 61.32 ಕಿಮೀ. ಪೈಪ್‌ಲೈನ್‌ ಅಳವಡಿಕೆ ಕಾಮಗಾರಿಯನ್ನು ನಡೆಸಲು ಒಪ್ಪಿಗೆ ನೀಡಿದ್ದಾರೆ. ಅದು ನಗರದ ಯಾವ ಭಾಗದಲ್ಲಿ ಎಂಬುದನ್ನೂ ವಿವರಿಸಿಲ್ಲ ಎಂದು ತಿಳಿಸಿದ್ದಾರೆ.

ನಗರಸಭೆ ಪ್ರಭಾರ ಪೌರಾಯುಕ್ತರ ವಿರುದ್ಧಸರಕಾರ ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಅವರ ಪ್ರಶ್ನೆಗೆ ಪೌರಾಡಳಿತ ಹಾಗೂ ಹಜ್‌ ವ ರಹೀಂಖಾನ್‌ ಮಾತನಾಡಿ, ಶೀಘ್ರದಲ್ಲಿಯೇ ಪೌರಾಡಳಿತ ಇಲಾಖೆ ಹಾಗೂ ಗದಗ-ಬೆಟಗೇರಿ ನಗರಸಭೆ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಇತ್ಯರ್ಥಪಡಿಸಲಾಗುವುದು. ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಇಂಜಿನಿಯರ್ ಸೇರಿದಂತೆ ಆ ಭಾಗದ ಜನಪ್ರತಿನಿಧಿಗಳ ಸಭೆ ನಡೆಸಿ ಯೋಜನೆ ವಿವರಗಳನ್ನು ಹಾಗೂ ಯೋಜನೆ ಅನುಷ್ಠಾನ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Accident-Logo

Accident: ದುಬಾೖಯಲ್ಲಿ ಅಪಘಾತ: ಗೋಕಾಕದ ನಾಲ್ವರ ಸಾವು

Ravikumar

MUDAದಲ್ಲಿ ನಡೆದ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಎಂಎಲ್‌ಸಿ ರವಿಕುಮಾರ್‌

DK-Shiva-Kumar

By Election: ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ: ಡಿಸಿಎಂ ಡಿ.ಕೆ. ಶಿವಕುಮಾರ್‌ ಪುನರುಚ್ಚಾರ

Rastra-pathi-Bhavan

CM ಅಭಿಯೋಜನೆ: ರಾಷ್ಟ್ರಪತಿಗಳಿಗೆ ಕಾಂಗ್ರೆಸ್‌ ಮಾಡಿದ್ದ ಮನವಿಗೆ ಸ್ಪಂದನೆ

air india

Air India ಜತೆ ವಿಲೀನ: ಸೆ.3ರ ಬಳಿಕ ವಿಸ್ತಾರ ಟಿಕೆಟ್‌ ಬುಕ್ಕಿಂಗ್‌ ಇಲ್ಲ!

Supreme Court

Supreme Court: ಇತ್ಯರ್ಥಕ್ಕೆ ಬಾಕಿ ಉಳಿದಿವೆ 83 ಸಾವಿರ ಪ್ರಕರಣಗಳು

Congress-Symbol

AICC: ರಾಜ್ಯಕ್ಕೆ ಕಾಂಗ್ರೆಸ್‌ನಿಂದ ನಾಲ್ವರು ಕಾರ್ಯದರ್ಶಿಗಳ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-raaj

Gadag: ಪತಿಯನ್ನು ಹತ್ಯೆ ಮಾಡಿ ಅಪಘಾತದ ಕಥೆ ಸೃಷ್ಟಿಸಿದಳೆ ಪತ್ನಿ?

2-gadaga

Gadaga: ಬೆಳ್ಳಂಬೆಳಿಗ್ಗೆ ಅಪಘಾತ-ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಅರಸು ರಾಜ್ಯ ಕಂಡ ಮುತ್ಸದ್ಧಿ ರಾಜಕಾರಣಿ: ನಾಗೇಶ ಹುಬ್ಬಳ್ಳಿ

ಅರಸು ರಾಜ್ಯ ಕಂಡ ಮುತ್ಸದ್ಧಿ ರಾಜಕಾರಣಿ: ನಾಗೇಶ ಹುಬ್ಬಳ್ಳಿ

Gadag; ದೋಷಪೂರಿತ ನಂಬರ್ ಪ್ಲೇಟ್ ಅಳವಡಿಸಿದ್ದ ಟಂಟಂ, ಆಟೋ, ದ್ವಿಚಕ್ರ ವಾಹನ ಜಪ್ತಿ

Gadag; ದೋಷಪೂರಿತ ನಂಬರ್ ಪ್ಲೇಟ್ ಅಳವಡಿಸಿದ್ದ ಟಂಟಂ, ಆಟೋ, ದ್ವಿಚಕ್ರ ವಾಹನ ಜಪ್ತಿ

1-wwewqeq

Gadag: ಬಸ್ ಹರಿದು 31 ಕುರಿಗಳ ಸಾವು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Accident-Logo

Accident: ದುಬಾೖಯಲ್ಲಿ ಅಪಘಾತ: ಗೋಕಾಕದ ನಾಲ್ವರ ಸಾವು

Ravikumar

MUDAದಲ್ಲಿ ನಡೆದ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಎಂಎಲ್‌ಸಿ ರವಿಕುಮಾರ್‌

DK-Shiva-Kumar

By Election: ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ: ಡಿಸಿಎಂ ಡಿ.ಕೆ. ಶಿವಕುಮಾರ್‌ ಪುನರುಚ್ಚಾರ

Rastra-pathi-Bhavan

CM ಅಭಿಯೋಜನೆ: ರಾಷ್ಟ್ರಪತಿಗಳಿಗೆ ಕಾಂಗ್ರೆಸ್‌ ಮಾಡಿದ್ದ ಮನವಿಗೆ ಸ್ಪಂದನೆ

Parliment New

Waqf Act: ಜನರ ಸಲಹೆ ಸ್ವೀಕಾರಕ್ಕೆ ಜೆಪಿಸಿ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.